<p><strong>ಹನುಮಸಾಗರ:</strong> ಈ ಭಾಗದಲ್ಲಿ ವರ್ಷದಿಂದ ವರ್ಷಕ್ಕೆ ನವಿಲಿನ ಸಂಖ್ಯೆ ಹೆಚ್ಚುತ್ತಿದ್ದು, ನವಿಲಿಗೆ ಸೂಕ್ತ ರಕ್ಷಣೆ ಇಲ್ಲದ ಕಾರಣ ನಾಯಿಗಳ ಪಾಲಾಗುತ್ತಿದ್ದು, ಸರ್ಕಾರ ಈ ಭಾಗದಲ್ಲಿ ನವಿಲು ಧಾಮ ನಿರ್ಮಾಣ ಮಾಡಿ ಅವುಗಳ ಸಂತತಿ ಉಳಿಸಬೇಕು ಎಂದುಪರಿಸರ ಪ್ರೇಮಿಗಳು ಒತ್ತಾಯಿಸಿದ್ದಾರೆ.</p>.<p>ಗದಗ ಜಿಲ್ಲೆಯ ಕಾಲಕಾಲೇಶ್ವರ ಬಿಟ್ಟದಿಂದ ಹಿಡಿದು ಬಾಗಲಕೋಟೆ ಜಿಲ್ಲೆ ಗುಡೂರ ಮಧ್ಯದಲ್ಲಿ ಬರುವ ಚಂದಾಲಿಂಗಬೆಟ್ಟ, ವೆಂಕಟಾಪುರ ಬೆಟ್ಟ, ಬಾದಿಮನಾಳ, ಅರಸಿಬಿಡಿ ಕೆರೆ ಭಾಗದಲ್ಲಿ ಸುಮಾರು 40 ಕಿ.ಮೀ ವ್ಯಾಪ್ತಿಯಲ್ಲಿ ಸುಮಾರು2ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ನವಿಲುಗಳು ಇವೆ.</p>.<p>ರಾಷ್ಟ್ರಪಕ್ಷಿ ನವಿಲು ಬೇಟೆ, ಹತ್ಯೆ, ಆಹಾರಕ್ಕೆ ಬಳಕೆ, ಸಾಕಲು ನಿಷೇಧವಿದೆ. ಕೆಲವು ನವಿಲುಗಳು ಗ್ರಾಮದ ಜನರೊಂದಿಗೆಅನ್ಯೋನ್ಯವಾಗಿದ್ದರೂನಾಯಿ, ಬೆಕ್ಕುಗಳ ಕಾಟಕ್ಕೆ ಹೆದರಿ ಓಡಿ ಹೋಗುತ್ತವೆ. ಬೆಟ್ಟದ ಭಾಗದಲ್ಲಿ ರಕ್ಷಣೆಗೆ ಅನುಕೂಲವಿದೆ ವಿನಃ ಆಹಾರ ಹಾಗೂ ಕುಡಯುವ ನೀರಿಗೆ ತೀವ್ರ ತೊಂದರೆ ಇದೆ.</p>.<p>ಅರಣ್ಯ ಇಲಾಖೆ ಈ ಭಾಗದಲ್ಲಿ ನವಿಲುಗಳ ಉಳಿಯುವಿಕೆಗಾಗಿಧಾಮ ಮಾಡುವುದರ ಮೂಲಕ ನವಿಲು ಸಂತತಿ ಉಳಿಯುವಿಕೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯರಾದ ರುದ್ರಗೌಡ ಗೌಡಪ್ಪನವರ ಹಾಗೂ ರಮೇಶ ಬಡಿಗೇರ ಒತ್ತಾಯಿಸಿದ್ದಾರೆ.</p>.<p>ನವಿಲು ಧಾಮ ನಿರ್ಮಾಣ ಮಾಡಿ ಕುಡಿಯುವ ನೀರು, ಅವುಗಳ ಆಹಾರ, ಕಾಡು ಬೆಳೆಸುವ ಮೂಲಕ ಸುಂದರ ಪಕ್ಷಿಯ ರಕ್ಷಣೆ ಮಾಡಬೇಕು ಎಂಬುವುದು ಈ ಭಾಗದ ವನ್ಯಜೀವಿ ಪ್ರೇಮಿಗಳ ಆಗ್ರಹವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನುಮಸಾಗರ:</strong> ಈ ಭಾಗದಲ್ಲಿ ವರ್ಷದಿಂದ ವರ್ಷಕ್ಕೆ ನವಿಲಿನ ಸಂಖ್ಯೆ ಹೆಚ್ಚುತ್ತಿದ್ದು, ನವಿಲಿಗೆ ಸೂಕ್ತ ರಕ್ಷಣೆ ಇಲ್ಲದ ಕಾರಣ ನಾಯಿಗಳ ಪಾಲಾಗುತ್ತಿದ್ದು, ಸರ್ಕಾರ ಈ ಭಾಗದಲ್ಲಿ ನವಿಲು ಧಾಮ ನಿರ್ಮಾಣ ಮಾಡಿ ಅವುಗಳ ಸಂತತಿ ಉಳಿಸಬೇಕು ಎಂದುಪರಿಸರ ಪ್ರೇಮಿಗಳು ಒತ್ತಾಯಿಸಿದ್ದಾರೆ.</p>.<p>ಗದಗ ಜಿಲ್ಲೆಯ ಕಾಲಕಾಲೇಶ್ವರ ಬಿಟ್ಟದಿಂದ ಹಿಡಿದು ಬಾಗಲಕೋಟೆ ಜಿಲ್ಲೆ ಗುಡೂರ ಮಧ್ಯದಲ್ಲಿ ಬರುವ ಚಂದಾಲಿಂಗಬೆಟ್ಟ, ವೆಂಕಟಾಪುರ ಬೆಟ್ಟ, ಬಾದಿಮನಾಳ, ಅರಸಿಬಿಡಿ ಕೆರೆ ಭಾಗದಲ್ಲಿ ಸುಮಾರು 40 ಕಿ.ಮೀ ವ್ಯಾಪ್ತಿಯಲ್ಲಿ ಸುಮಾರು2ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ನವಿಲುಗಳು ಇವೆ.</p>.<p>ರಾಷ್ಟ್ರಪಕ್ಷಿ ನವಿಲು ಬೇಟೆ, ಹತ್ಯೆ, ಆಹಾರಕ್ಕೆ ಬಳಕೆ, ಸಾಕಲು ನಿಷೇಧವಿದೆ. ಕೆಲವು ನವಿಲುಗಳು ಗ್ರಾಮದ ಜನರೊಂದಿಗೆಅನ್ಯೋನ್ಯವಾಗಿದ್ದರೂನಾಯಿ, ಬೆಕ್ಕುಗಳ ಕಾಟಕ್ಕೆ ಹೆದರಿ ಓಡಿ ಹೋಗುತ್ತವೆ. ಬೆಟ್ಟದ ಭಾಗದಲ್ಲಿ ರಕ್ಷಣೆಗೆ ಅನುಕೂಲವಿದೆ ವಿನಃ ಆಹಾರ ಹಾಗೂ ಕುಡಯುವ ನೀರಿಗೆ ತೀವ್ರ ತೊಂದರೆ ಇದೆ.</p>.<p>ಅರಣ್ಯ ಇಲಾಖೆ ಈ ಭಾಗದಲ್ಲಿ ನವಿಲುಗಳ ಉಳಿಯುವಿಕೆಗಾಗಿಧಾಮ ಮಾಡುವುದರ ಮೂಲಕ ನವಿಲು ಸಂತತಿ ಉಳಿಯುವಿಕೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯರಾದ ರುದ್ರಗೌಡ ಗೌಡಪ್ಪನವರ ಹಾಗೂ ರಮೇಶ ಬಡಿಗೇರ ಒತ್ತಾಯಿಸಿದ್ದಾರೆ.</p>.<p>ನವಿಲು ಧಾಮ ನಿರ್ಮಾಣ ಮಾಡಿ ಕುಡಿಯುವ ನೀರು, ಅವುಗಳ ಆಹಾರ, ಕಾಡು ಬೆಳೆಸುವ ಮೂಲಕ ಸುಂದರ ಪಕ್ಷಿಯ ರಕ್ಷಣೆ ಮಾಡಬೇಕು ಎಂಬುವುದು ಈ ಭಾಗದ ವನ್ಯಜೀವಿ ಪ್ರೇಮಿಗಳ ಆಗ್ರಹವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>