<p><strong>ಕೊಪ್ಪಳ</strong>: ‘ಸಾರ್ವಜನಿಕರ ಆಡಳಿತ ನಿಂತಿರುವುದೇ ಅಂಕಿ-ಅಂಶಗಳ ಆಧಾರದ ಮೇಲೆ, ಆದ್ದರಿಂದ ಅಂಕಿ ಸಂಖ್ಯೆಗಳ ಹೊಂದಾಣಿಕೆಯೇ ವ್ಯವಸ್ಥಿತವಾದ ಆಡಳಿತ‘ ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಹೇಳಿದ್ದಾರೆ.</p>.<p>ನಗರದ ಜಿಲ್ಲಾ ಪಂಚಾಯಿತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಸೋಮವಾರ ಬೆಂಗಳೂರಿನ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ಹಾಗೂ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಾರ್ಯಾಲಯದಿಂದ ನಡೆದ ಸಂಖ್ಯಾ ಶಾಸ್ತ್ರಜ್ಞ ಪ್ರೊ.ಪಿ.ಸಿ.ಮಹಾಲನೋಬಿಸ್ ಅವರ ಜನ್ಮ ದಿನಾಚರಣೆ ಹಾಗೂ 14ನೇ ಸಾಂಖ್ಯಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಮಸ್ಯೆಗಳನ್ನು ಗುರುತಿಸಲು ಅಂಕಿ ಸಂಖ್ಯೆಗಳು ಅತ್ಯವಶ್ಯಕವಾಗಿವೆ. ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಯೋಜನೆಗಳನ್ನು ನಿಯಂತ್ರಣ ಮಾಡಬೇಕಾದರೆ ಅಂಕಿ ಅಂಶಗಳು ಮುಖ್ಯವಾಗುತ್ತವೆ. ಅದರ ಜೊತೆಗೆ ವ್ಯಕ್ತಿಯ ಜೀವನವು ಸಹ ಪ್ರತಿಷ್ಠೆಯಲ್ಲಿ ಇರಬೇಕು ಎಂದರೆ ಅಂಕಿ ಸಂಖ್ಯೆಗಳ ಪಾತ್ರ ಮಹತ್ವವಾಗಿದೆ ಎಂದರು.</p>.<p>ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಪ್ರಭುರಾಜ್ ನಾಯ್ಕ ಅವರು, ತಂತ್ರಜ್ಞಾನದಲ್ಲಿ ಅಂಕಿ ಅಂಶಗಳು ಪ್ರಾಬಲ್ಯ ಹೊಂದಿವೆ.ಸರ್ಕಾರದ ಎಲ್ಲಾ ಇಲಾಖೆಗಳು ನಿಖರವಾಗಿ ಅಂಕಿ-ಅಂಶಗಳನ್ನು ಕೊಟ್ಟಾಗ ಮಾತ್ರ ಪ್ರಗತಿ ಸಾಧ್ಯವಾಗುತ್ತದೆ ಎಂದರು.</p>.<p>ಸದ್ಯ ಜಾಗತಿಕತೆಯಲ್ಲಿ ಉದ್ಭವವಾಗುತ್ತಿರುವ ಸಮಸ್ಯೆಗಳನ್ನು ಮನಗಂಡು 2030ರ ಒಳಗಾಗಿ ಸುಸ್ಥಿರ ಅಭಿವೃದ್ಧಿ-3 ಮತ್ತು 5 ಗುರಿಯಲ್ಲಿ ವಿನೂತನ ಬದಲಾವಣೆ ಮಾಡುವಲ್ಲಿ ಪಣತೊಟ್ಟಿದೆ. ಸುಸ್ಥಿರ ಅಭಿವೃದ್ದಿ-3 ರಲ್ಲಿ ನೀರು, ಗಾಳಿ, ಮಣ್ಣು, ರಾಸಾಯನಿಕ ವಸ್ತುಗಳಿಂದ ಆಗುವ ಅನಾಹುತಗಳನ್ನು ತಡೆಗಟ್ಟಬೇಕು. ಸುಸ್ಥಿರ ಅಭಿವೃದ್ಧಿ-5 ರಲ್ಲಿ ಮಹಿಳಾ ಮತ್ತು ಮಕ್ಕಳ ಅಸಮಾನತೆ ತಡೆಗಟ್ಟಬೇಕು, ರಾಜಕೀಯ, ಸಾಮಾಜಿಕವಾಗಿ ಸಮಾನತೆ ನೀಡಬೇಕು. ಹೆಣ್ಣುಮಕ್ಕಳ ಮೇಲೆ ನಡೆಯುವ ಶೋಷಣೆ, ಬಾಲ್ಯವಿವಾಹ, ಹಿಂಸಾಚಾರ ತಡೆಯಬೇಕು. ಸಮಾನತೆ ಹಕ್ಕನ್ನು ಒದಗಿಸಬೇಕು ಎಂಬುದು ಮುಖ್ಯ ಉದ್ದೇಶವಾಗಿದೆ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಆರ್. ರಾಮಮೂರ್ತಿ ಮಾತನಾಡಿದರು.</p>.<p>ಸಾಂಖ್ಯಿಕ ದಿನಾಚರಣೆಯ ನಿಮಿತ್ತ ಹಾಜರಾದ ಎಲ್ಲಾ ಸಿಬ್ಬಂದಿಗೆ ಉಪವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ಪ್ರಮಾಣ ವಚನ ಬೋಧಿಸಿದರು.</p>.<p>ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಕೆ.ಅಕ್ಕಮಹಾದೇವಿ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟ ಅಧಿಕಾರಿಗಳು ಇದ್ದರು.</p>.<p>ಸರೋಜಾ ಮತ್ತು ಕಾಮಾಕ್ಷಿ ಪ್ರಾರ್ಥಿಸಿದರು. ಸಹಾಯ ಸಾಂಖ್ಯಿಕ ಅಧಿಕಾರಿ ಹುಲಗಪ್ಪ ಬಾವುಟೆ ಸ್ವಾಗತಿಸಿದರು.ಸಹಾಯಕ ಸಾಂಖ್ಯಿಕ ಅಧಿಕಾರಿ ಬಸವರಾಜ ಮಾರನಬಸರಿ ನಿರೂಪಿಸಿದರು. ಆರ್.ಎಚ್.ನದಾಫ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ‘ಸಾರ್ವಜನಿಕರ ಆಡಳಿತ ನಿಂತಿರುವುದೇ ಅಂಕಿ-ಅಂಶಗಳ ಆಧಾರದ ಮೇಲೆ, ಆದ್ದರಿಂದ ಅಂಕಿ ಸಂಖ್ಯೆಗಳ ಹೊಂದಾಣಿಕೆಯೇ ವ್ಯವಸ್ಥಿತವಾದ ಆಡಳಿತ‘ ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಹೇಳಿದ್ದಾರೆ.</p>.<p>ನಗರದ ಜಿಲ್ಲಾ ಪಂಚಾಯಿತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಸೋಮವಾರ ಬೆಂಗಳೂರಿನ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ಹಾಗೂ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಾರ್ಯಾಲಯದಿಂದ ನಡೆದ ಸಂಖ್ಯಾ ಶಾಸ್ತ್ರಜ್ಞ ಪ್ರೊ.ಪಿ.ಸಿ.ಮಹಾಲನೋಬಿಸ್ ಅವರ ಜನ್ಮ ದಿನಾಚರಣೆ ಹಾಗೂ 14ನೇ ಸಾಂಖ್ಯಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಮಸ್ಯೆಗಳನ್ನು ಗುರುತಿಸಲು ಅಂಕಿ ಸಂಖ್ಯೆಗಳು ಅತ್ಯವಶ್ಯಕವಾಗಿವೆ. ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಯೋಜನೆಗಳನ್ನು ನಿಯಂತ್ರಣ ಮಾಡಬೇಕಾದರೆ ಅಂಕಿ ಅಂಶಗಳು ಮುಖ್ಯವಾಗುತ್ತವೆ. ಅದರ ಜೊತೆಗೆ ವ್ಯಕ್ತಿಯ ಜೀವನವು ಸಹ ಪ್ರತಿಷ್ಠೆಯಲ್ಲಿ ಇರಬೇಕು ಎಂದರೆ ಅಂಕಿ ಸಂಖ್ಯೆಗಳ ಪಾತ್ರ ಮಹತ್ವವಾಗಿದೆ ಎಂದರು.</p>.<p>ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಪ್ರಭುರಾಜ್ ನಾಯ್ಕ ಅವರು, ತಂತ್ರಜ್ಞಾನದಲ್ಲಿ ಅಂಕಿ ಅಂಶಗಳು ಪ್ರಾಬಲ್ಯ ಹೊಂದಿವೆ.ಸರ್ಕಾರದ ಎಲ್ಲಾ ಇಲಾಖೆಗಳು ನಿಖರವಾಗಿ ಅಂಕಿ-ಅಂಶಗಳನ್ನು ಕೊಟ್ಟಾಗ ಮಾತ್ರ ಪ್ರಗತಿ ಸಾಧ್ಯವಾಗುತ್ತದೆ ಎಂದರು.</p>.<p>ಸದ್ಯ ಜಾಗತಿಕತೆಯಲ್ಲಿ ಉದ್ಭವವಾಗುತ್ತಿರುವ ಸಮಸ್ಯೆಗಳನ್ನು ಮನಗಂಡು 2030ರ ಒಳಗಾಗಿ ಸುಸ್ಥಿರ ಅಭಿವೃದ್ಧಿ-3 ಮತ್ತು 5 ಗುರಿಯಲ್ಲಿ ವಿನೂತನ ಬದಲಾವಣೆ ಮಾಡುವಲ್ಲಿ ಪಣತೊಟ್ಟಿದೆ. ಸುಸ್ಥಿರ ಅಭಿವೃದ್ದಿ-3 ರಲ್ಲಿ ನೀರು, ಗಾಳಿ, ಮಣ್ಣು, ರಾಸಾಯನಿಕ ವಸ್ತುಗಳಿಂದ ಆಗುವ ಅನಾಹುತಗಳನ್ನು ತಡೆಗಟ್ಟಬೇಕು. ಸುಸ್ಥಿರ ಅಭಿವೃದ್ಧಿ-5 ರಲ್ಲಿ ಮಹಿಳಾ ಮತ್ತು ಮಕ್ಕಳ ಅಸಮಾನತೆ ತಡೆಗಟ್ಟಬೇಕು, ರಾಜಕೀಯ, ಸಾಮಾಜಿಕವಾಗಿ ಸಮಾನತೆ ನೀಡಬೇಕು. ಹೆಣ್ಣುಮಕ್ಕಳ ಮೇಲೆ ನಡೆಯುವ ಶೋಷಣೆ, ಬಾಲ್ಯವಿವಾಹ, ಹಿಂಸಾಚಾರ ತಡೆಯಬೇಕು. ಸಮಾನತೆ ಹಕ್ಕನ್ನು ಒದಗಿಸಬೇಕು ಎಂಬುದು ಮುಖ್ಯ ಉದ್ದೇಶವಾಗಿದೆ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಆರ್. ರಾಮಮೂರ್ತಿ ಮಾತನಾಡಿದರು.</p>.<p>ಸಾಂಖ್ಯಿಕ ದಿನಾಚರಣೆಯ ನಿಮಿತ್ತ ಹಾಜರಾದ ಎಲ್ಲಾ ಸಿಬ್ಬಂದಿಗೆ ಉಪವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ಪ್ರಮಾಣ ವಚನ ಬೋಧಿಸಿದರು.</p>.<p>ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಕೆ.ಅಕ್ಕಮಹಾದೇವಿ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟ ಅಧಿಕಾರಿಗಳು ಇದ್ದರು.</p>.<p>ಸರೋಜಾ ಮತ್ತು ಕಾಮಾಕ್ಷಿ ಪ್ರಾರ್ಥಿಸಿದರು. ಸಹಾಯ ಸಾಂಖ್ಯಿಕ ಅಧಿಕಾರಿ ಹುಲಗಪ್ಪ ಬಾವುಟೆ ಸ್ವಾಗತಿಸಿದರು.ಸಹಾಯಕ ಸಾಂಖ್ಯಿಕ ಅಧಿಕಾರಿ ಬಸವರಾಜ ಮಾರನಬಸರಿ ನಿರೂಪಿಸಿದರು. ಆರ್.ಎಚ್.ನದಾಫ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>