<p><strong>ಕಾರಟಗಿ:</strong> ಭತ್ತಕ್ಕೆ ಸ್ವಾಮಿನಾಥನ್ ಆಯೋಗದ ವರದಿಯಂತೆ ₹3,200 ಬೆಂಬಲ ಬೆಲೆ ನೀಡಬೇಕು. ತಕ್ಷಣವೇ ಖರೀದಿ ಕೇಂದ್ರ ಆರಂಭಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಘಟಕ ಆಗ್ರಹಿಸಿ, ಕಂದಾಯ, ಜೆಸ್ಕಾಂ, ಪುರಸಭೆ, ಪೊಲೀಸ್ ಅಧಿಕಾರಿಗಳಿಗೆ ಸೋಮವಾರ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.</p>.<p>ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಸಿದ ಸಂಘದ ಪದಾಧಿಕಾರಿಗಳು, ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸುತ್ತಿದ್ದೇವೆ. ಸೂಕ್ತ ಸ್ಪಂದನೆ ದೊರೆಯದಿದ್ದರೆ ಮುಂದೆ ಉಗ್ರವಾದ ಹೋರಾಟ ಮಾಡಲಾಗುವುದು ಎಂದರು.</p>.<p>ರೈತ ಸಂಘದ ರಾಜ್ಯಾಧ್ಯಕ್ಷ ಶರಣಪ್ಪ ದೊಡ್ಡಮನಿ ಮಾತನಾಡಿ,‘ರೈತರು ಬೆಳೆ ಬೆಳೆಯಲು ಮಾಡುವ ಖರ್ಚು ಏರಿಕೆ ಕ್ರಮದಲ್ಲಿದ್ದರೆ, ಭತ್ತದ ಬೆಲೆ ಅದಕ್ಕೆ ತಕ್ಕಂತೆ ಏರುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.</p>.<p>ಸಂಘದ ತಾಲ್ಲೂಕು ಅಧ್ಯಕ್ಷ ನಾರಾಯಣ ಈಡಿಗೇರ,‘32/1-2ರ ನಾಲೆಯ ಪೈಪ್ನಲ್ಲಿ ತ್ಯಾಜ್ಯ ಸಂಗ್ರಹಗೊಂಡು ನೀರು ಹರಿಯುವಿಕೆ ಕ್ಷೀಣಿಸಿದ್ದು ತುರ್ತು ಕ್ರಮಕ್ಕೆ ಮುಂದಾಗಬೇಕು. ಕಂದಾಯ ಇಲಾಖೆ ನೀಡಿದ ಹಕ್ಕುಪತ್ರದ ಆಧಾರದ ಮೇಲೆ ಪುರಸಭೆ ಫಾರ್ಂ– 3 ನೀಡಬೇಕು. ತುಂಗಭದ್ರಾ ಜಲಾಶಯದ ಹೂಳು ತಗೆಯುವ ಜೊತೆಗೆ ನೂತನ ಗೇಟ್ ಅಳವಡಿಸಬೇಕು. ನವಲಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಮುಂದಾಗಬೇಕು. ಅಧಿಕಾರಿಗಳು ತಕ್ಷಣವೇ ರೈತರ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಬೇಕು’ ಎಂದರು.</p>.<p>ಉಪ ತಹಶೀಲ್ದಾರ್ ಜಗದೀಶಕುಮಾರ, ಪುರಸಭೆ ವ್ಯವಸ್ಥಾಪಕ ಪರಮೇಶ್ವರಪ್ಪ, ನೀರಾವರಿ ಇಲಾಖೆಯ ಎಂಜಿನೀಯರ್ ವೆಂಕಟೇಶ್ವರ, ಜೆಸ್ಕಾಂ ಇಲಾಖೆಯ ಪ್ರತಿನಿಧಿಗೆ ವಿವಿಧ ಬೇಡಿಕೆಗಳ ಮನವಿಯನ್ನು ಸಂಘದ ಪದಾಧಿಕಾರಿಗಳು ಸಲ್ಲಿಸಿದರು.</p>.<p>ರೈತ ಸಂಘದ ಜಿಲ್ಲಾಧ್ಯಕ್ಷ ಹನುಮಂತಪ್ಪ ನಾಯಕ, ಪದಾಧಿಕಾರಿಗಳಾದ ರಮೇಶ ಭಂಗಿ, ನಾಗಭೂಷಣ, ಭಾಷಾಸಾಬ, ಸುರೇಶ ಮೇಟಿ, ಅಯ್ಯಪ್ಪ ಸುದ್ದಿ, ಭೀಮಣ್ಣ ಪನ್ನಾಪೂರ, ಸಣ್ಣ ರಾಮಣ್ಣ, ಶರಣಪ್ಪ ಕುರಿ, ಪರಶುರಾಮ್ ದಾರಿಮನಿ, ಪರಶುರಾಂ ಮಡಿವಾಳರ್ ಸೇರಿ ನೂರಾರು ರೈತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರಟಗಿ:</strong> ಭತ್ತಕ್ಕೆ ಸ್ವಾಮಿನಾಥನ್ ಆಯೋಗದ ವರದಿಯಂತೆ ₹3,200 ಬೆಂಬಲ ಬೆಲೆ ನೀಡಬೇಕು. ತಕ್ಷಣವೇ ಖರೀದಿ ಕೇಂದ್ರ ಆರಂಭಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಘಟಕ ಆಗ್ರಹಿಸಿ, ಕಂದಾಯ, ಜೆಸ್ಕಾಂ, ಪುರಸಭೆ, ಪೊಲೀಸ್ ಅಧಿಕಾರಿಗಳಿಗೆ ಸೋಮವಾರ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.</p>.<p>ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಸಿದ ಸಂಘದ ಪದಾಧಿಕಾರಿಗಳು, ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸುತ್ತಿದ್ದೇವೆ. ಸೂಕ್ತ ಸ್ಪಂದನೆ ದೊರೆಯದಿದ್ದರೆ ಮುಂದೆ ಉಗ್ರವಾದ ಹೋರಾಟ ಮಾಡಲಾಗುವುದು ಎಂದರು.</p>.<p>ರೈತ ಸಂಘದ ರಾಜ್ಯಾಧ್ಯಕ್ಷ ಶರಣಪ್ಪ ದೊಡ್ಡಮನಿ ಮಾತನಾಡಿ,‘ರೈತರು ಬೆಳೆ ಬೆಳೆಯಲು ಮಾಡುವ ಖರ್ಚು ಏರಿಕೆ ಕ್ರಮದಲ್ಲಿದ್ದರೆ, ಭತ್ತದ ಬೆಲೆ ಅದಕ್ಕೆ ತಕ್ಕಂತೆ ಏರುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.</p>.<p>ಸಂಘದ ತಾಲ್ಲೂಕು ಅಧ್ಯಕ್ಷ ನಾರಾಯಣ ಈಡಿಗೇರ,‘32/1-2ರ ನಾಲೆಯ ಪೈಪ್ನಲ್ಲಿ ತ್ಯಾಜ್ಯ ಸಂಗ್ರಹಗೊಂಡು ನೀರು ಹರಿಯುವಿಕೆ ಕ್ಷೀಣಿಸಿದ್ದು ತುರ್ತು ಕ್ರಮಕ್ಕೆ ಮುಂದಾಗಬೇಕು. ಕಂದಾಯ ಇಲಾಖೆ ನೀಡಿದ ಹಕ್ಕುಪತ್ರದ ಆಧಾರದ ಮೇಲೆ ಪುರಸಭೆ ಫಾರ್ಂ– 3 ನೀಡಬೇಕು. ತುಂಗಭದ್ರಾ ಜಲಾಶಯದ ಹೂಳು ತಗೆಯುವ ಜೊತೆಗೆ ನೂತನ ಗೇಟ್ ಅಳವಡಿಸಬೇಕು. ನವಲಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಮುಂದಾಗಬೇಕು. ಅಧಿಕಾರಿಗಳು ತಕ್ಷಣವೇ ರೈತರ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಬೇಕು’ ಎಂದರು.</p>.<p>ಉಪ ತಹಶೀಲ್ದಾರ್ ಜಗದೀಶಕುಮಾರ, ಪುರಸಭೆ ವ್ಯವಸ್ಥಾಪಕ ಪರಮೇಶ್ವರಪ್ಪ, ನೀರಾವರಿ ಇಲಾಖೆಯ ಎಂಜಿನೀಯರ್ ವೆಂಕಟೇಶ್ವರ, ಜೆಸ್ಕಾಂ ಇಲಾಖೆಯ ಪ್ರತಿನಿಧಿಗೆ ವಿವಿಧ ಬೇಡಿಕೆಗಳ ಮನವಿಯನ್ನು ಸಂಘದ ಪದಾಧಿಕಾರಿಗಳು ಸಲ್ಲಿಸಿದರು.</p>.<p>ರೈತ ಸಂಘದ ಜಿಲ್ಲಾಧ್ಯಕ್ಷ ಹನುಮಂತಪ್ಪ ನಾಯಕ, ಪದಾಧಿಕಾರಿಗಳಾದ ರಮೇಶ ಭಂಗಿ, ನಾಗಭೂಷಣ, ಭಾಷಾಸಾಬ, ಸುರೇಶ ಮೇಟಿ, ಅಯ್ಯಪ್ಪ ಸುದ್ದಿ, ಭೀಮಣ್ಣ ಪನ್ನಾಪೂರ, ಸಣ್ಣ ರಾಮಣ್ಣ, ಶರಣಪ್ಪ ಕುರಿ, ಪರಶುರಾಮ್ ದಾರಿಮನಿ, ಪರಶುರಾಂ ಮಡಿವಾಳರ್ ಸೇರಿ ನೂರಾರು ರೈತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>