<p><strong>ಯಲಬುರ್ಗಾ: (ಕೊಪ್ಪಳ ಜಿಲ್ಲೆ):</strong> ಸಮೀಪದ ಗುನ್ನಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಎತ್ತಿನೊಂದಿಗೆ ಹೊಲಕ್ಕೆ ತೆರಳುತ್ತಿದ್ದ ಇಬ್ಬರು ರೈತರು ಹಾಗೂ ಎತ್ತಿನ ಮೇಲೆ ಓಮಿನಿ ವಾಹನ ಹರಿದು ಸ್ಥಳದಲ್ಲಿಯೇ ಮೃತರಾಗಿದ್ದಾರೆ.</p>.<p>ಕೃಷಿ ಕಾರ್ಯಕ್ಕೆ ಹೊಲಕ್ಕೆ ತೆರಳುತ್ತಿದ್ದಾಗ ವಿಜಯಪುರದಿಂದ ವೇಗವಾಗಿ ಬರುತ್ತಿದ್ದ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತರಾಗಿದ್ದು, ಗಾಯಗೊಂಡಿದ್ದ ಎತ್ತು ಕೂಡಾ ಮೃತವಾಗಿದೆ.</p>.<p>ಮೃತ ರೈತರನ್ನು ಗುನ್ನಾಳ ಗ್ರಾಮದ ರಾಮಣ್ಣ ಬಸಪ್ಪ ಸೂಳೇಕೇರಿ (45) ಹಾಗೂ ಹೊಳೆಯಪ್ಪ ಹನಮಂತಪ್ಪ ತಳವಾರ (50) ಎಂದು ಗುರುತಿಸಲಾಗಿದೆ.</p>.<p>ಕೋಳಿಹಾಳ-ಗುನ್ನಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ರಸ್ತೆ ಮಧ್ಯೆ ದಾಟುತ್ತಿರುವ ಸಂದರ್ಭದಲ್ಲಿ ರಸ್ತೆ ಮಧ್ಯೆ ಹೋಗುತ್ತಿದ್ದ ಸ ಸಂದರ್ಭದಲ್ಲಿ ವಿಜಯಪುರದಿಂದ ಕೋಲಾರ ಜಿಲ್ಲೆಯ ಮುಳುಬಾಗಿಲಿಗೆ ಹೋಗುತ್ತಿದ್ದ ವಾಹನ ಡಿಕ್ಕಿ ಹೊಡೆದಿದೆ.</p>.<p>ಸ್ಥಳಕ್ಕೆ ಡಿವೈಎಸ್ಪಿ ಗೀತಾ ಬೇನಾಳ, ಸಿಪಿಐ ಎಂ.ನಾಗರೆಡ್ಡಿ, ಪಿಎಸ್ಐ ಶೀಲಾ ಮೂಗನೂರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೇವೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ: (ಕೊಪ್ಪಳ ಜಿಲ್ಲೆ):</strong> ಸಮೀಪದ ಗುನ್ನಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಎತ್ತಿನೊಂದಿಗೆ ಹೊಲಕ್ಕೆ ತೆರಳುತ್ತಿದ್ದ ಇಬ್ಬರು ರೈತರು ಹಾಗೂ ಎತ್ತಿನ ಮೇಲೆ ಓಮಿನಿ ವಾಹನ ಹರಿದು ಸ್ಥಳದಲ್ಲಿಯೇ ಮೃತರಾಗಿದ್ದಾರೆ.</p>.<p>ಕೃಷಿ ಕಾರ್ಯಕ್ಕೆ ಹೊಲಕ್ಕೆ ತೆರಳುತ್ತಿದ್ದಾಗ ವಿಜಯಪುರದಿಂದ ವೇಗವಾಗಿ ಬರುತ್ತಿದ್ದ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತರಾಗಿದ್ದು, ಗಾಯಗೊಂಡಿದ್ದ ಎತ್ತು ಕೂಡಾ ಮೃತವಾಗಿದೆ.</p>.<p>ಮೃತ ರೈತರನ್ನು ಗುನ್ನಾಳ ಗ್ರಾಮದ ರಾಮಣ್ಣ ಬಸಪ್ಪ ಸೂಳೇಕೇರಿ (45) ಹಾಗೂ ಹೊಳೆಯಪ್ಪ ಹನಮಂತಪ್ಪ ತಳವಾರ (50) ಎಂದು ಗುರುತಿಸಲಾಗಿದೆ.</p>.<p>ಕೋಳಿಹಾಳ-ಗುನ್ನಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ರಸ್ತೆ ಮಧ್ಯೆ ದಾಟುತ್ತಿರುವ ಸಂದರ್ಭದಲ್ಲಿ ರಸ್ತೆ ಮಧ್ಯೆ ಹೋಗುತ್ತಿದ್ದ ಸ ಸಂದರ್ಭದಲ್ಲಿ ವಿಜಯಪುರದಿಂದ ಕೋಲಾರ ಜಿಲ್ಲೆಯ ಮುಳುಬಾಗಿಲಿಗೆ ಹೋಗುತ್ತಿದ್ದ ವಾಹನ ಡಿಕ್ಕಿ ಹೊಡೆದಿದೆ.</p>.<p>ಸ್ಥಳಕ್ಕೆ ಡಿವೈಎಸ್ಪಿ ಗೀತಾ ಬೇನಾಳ, ಸಿಪಿಐ ಎಂ.ನಾಗರೆಡ್ಡಿ, ಪಿಎಸ್ಐ ಶೀಲಾ ಮೂಗನೂರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೇವೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>