<p><strong>ಕೊಪ್ಪಳ:</strong> ಜಿಲ್ಲೆಯಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿದ ಮಳೆ ಹಾಗೂ ಗಾಳೆಯಿಂದಾಗಿ ಭತ್ತದ ಬೆಳೆಗೆ ಹಾನಿಯಾಗಿದ್ದು, ಇದರಿಂದ ಮನನೊಂದು ಕೊಪ್ಪಳ ತಾಲ್ಲೂಕಿನ ಬಸಾಪುರ ಗ್ರಾಮದ ರೈತ ಲಕ್ಷ್ಮಣ ರಾಜರಾಮಪೇಟೆ ಕ್ರಿಮಿನಾಶಕ ಸೇವಿಸಲು ಮುಂದಾಗಿದ್ದ ಘಟನೆ ಶುಕ್ರವಾರ ನಡೆದಿದೆ.</p>.ಕೊಪ್ಪಳ | ‘ಅಲೆಮಾರಿ ವ್ಯಾಪಾರಿ’ಗಳಿಗೆ ಹಬ್ಬ ಆಚರಿಸದಿದ್ದರೂ ಭರಪೂರ ಖುಷಿ!.<p>ಅಕ್ಕಪಕ್ಕದಲ್ಲಿದ್ದರು ರೈತನನ್ನು ತಡೆದು ಸಮಾಧಾನ ಪಡಿಸಿದ್ದಾರೆ. ಲಕ್ಷ್ಮಣ ಎಂಟು ಎಕರೆಯಲ್ಲಿ ಭತ್ತ ಬೆಳೆದಿದ್ದರು.</p><p>ನಿರಂತರ ಮಳೆಯಿಂದಾಗಿ ಕೊಪ್ಪಳ ತಾಲ್ಲೂಕಿನ ಹಿಟ್ನಾಳ, ಹುಲಿಗಿ, ಅಗಳಕೇರಾ, ಬಂಡಿಹರ್ಲಾಪುರ, ಬಸಾಪುರ ಸೇರಿದಂತೆ ಅನೇಕ ಕಡೆ ಭತ್ತದ ಬೆಳೆಗೆ ಹಾನಿಯಾಗಿದೆ. ಗಂಗಾವತಿ ಮತ್ತು ಕಾರಟಗಿ ತಾಲ್ಲೂಕಿನಲ್ಲಿಯೂ ಭತ್ತ ನೆಲಕ್ಕೊರಗಿದೆ. ಗುರುವಾರ ರಾತ್ರಿ ಹಾಗೂ ಶುಕ್ರವಾರ ಬೆಳಿಗ್ಗೆಯಿಂದ ಸಂಜೆ ತನಕ ಮಳೆ ಸುರಿದಿದ್ದು ದೈನಂದಿನ ಚಟುವಟಿಕೆ ಮೇಲೂ ಪರಿಣಾಮ ಬೀರಿತು.</p>.ಕೊಪ್ಪಳ | ಗಾಳಿಪಟ ಉತ್ಸವ; ಜನತೆಯ ಸಂಭ್ರಮ .<p>‘ಗಾಳಿ ಹಾಗೂ ಮಳೆಯಿಂದಾಗಿ ಜಿಲ್ಲೆಯ ಕೆಲವು ಕಡೆ ಭತ್ತದ ಬೆಳೆಗೆ ಹಾನಿಯಾಗಿದ್ದು ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಳೆ ಪೂರ್ಣವಾಗಿ ನಿಂತ ಬಳಿಕ ಹಾನಿ ಪ್ರಮಾಣ ಗೊತ್ತಾಗಲಿದೆ’ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್. ತಿಳಿಸಿದರು.</p> .ಕೊಪ್ಪಳ: ‘ಸಹಬಾಳ್ವೆಗೆ ಭಾರತ ಜಗತ್ತಿಗೆ ಮಾದರಿ’.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ಜಿಲ್ಲೆಯಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿದ ಮಳೆ ಹಾಗೂ ಗಾಳೆಯಿಂದಾಗಿ ಭತ್ತದ ಬೆಳೆಗೆ ಹಾನಿಯಾಗಿದ್ದು, ಇದರಿಂದ ಮನನೊಂದು ಕೊಪ್ಪಳ ತಾಲ್ಲೂಕಿನ ಬಸಾಪುರ ಗ್ರಾಮದ ರೈತ ಲಕ್ಷ್ಮಣ ರಾಜರಾಮಪೇಟೆ ಕ್ರಿಮಿನಾಶಕ ಸೇವಿಸಲು ಮುಂದಾಗಿದ್ದ ಘಟನೆ ಶುಕ್ರವಾರ ನಡೆದಿದೆ.</p>.ಕೊಪ್ಪಳ | ‘ಅಲೆಮಾರಿ ವ್ಯಾಪಾರಿ’ಗಳಿಗೆ ಹಬ್ಬ ಆಚರಿಸದಿದ್ದರೂ ಭರಪೂರ ಖುಷಿ!.<p>ಅಕ್ಕಪಕ್ಕದಲ್ಲಿದ್ದರು ರೈತನನ್ನು ತಡೆದು ಸಮಾಧಾನ ಪಡಿಸಿದ್ದಾರೆ. ಲಕ್ಷ್ಮಣ ಎಂಟು ಎಕರೆಯಲ್ಲಿ ಭತ್ತ ಬೆಳೆದಿದ್ದರು.</p><p>ನಿರಂತರ ಮಳೆಯಿಂದಾಗಿ ಕೊಪ್ಪಳ ತಾಲ್ಲೂಕಿನ ಹಿಟ್ನಾಳ, ಹುಲಿಗಿ, ಅಗಳಕೇರಾ, ಬಂಡಿಹರ್ಲಾಪುರ, ಬಸಾಪುರ ಸೇರಿದಂತೆ ಅನೇಕ ಕಡೆ ಭತ್ತದ ಬೆಳೆಗೆ ಹಾನಿಯಾಗಿದೆ. ಗಂಗಾವತಿ ಮತ್ತು ಕಾರಟಗಿ ತಾಲ್ಲೂಕಿನಲ್ಲಿಯೂ ಭತ್ತ ನೆಲಕ್ಕೊರಗಿದೆ. ಗುರುವಾರ ರಾತ್ರಿ ಹಾಗೂ ಶುಕ್ರವಾರ ಬೆಳಿಗ್ಗೆಯಿಂದ ಸಂಜೆ ತನಕ ಮಳೆ ಸುರಿದಿದ್ದು ದೈನಂದಿನ ಚಟುವಟಿಕೆ ಮೇಲೂ ಪರಿಣಾಮ ಬೀರಿತು.</p>.ಕೊಪ್ಪಳ | ಗಾಳಿಪಟ ಉತ್ಸವ; ಜನತೆಯ ಸಂಭ್ರಮ .<p>‘ಗಾಳಿ ಹಾಗೂ ಮಳೆಯಿಂದಾಗಿ ಜಿಲ್ಲೆಯ ಕೆಲವು ಕಡೆ ಭತ್ತದ ಬೆಳೆಗೆ ಹಾನಿಯಾಗಿದ್ದು ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಳೆ ಪೂರ್ಣವಾಗಿ ನಿಂತ ಬಳಿಕ ಹಾನಿ ಪ್ರಮಾಣ ಗೊತ್ತಾಗಲಿದೆ’ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್. ತಿಳಿಸಿದರು.</p> .ಕೊಪ್ಪಳ: ‘ಸಹಬಾಳ್ವೆಗೆ ಭಾರತ ಜಗತ್ತಿಗೆ ಮಾದರಿ’.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>