ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುನಿರಾಬಾದ್‌ನಲ್ಲಿ ಅಪಘಾತ: ಬೈಕ್‌ ಸವಾರ ಸಾವು

Last Updated 24 ಆಗಸ್ಟ್ 2020, 3:03 IST
ಅಕ್ಷರ ಗಾತ್ರ

ಮುನಿರಾಬಾದ್: ಇಲ್ಲಿನ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ (50)ರ ಶಹಾಪುರ ಗ್ರಾಮದ ಬಳಿ ಶನಿವಾರ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೆರೆಹಳ್ಳಿ ಗ್ರಾಮದ ಮಲ್ಲಪ್ಪ ಬೆಟದಪ್ಪ ಡೊಳ್ಳಿ (25) ಮೃತರು.

ಮಲ್ಲಪ್ಪ ಕೆರೆಹಳ್ಳಿ ಗ್ರಾಮದಿಂದ ಹೊಸಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದರು. ಹಿಂದಿನಿಂದ ಬಂದ ಕಚ್ಚಾ ತಂಬಾಕು ಸಾಗಿಸುತ್ತಿದ್ದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು, ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಬಿದ್ದಿದೆ.

ಲಾರಿ ಅಡಿ ಸಿಲುಕಿದ ಮಲ್ಲಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಸಂಬಂಧ ಮುನಿರಾಬಾದ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಬ್ ಇನ್‌ಸ್ಪೆಕ್ಟರ್‌ ಸುಪ್ರೀತ್ ಪಾಟೀಲ, ಗ್ರಾಮೀಣ ಸಿಪಿಐ ರವಿ ಉಕ್ಕುಂದ ಸ್ಥಳಕ್ಕೆ ಭೇಟಿ ನೀಡಿದರು. ಪರಾರಿಯಾಗುತ್ತಿದ್ದ ಲಾರಿ ಚಾಲಕನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT