ತಾಲ್ಲೂಕಿನ ಓಜನಳ್ಳಿ ಗ್ರಾಮದಲ್ಲಿ ಭಾನುವಾರ ಕಿತ್ತೂರು ಚನ್ನಮ್ಮ ಪುತ್ಥಳಿ ಅನಾವರಣ ಹಾಗೂ ಸರ್ವಧರ್ಮ ಸಮಾಜದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ ‘ಸಮಾಜಕ್ಕೆ ಮೀಸಲಾತಿ ನೀಡದಿದ್ದರೆ ಅದರ ಪರಿಣಾಮ ಗಂಭೀರವಾಗಿ ಎದುರಿಸಬೇಕಾಗುತ್ತದೆ. ಈಗ ಚುನಾವಣೆಯ ಕಾವು ಇದ್ದು, ನಮ್ಮ ಸಮಾಜಕ್ಕೆ ನೀವು ಗಟ್ಟಿಯಾಗಿ ನಿಂತರೆ ಮಾತ್ರ ನಾವು ನಿಮ್ಮೊಂದಿಗೆ ಇರುತ್ತೇವೆ. ವಿರೋಧ ಪಕ್ಷದವರು ಕೂಡ ಅಡ್ಡಗೋಡೆಯ ಮೇಲೆ ದೀಪವಿಟ್ಟಿದ್ದಾರೆ. ಮೀಸಲಾತಿ ವಿಷಯವನ್ನು ಪ್ರಣಾಳಿಕೆಯಲ್ಲಿ ಸೇರಿಸಬೇಕು’ ಎಂದು ಒತ್ತಾಯಿಸಿದರು.