ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ,‘ನಾವು ನಿತ್ಯ ಕೇಳುವ ಒಂದು ಪ್ರಶ್ನೆಗೆ ಉತ್ತರಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಹಲವು ಬಾರಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ, ಸಚಿವನಾಗಿ ಕೆಲಸ ಮಾಡಿದ ನನಗೆ ಸೇರಿ ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ಗೆ ಹೇಗೆ ಹಣ ಹೊಂದಿಸಬೇಕು ಎಂಬುದು ಗೊತ್ತಿಲ್ಲವೇ’ ಎಂದು ಪ್ರಶ್ನಿಸಿದರು.