‘ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನೀಡಿದ ದೂರಿನ ಅನ್ವಯ,ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಲಾಗಿದೆ. ದೇವಸ್ಥಾನದ ಅರ್ಚಕ ಕರಕಪ್ಪ ಪೂಜಾರಿ, ಹನುಮಗೌಡ, ಗವಿಸಿದ್ದಪ್ಪ ಮ್ಯಾಗೇರಿ, ವಿರುಪಾಕ್ಷಗೌಡ ಮ್ಯಾಗೇರಿ ಮತ್ತು ಶರಣಗೌಡ ಎಂಬುವವರನ್ನು ಬಂಧಿಸಿ ಬುಧವಾರ ನ್ಯಾಯಾಂಗ ವಶಕ್ಕೆ ನೀಡಲಾಗಿದೆ’ ಎಂದುಸಬ್ ಇನ್ಸ್ಪೆಕ್ಟರ್ ತಿಮ್ಮಣ್ಣ ನಾಯಕ ತಿಳಿಸಿದರು.