ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ವಿತರಿಸಲಾಗಿರುವ ಅಂತ್ಯೋದಯ, ಆದ್ಯತಾ (ಬಿಪಿಎಲ್) ಹಾಗೂ ಎ.ಪಿ.ಎಲ್ ಪಡಿತರ ಚೀಟಿಗಳಲ್ಲಿ ಸೇರ್ಪಡೆಗೊಂಡಿರುವ ಪಡಿತರ ಕುಟುಂಬಗಳ ಪ್ರತಿಯೊಬ್ಬ ಸದಸ್ಯರ ಬಯೊಮೆಟ್ರಿಕ್ ಗುರುತಿನ ಮರು ನೋಂದಣಿ ಕಾರ್ಯವನ್ನು (ಇ-ಕೆವೈಸಿ) ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಾರಂಭಿಸಲಾಗಿತ್ತು.ಪಡಿತರದಾರರು ಈಗಾಗಲೇ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಅಡಿ ನೋಂದಾಯಿಸಿಕೊಂಡಿರುತ್ತಾರೆ. ಈ ಮರುನೋಂದಣಿ ಕಾರ್ಯವನ್ನು ಕಾರಣಾಂತರದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.