ಗಂಗಾವತಿ: ತಾಲ್ಲೂಕಿನ ಹಳೇನಾಗರಳ್ಳಿ ಗ್ರಾಮದ ಬಳಿಯ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 2 ಟ್ರ್ಯಾಕ್ಟರ್ಗಳನ್ನು ಕಂದಾಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿದ್ದಾರೆ.
ಅನುಮತಿ ಇಲ್ಲದೆ ನದಿಯಿಂದ ಮರುಳು ಸಾಗಾಟ ಮಾಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಯು.ನಾಗರಾಜ್ ದಾಳಿ ನಡೆಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಕಂದಾಯ ನೀರಿಕ್ಷಕ ಮಂಜುನಾಥ ಹಿರೇಮಠ, ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ ನೇತೃತ್ವದ ತಂಡ ನದಿ ಭಾಗದಲ್ಲಿ ದಾಳಿ ನಡೆಸಿ, ಟ್ರ್ಯಾಕ್ಟರ್ಗಳನ್ನು ವಶಪಡಿಸಿಕೊಂಡು ಗಂಗಾವತಿ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾರೆ.