ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ತಾಲ್ಲೂಕು ಘಕಟದ ಅಧ್ಯಕ್ಷ ಬಸವರಾಜ ನಾಯಕ,‘ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ಅಗತ್ಯವಸ್ತುಗಳ ಬೆಲೆಯಲ್ಲಿಯೂ ಬಹಳಷ್ಟು ಹೆಚ್ಚಳವಾಗಿ ಬಡವರು, ಜನಸಾಮಾನ್ಯರು, ರೈತರು ತತ್ತರಿಸಿದ್ದಾರೆ. ಕೋವಿಡ್ ಲಾಕ್ಡೌನ್ ಜಾರಿಯಿಂದಾಗಿ ಮೊದಲೇ ತೊಂದರೆಯಲ್ಲಿರುವ ಜನರಿಗೆ ಈಗ ಬೆಲೆ ಏರಿಕೆಯ ಬಿಸಿ ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ವಿದ್ಯುತ್ ದರ ಏರಿಕೆ ಬಡವರ ಹೊಟ್ಟೆಯ ಮೇಲೆ ಬರೆ ಎಳೆದಿದೆ’ ಎಂದು ಅವರು ದೂರಿದರು.