ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪೌಷ್ಟಿಕ ಆಹಾರ ಸೇವನೆ ಅಗತ್ಯ’

Last Updated 4 ಜನವರಿ 2021, 12:24 IST
ಅಕ್ಷರ ಗಾತ್ರ

ಗಂಗಾವತಿ: ‘ಪೌಷ್ಟಿಕ ಆಹಾರ ಸೇವನೆಯಿಂದ ಸದೃಢ ಆರೋಗ್ಯ ಪಡೆಯಬಹುದು’ ಎಂದು ಅಂಗನವಾಡಿ ಕಾರ್ಯಕರ್ತೆ ಕವಿತಾ ಡೊಳ್ಳಿನ್ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಕೃಷ್ಣಾಪುರ ಡಗ್ಗಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ‌ ನಡೆದ ಸೀಮಂತ ಹಾಗೂ ಅನ್ನ ಪ್ರಾಶನ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಕೊರೊನಾ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಕ್ಕಳಿಗೆ, ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ವಿತರಿಸಿದೆ’ ಎಂದು ತಿಳಿಸಿದರು.

ಬಾಲ ವಿಕಾಸ ಸಮಿತಿ ಅಧ್ಯಕ್ಷೆ‌ ಅಂಬೇಶ್ವರಿ,‌ ಆಶಾಕಾರ್ಯಕರ್ತೆ ಸುಚಿತ್ರ ಹಾಗೂ ಸಹಾಯಕಿ ಹೊಳಿಯಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT