<p><strong>ಕನಕಗಿರಿ: </strong>ಆರು ವರ್ಷಗಳಿಂದ ಸತತ ಬರಗಾಲಕ್ಕೆ ತುತ್ತಾಗಿ ಕೃಷಿ, ಉದ್ಯಮದಿಂದ ನಿರಾಶಗೊಂಡಿದ್ದ ಈ ಭಾಗದ ಜನರ ಮೊಗದಲ್ಲಿ ಈ ಸಲದ ದೀಪಾವಳಿ ಹಬ್ಬ ಕೋವಿಡ್-19 ಮಧ್ಯೆಯೂ ಮಂದಹಾಸ ಮೂಡಿಸಿದೆ.</p>.<p>ಸತತವಾಗಿ ಸುರಿದ ಮಳೆಯಿಂದ ರೈತರು, ವಿವಿಧ ವರ್ತಕರು ಸಂತಸಗೊಂಡಿದ್ದಾರೆ. ಲಕ್ಷ್ಮೀ ಪೂಜೆ ಮಾಡಲು ಬೇಕಾದ ಹೂವು, ಹಣ್ಣು, ಇತರೆ ಪೂಜಾ ಸಾಮಗ್ರಿಗಳನ್ನು ಭರ್ಜರಿಯಾಗಿ ಖರೀದಿಸಿದರು.</p>.<p>ರಾಜಬೀದಿ, ವಾಲ್ಮೀಕಿ ವೃತ್ತ, ಬಸ್ ನಿಲ್ದಾಣ ಪರಿಸರದಲ್ಲಿ ವಿವಿಧ ನಮೂನೆಯ ಹಣ್ಣು, ಹೂವಿನ ಹಾರ, ಅಡಿಕೆ ಹೂವು, ಚೆಂಡು ಹೂ, ಮಾವಿನಕಾಯಿ ಎಲೆ, ಇತರೆ ಸಾಮಾಗ್ರಿಗಳನ್ನು ದುಬಾರಿ ಬೆಲೆ ಇದ್ದರೂ ಸಂಜೆ ತನಕ ಖರೀದಿ ವ್ಯಾಪಾರ ಜೋರಾಗಿತ್ತು.</p>.<p>ಟ್ಯ್ರಾಕ್ಟರ್, ಲಾರಿ, ಮಿನಿ ಬಸ್, ಕಾರು ಇತರೆ ವಾಹನಗಳ ಮಾಲೀಕರು, ಚಾಲಕರು ತಮ್ಮ ವಾಹನಗಳನ್ನು ಹೂವು, ಬಾಳೆಗೊನೆಗಳಿಂದ ಅಲಂಕಾರಗೊಳಿಸಿ ಕನಕಾಚಲಪತಿ ದೇವಸ್ಥಾನ ಸೇರಿದಂತೆ ಇತರೆ ದೇಗುಲಗಳಿಗೆ ತಂದು ಪೂಜೆ ಸಲ್ಲಿಸಿದರು.</p>.<p>ಎಪಿಎಂಸಿ ಗಂಜ್, ಎಪಿಎಂಸಿ ಮಳಿಗೆ, ನವಲಿ, ನೀರ್ಲೂಟಿ ಗ್ರಾಮಗಳ ರಸ್ತೆ , ವಾಲ್ಮೀಕಿ ವೃತ್ತ, ತಾವರಗೇರಾ ರಸ್ತೆ, ರಾಜಬೀದಿಸ ಸೇರಿದಂತೆ ಪಟ್ಟಣದ ಅಂಗಡಿ, ಮುಂಗಟ್ಟುಗಳಲ್ಲಿ ಲಕ್ಷ್ಮೀ ಪೂಜೆ ಸಡಗರ, ಸಂಭ್ರಮದಿಂದ ನಡೆಯಿತು.</p>.<p>ಮಕ್ಕಳು, ಯುವತಿಯರು, ಮಹಿಳೆಯರು ಹೊಸ ಬಟ್ಟೆ, ಬೆಲೆ ಬಾಳುವ ಬಂಗಾರದ ಆಭರಣ ಧರಿಸಿ ತಮ್ಮ ಅಂಗಡಿಗಳಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<p>ಮನೆ, ಅಂಗಡಿಗಳಲ್ಲಿ ಎಣ್ಣೆ ದೀಪ, ಅಲಂಕಾರಿಕ ಆಕಾಶಪುಟ್ಟಿಗಳು ಗಮನ ಸೆಳೆಯಿತು. ಲಕ್ಷ್ಮೀ ಪೂಜೆಗೆ ಬಂದ ಅತಿಥಿಗಳಿಗೆ ಅಂಗಡಿಕಾರರು ಉತ್ತುತ್ತಿ, ಕಲ್ಲುಸಕ್ಕರೆ, ಬಾಳೆ ಇತರೆ ಸಿಹಿ ತಿನ್ನಿಸು ನೀಡಿ ಗೌರವಿಸಿದರು.</p>.<p>ಪ್ರತಿ ವರ್ಷದಂತೆ ಈ ಸಲ ಪಟಾಕಿ ಸದ್ದು ಇರಲಿಲ್ಲ, ಅಲ್ಲಲ್ಲಿ ಯುವಕರು ಪಟಾಕಿ ಸಿಡಿಸಿ ಸಂಭ್ರಮಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ: </strong>ಆರು ವರ್ಷಗಳಿಂದ ಸತತ ಬರಗಾಲಕ್ಕೆ ತುತ್ತಾಗಿ ಕೃಷಿ, ಉದ್ಯಮದಿಂದ ನಿರಾಶಗೊಂಡಿದ್ದ ಈ ಭಾಗದ ಜನರ ಮೊಗದಲ್ಲಿ ಈ ಸಲದ ದೀಪಾವಳಿ ಹಬ್ಬ ಕೋವಿಡ್-19 ಮಧ್ಯೆಯೂ ಮಂದಹಾಸ ಮೂಡಿಸಿದೆ.</p>.<p>ಸತತವಾಗಿ ಸುರಿದ ಮಳೆಯಿಂದ ರೈತರು, ವಿವಿಧ ವರ್ತಕರು ಸಂತಸಗೊಂಡಿದ್ದಾರೆ. ಲಕ್ಷ್ಮೀ ಪೂಜೆ ಮಾಡಲು ಬೇಕಾದ ಹೂವು, ಹಣ್ಣು, ಇತರೆ ಪೂಜಾ ಸಾಮಗ್ರಿಗಳನ್ನು ಭರ್ಜರಿಯಾಗಿ ಖರೀದಿಸಿದರು.</p>.<p>ರಾಜಬೀದಿ, ವಾಲ್ಮೀಕಿ ವೃತ್ತ, ಬಸ್ ನಿಲ್ದಾಣ ಪರಿಸರದಲ್ಲಿ ವಿವಿಧ ನಮೂನೆಯ ಹಣ್ಣು, ಹೂವಿನ ಹಾರ, ಅಡಿಕೆ ಹೂವು, ಚೆಂಡು ಹೂ, ಮಾವಿನಕಾಯಿ ಎಲೆ, ಇತರೆ ಸಾಮಾಗ್ರಿಗಳನ್ನು ದುಬಾರಿ ಬೆಲೆ ಇದ್ದರೂ ಸಂಜೆ ತನಕ ಖರೀದಿ ವ್ಯಾಪಾರ ಜೋರಾಗಿತ್ತು.</p>.<p>ಟ್ಯ್ರಾಕ್ಟರ್, ಲಾರಿ, ಮಿನಿ ಬಸ್, ಕಾರು ಇತರೆ ವಾಹನಗಳ ಮಾಲೀಕರು, ಚಾಲಕರು ತಮ್ಮ ವಾಹನಗಳನ್ನು ಹೂವು, ಬಾಳೆಗೊನೆಗಳಿಂದ ಅಲಂಕಾರಗೊಳಿಸಿ ಕನಕಾಚಲಪತಿ ದೇವಸ್ಥಾನ ಸೇರಿದಂತೆ ಇತರೆ ದೇಗುಲಗಳಿಗೆ ತಂದು ಪೂಜೆ ಸಲ್ಲಿಸಿದರು.</p>.<p>ಎಪಿಎಂಸಿ ಗಂಜ್, ಎಪಿಎಂಸಿ ಮಳಿಗೆ, ನವಲಿ, ನೀರ್ಲೂಟಿ ಗ್ರಾಮಗಳ ರಸ್ತೆ , ವಾಲ್ಮೀಕಿ ವೃತ್ತ, ತಾವರಗೇರಾ ರಸ್ತೆ, ರಾಜಬೀದಿಸ ಸೇರಿದಂತೆ ಪಟ್ಟಣದ ಅಂಗಡಿ, ಮುಂಗಟ್ಟುಗಳಲ್ಲಿ ಲಕ್ಷ್ಮೀ ಪೂಜೆ ಸಡಗರ, ಸಂಭ್ರಮದಿಂದ ನಡೆಯಿತು.</p>.<p>ಮಕ್ಕಳು, ಯುವತಿಯರು, ಮಹಿಳೆಯರು ಹೊಸ ಬಟ್ಟೆ, ಬೆಲೆ ಬಾಳುವ ಬಂಗಾರದ ಆಭರಣ ಧರಿಸಿ ತಮ್ಮ ಅಂಗಡಿಗಳಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<p>ಮನೆ, ಅಂಗಡಿಗಳಲ್ಲಿ ಎಣ್ಣೆ ದೀಪ, ಅಲಂಕಾರಿಕ ಆಕಾಶಪುಟ್ಟಿಗಳು ಗಮನ ಸೆಳೆಯಿತು. ಲಕ್ಷ್ಮೀ ಪೂಜೆಗೆ ಬಂದ ಅತಿಥಿಗಳಿಗೆ ಅಂಗಡಿಕಾರರು ಉತ್ತುತ್ತಿ, ಕಲ್ಲುಸಕ್ಕರೆ, ಬಾಳೆ ಇತರೆ ಸಿಹಿ ತಿನ್ನಿಸು ನೀಡಿ ಗೌರವಿಸಿದರು.</p>.<p>ಪ್ರತಿ ವರ್ಷದಂತೆ ಈ ಸಲ ಪಟಾಕಿ ಸದ್ದು ಇರಲಿಲ್ಲ, ಅಲ್ಲಲ್ಲಿ ಯುವಕರು ಪಟಾಕಿ ಸಿಡಿಸಿ ಸಂಭ್ರಮಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>