<p><strong>ಯಲಬುರ್ಗಾ:</strong> ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಬೆಳೆದಿರುವ ಹೆಸರು ಮತ್ತು ಶೇಂಗಾ ಬೆಳೆಗೆ ಹಸಿರು ಎಲೆ ರೋಗ ಹಾಗೂ ಇನ್ನಿತರ ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೃಷಿ ವಿಜ್ಞಾನಿಗಳು ಭೇಟಿ ನೀಡಿ ನಿಯಂತ್ರಣ ಕ್ರಮಗಳನ್ನು ಅನುಸರಿಸುವಂತೆ ರೈತರಿಗೆ ಸಲಹೆ ನೀಡಿದ್ದಾರೆ.</p>.<p>ತಾಲ್ಲೂಕಿನ ಬಂಡಿಹಾಳ, ತೊಂಡಿಹಾಳ, ಕುಕನೂರು ತಾಲ್ಲೂಕಿನ ಯರೇಹಂಚಿನಾಳ, ಸೋಂಪುರ, ಮನ್ನಾಪುರ ಸೇರಿ ಅನೇಕ ಗ್ರಾಮಗಳಿಗೆ ಭೇಟಿ ನೀಡಿದ ಕೃಷಿ ವಿಜ್ಞಾನಿಗಳು, ರೋಗ ಹರಡುವಿಕೆ ಬಗ್ಗೆ ಪರಿಶೀಲಿಸಿದರು.</p>.<p>ಬೆಳೆಗಳು ಪೋಷಕಾಂಶಗಳ ಕೊರತೆಯಿಂದಾಗಿ ಕಾಯಿಲೆಗೆ ತುತ್ತಾಗುತ್ತಿವೆ. ಸೂಕ್ತ ಉಪಚಾರದಿಂದ ರೋಗ ನಿಯಂತ್ರಿಸಲು ಸಾಧ್ಯವಿದೆ. ತ್ವರಿತವಾಗಿ ರೈತರು ನಿಗದಿತ ಪ್ರಮಾಣದಲ್ಲಿ ಕೀಟನಾಶಕ ಸಿಂಪಡಿಸಬೇಕು ಎಂದು ವಿಜ್ಞಾನಿಗಳು ಸಲಹೆ ನೀಡಿದರು.</p>.<p>ಒಂದು ಲೀಟರ್ ನೀರಿಗೆ 0.2 ಗ್ರಾಂ ಇಮಾಮೆಟ್ಟಿನ ಬೆಂಜೋಯೇಟ್ ಅಥವಾ 0.5 ಮಿಲಿಲ್ಯಾಮಮಡಾ ಸೈಲೂಥೀತ್ರಿ ಬೆರೆಸಿ ಸಿಂಪಡಿಸುವ ಮೂಲಕ ಕೀಟಬಾಧೆ ನಿಯಂತ್ರಣಕ್ಕೆ ತರಬಹುದು. ಹಾಗೆಯೇ ಲಘು ಪೋಷಕಾಂಶಗಳ ಕೊರತೆ ನೀಗಿಸಲು ಕಬ್ಬಿಣದ ಸಲ್ಪೇಟ್ 1 ಕೆ.ಜಿ. ಮತ್ತು 19.19.19 ಪ್ರತಿ ಎಕರೆಗೆ 1 ಕೆ.ಜಿ. ಯಷ್ಟು ಮೇಲುಗೊಬ್ಬರವಾಗಿ ಶೇಂಗಾ ಮತ್ತು ಹೆಸರು ಬೆಳೆಗೆ ಕೊಡಬೇಕು ಎಂದರು.</p>.<p>ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಜ್ಞಾನಿ ನಾಗೇಶ ಬಸಪ್ಪ ಜನೆಕಲ್, ವಿಜ್ಞಾನಿ ಪ್ರದೀಪ್ ಬಿರಾದಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ:</strong> ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಬೆಳೆದಿರುವ ಹೆಸರು ಮತ್ತು ಶೇಂಗಾ ಬೆಳೆಗೆ ಹಸಿರು ಎಲೆ ರೋಗ ಹಾಗೂ ಇನ್ನಿತರ ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೃಷಿ ವಿಜ್ಞಾನಿಗಳು ಭೇಟಿ ನೀಡಿ ನಿಯಂತ್ರಣ ಕ್ರಮಗಳನ್ನು ಅನುಸರಿಸುವಂತೆ ರೈತರಿಗೆ ಸಲಹೆ ನೀಡಿದ್ದಾರೆ.</p>.<p>ತಾಲ್ಲೂಕಿನ ಬಂಡಿಹಾಳ, ತೊಂಡಿಹಾಳ, ಕುಕನೂರು ತಾಲ್ಲೂಕಿನ ಯರೇಹಂಚಿನಾಳ, ಸೋಂಪುರ, ಮನ್ನಾಪುರ ಸೇರಿ ಅನೇಕ ಗ್ರಾಮಗಳಿಗೆ ಭೇಟಿ ನೀಡಿದ ಕೃಷಿ ವಿಜ್ಞಾನಿಗಳು, ರೋಗ ಹರಡುವಿಕೆ ಬಗ್ಗೆ ಪರಿಶೀಲಿಸಿದರು.</p>.<p>ಬೆಳೆಗಳು ಪೋಷಕಾಂಶಗಳ ಕೊರತೆಯಿಂದಾಗಿ ಕಾಯಿಲೆಗೆ ತುತ್ತಾಗುತ್ತಿವೆ. ಸೂಕ್ತ ಉಪಚಾರದಿಂದ ರೋಗ ನಿಯಂತ್ರಿಸಲು ಸಾಧ್ಯವಿದೆ. ತ್ವರಿತವಾಗಿ ರೈತರು ನಿಗದಿತ ಪ್ರಮಾಣದಲ್ಲಿ ಕೀಟನಾಶಕ ಸಿಂಪಡಿಸಬೇಕು ಎಂದು ವಿಜ್ಞಾನಿಗಳು ಸಲಹೆ ನೀಡಿದರು.</p>.<p>ಒಂದು ಲೀಟರ್ ನೀರಿಗೆ 0.2 ಗ್ರಾಂ ಇಮಾಮೆಟ್ಟಿನ ಬೆಂಜೋಯೇಟ್ ಅಥವಾ 0.5 ಮಿಲಿಲ್ಯಾಮಮಡಾ ಸೈಲೂಥೀತ್ರಿ ಬೆರೆಸಿ ಸಿಂಪಡಿಸುವ ಮೂಲಕ ಕೀಟಬಾಧೆ ನಿಯಂತ್ರಣಕ್ಕೆ ತರಬಹುದು. ಹಾಗೆಯೇ ಲಘು ಪೋಷಕಾಂಶಗಳ ಕೊರತೆ ನೀಗಿಸಲು ಕಬ್ಬಿಣದ ಸಲ್ಪೇಟ್ 1 ಕೆ.ಜಿ. ಮತ್ತು 19.19.19 ಪ್ರತಿ ಎಕರೆಗೆ 1 ಕೆ.ಜಿ. ಯಷ್ಟು ಮೇಲುಗೊಬ್ಬರವಾಗಿ ಶೇಂಗಾ ಮತ್ತು ಹೆಸರು ಬೆಳೆಗೆ ಕೊಡಬೇಕು ಎಂದರು.</p>.<p>ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಜ್ಞಾನಿ ನಾಗೇಶ ಬಸಪ್ಪ ಜನೆಕಲ್, ವಿಜ್ಞಾನಿ ಪ್ರದೀಪ್ ಬಿರಾದಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>