ಗಂಗಾವತಿ: ಕೊಪ್ಪಳ ಜಿಲ್ಲೆಯ ಕುಷ್ಟಗಿ, ಯಲಬುರ್ಗಾ, ಕನಕಗಿರಿ, ಕೊಪ್ಪಳ, ಗದಗ ಜಿಲ್ಲೆಯ ಗಜೇಂದ್ರಗಡ, ರೋಣ, ಬಾಗಲಕೋಟೆ ಜಿಲ್ಲೆಯ ಹನಗುಂದ, ಇರಕಲ್ಗಡ ತಾಲ್ಲೂಕು ಭಾಗವನ್ನ ನೀರಾವರಿ ಮಾಡಬೇಕು ಎಂದು ಒತ್ತಾಯಿಸಿ ಕುಷ್ಟಗಿ ತಾಲ್ಲೂಕಿನ ಯಲಬುಣಚಿ ಗ್ರಾಮದ ರೈತರು ಬುಧವಾರ ಅಂಜನಾದ್ರಿ ಬೆಟ್ಟದಿಂದ ನವದೆಹಲಿ ಸಂಸತ್ ಭವನಕ್ಕೆ ಪಾದಯಾತ್ರೆ ಆರಂಭಿಸಿದರು.