ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಕೋವಿಡ್ ನಿರ್ವಹಣೆ ಉದ್ದೇಶಕ್ಕೆ ₹22 ಕೋಟಿ ಹಣವನ್ನು ಮೀಸಲಿಡಲಾಗಿದ್ದು, ಈ ಘಟಕಗಳ ನಿರ್ಮಾಣಕ್ಕೆ ಸಹ ಅನುದಾನ ನೀಡಲಾಗುವುದು ಎಂದು ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಹೇಳಿದ್ದಾರೆ. ಇದರಿಂದ ಕಾಮಗಾರಿಗಳಿಗೆ ವೇಗ ದೊರೆತಿದ್ದು, ಎರಡೂ, ಮೂರು ತಿಂಗಳಲ್ಲಿ ಬಹುತೇಕ ಪೂರ್ಣಗೊಂಡು ಉತ್ಪಾದನೆ ಆಗುವ ಭರವಸೆಯನ್ನು ಜಿಲ್ಲಾಡಳಿತ ವ್ಯಕ್ತಪಡಿಸಿದೆ. ಆಮ್ಲಜನಕ ಘಟಕಗಳ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿಯೇ ಪೂರ್ಣಗೊಳಿಸಿ ಅದರ ಶ್ರೇಯಸ್ಸು ಪಡೆಯುವ ಉತ್ಸಾಹದಲ್ಲಿರುವ ಆಡಳಿತ ವರ್ಗ ಹೆಚ್ಚಿನ ಮುತುವರ್ಜಿ ವಹಿಸಿ ನಿರ್ಮಾಣಕ್ಕೆ ಚಾಲನೆ ನೀಡಿದೆ. ಕೋವಿಡ್ ನಿರ್ವಹಣೆಯಲ್ಲಿ ಪ್ರಮುಖ ಸಮಸ್ಯೆಯಾಗಿರುವ ಪ್ರಾಣವಾಯುವಿಗೆ ಈಗ ಆದ್ಯತೆ ನೀಡಿದ್ದು, ಮುಂದಿನ ದಿನಗಳಲ್ಲಿ ಅದಕ್ಕೆ ಉದ್ಯಮದ ಸ್ವರೂಪ ಬಂದರೂ ಆಶ್ಚರ್ಯವಿಲ್ಲ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ.