<p><strong>ಕೊಪ್ಪಳ</strong>: ರಾಜ್ಯದಲ್ಲಿ ಕೈಗಾ ನಂತರ ಮತ್ತೊಂದು ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಕೊಪ್ಪಳವೂ ಸೇರಿದಂತೆ ಉತ್ತರ ಕರ್ನಾಟಕದ ನಾಲ್ಕೈದು ಜಿಲ್ಲೆಗಳಲ್ಲಿ ಒಂದೇ ಕಡೆ 1,200 ಎಕರೆ ಭೂಮಿ ಗುರುತಿಸುವ ಕಾರ್ಯ ನಡೆಯುತ್ತಿದೆ. </p>.<p>ಕೊಪ್ಪಳ ಜಿಲ್ಲೆಯ ಬೇರೆ ಬೇರೆ ತಾಲ್ಲೂಕುಗಳಲ್ಲಿಯೂ ಭೂಮಿ ಗುರುತಿಸುವ ಕೆಲಸ ನಡೆಯುತ್ತಿದ್ದು, ಅದರಲ್ಲಿ ತಾಲ್ಲೂಕಿನ ಅರಸನಕೇರಿ ಹಾಗೂ ಸುತ್ತಮುತ್ತಲ ಪ್ರದೇಶವೂ ಒಂದಾಗಿದೆ.</p>.<p>ಈ ಕುರಿತು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಕೊಪ್ಪಳ ತಹಶೀಲ್ದಾರ್ಗೆ ಪತ್ರ ಬರೆದಿದ್ದು, ಅರಸನಕೇರಿ ಗ್ರಾಮದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಭೂಮಿ ಲಭ್ಯತೆ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ. ಆದರೆ, ಈ ಗ್ರಾಮದಲ್ಲಿ ಪಟ್ಟಾ ಹಾಗೂ ಸರ್ಕಾರಿ ಸೇರಿ ಒಟ್ಟು 615 ಎಕರೆ ಜಮೀನು ಮಾತ್ರ ಲಭ್ಯವಿದೆ.</p>.<p>ಅರಸನಕೇರಿ ಸಮೀಪದ ಕರಡಿಗುಡ್ಡ, ಅದಕ್ಕೆ ಹೊಂದಿಕೊಂಡಿರುವ ಹಾಗೂ ಜನವಸತಿ ಪ್ರದೇಶದಿಂದ ಕನಿಷ್ಠ ಮೂರು ಕಿ.ಮೀ. ದೂರದಲ್ಲಿ ಜಮೀನು ಗುರುತಿಸಿ ಎಂದೂ ಹೇಳಿದ್ದಾರೆ. ಭೂಮಿ ಗುರುತಿಸುವ ಕಾರ್ಯ ಇನ್ನೂ ಪ್ರಾಥಮಿಕ ಹಂತದಲ್ಲಿದ್ದು, ಜಿಲ್ಲಾಡಳಿತ ಈ ಸ್ಥಳ ವೀಕ್ಷಣೆ ಮಾಡಿರುವುದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.</p>.<p>ಅರಸನಕೇರಿ ಭಾಗದ ಮುಖಂಡರೂ ಆದ ವಿಧಾನಪರಿಷತ್ ಮಾಜಿ ಸದಸ್ಯ ಕರಿಯಣ್ಣ ಸಂಗಟಿ ಹಾಗೂ ರೈತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು, ‘ಕೊಪ್ಪಳ ತಾಲ್ಲೂಕಿನ ಇರಕಲ್ಲಗಡ ಹೋಬಳಿ ವ್ಯಾಪ್ತಿಯ ಅರಸನಕೇರಿ ಗ್ರಾಮದಲ್ಲಿ ಪರಮಾಣು ವಿದ್ಯುತ್ ಸ್ಥಾವರಕ್ಕೆ ಭೂಮಿ ಗುರುತಿಸುವುದಕ್ಕೆ ನಮ್ಮ ವಿರೋಧವಿದೆ. ಈ ಪ್ರದೇಶದಲ್ಲಿ ಸಾಕಷ್ಟು ಕರಡಿಗಳಿರುವ ಕಾರಣ ಕರಡಿ ಸಂರಕ್ಷಿತ ಧಾಮ ಎಂದು ಘೋಷಣೆ ಮಾಡಲಾಗುತ್ತಿದೆ. ಇಂಥ ಪ್ರದೇಶದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಏಕೆ ನಿರ್ಮಿಸಬೇಕು’ ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ರಾಜ್ಯದಲ್ಲಿ ಕೈಗಾ ನಂತರ ಮತ್ತೊಂದು ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಕೊಪ್ಪಳವೂ ಸೇರಿದಂತೆ ಉತ್ತರ ಕರ್ನಾಟಕದ ನಾಲ್ಕೈದು ಜಿಲ್ಲೆಗಳಲ್ಲಿ ಒಂದೇ ಕಡೆ 1,200 ಎಕರೆ ಭೂಮಿ ಗುರುತಿಸುವ ಕಾರ್ಯ ನಡೆಯುತ್ತಿದೆ. </p>.<p>ಕೊಪ್ಪಳ ಜಿಲ್ಲೆಯ ಬೇರೆ ಬೇರೆ ತಾಲ್ಲೂಕುಗಳಲ್ಲಿಯೂ ಭೂಮಿ ಗುರುತಿಸುವ ಕೆಲಸ ನಡೆಯುತ್ತಿದ್ದು, ಅದರಲ್ಲಿ ತಾಲ್ಲೂಕಿನ ಅರಸನಕೇರಿ ಹಾಗೂ ಸುತ್ತಮುತ್ತಲ ಪ್ರದೇಶವೂ ಒಂದಾಗಿದೆ.</p>.<p>ಈ ಕುರಿತು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಕೊಪ್ಪಳ ತಹಶೀಲ್ದಾರ್ಗೆ ಪತ್ರ ಬರೆದಿದ್ದು, ಅರಸನಕೇರಿ ಗ್ರಾಮದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಭೂಮಿ ಲಭ್ಯತೆ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ. ಆದರೆ, ಈ ಗ್ರಾಮದಲ್ಲಿ ಪಟ್ಟಾ ಹಾಗೂ ಸರ್ಕಾರಿ ಸೇರಿ ಒಟ್ಟು 615 ಎಕರೆ ಜಮೀನು ಮಾತ್ರ ಲಭ್ಯವಿದೆ.</p>.<p>ಅರಸನಕೇರಿ ಸಮೀಪದ ಕರಡಿಗುಡ್ಡ, ಅದಕ್ಕೆ ಹೊಂದಿಕೊಂಡಿರುವ ಹಾಗೂ ಜನವಸತಿ ಪ್ರದೇಶದಿಂದ ಕನಿಷ್ಠ ಮೂರು ಕಿ.ಮೀ. ದೂರದಲ್ಲಿ ಜಮೀನು ಗುರುತಿಸಿ ಎಂದೂ ಹೇಳಿದ್ದಾರೆ. ಭೂಮಿ ಗುರುತಿಸುವ ಕಾರ್ಯ ಇನ್ನೂ ಪ್ರಾಥಮಿಕ ಹಂತದಲ್ಲಿದ್ದು, ಜಿಲ್ಲಾಡಳಿತ ಈ ಸ್ಥಳ ವೀಕ್ಷಣೆ ಮಾಡಿರುವುದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.</p>.<p>ಅರಸನಕೇರಿ ಭಾಗದ ಮುಖಂಡರೂ ಆದ ವಿಧಾನಪರಿಷತ್ ಮಾಜಿ ಸದಸ್ಯ ಕರಿಯಣ್ಣ ಸಂಗಟಿ ಹಾಗೂ ರೈತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು, ‘ಕೊಪ್ಪಳ ತಾಲ್ಲೂಕಿನ ಇರಕಲ್ಲಗಡ ಹೋಬಳಿ ವ್ಯಾಪ್ತಿಯ ಅರಸನಕೇರಿ ಗ್ರಾಮದಲ್ಲಿ ಪರಮಾಣು ವಿದ್ಯುತ್ ಸ್ಥಾವರಕ್ಕೆ ಭೂಮಿ ಗುರುತಿಸುವುದಕ್ಕೆ ನಮ್ಮ ವಿರೋಧವಿದೆ. ಈ ಪ್ರದೇಶದಲ್ಲಿ ಸಾಕಷ್ಟು ಕರಡಿಗಳಿರುವ ಕಾರಣ ಕರಡಿ ಸಂರಕ್ಷಿತ ಧಾಮ ಎಂದು ಘೋಷಣೆ ಮಾಡಲಾಗುತ್ತಿದೆ. ಇಂಥ ಪ್ರದೇಶದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಏಕೆ ನಿರ್ಮಿಸಬೇಕು’ ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>