<p><strong>ಗಂಗಾವತಿ:</strong> ಅಂಜನಾದ್ರಿ ಬೆಟ್ಟದಲ್ಲಿ ಸೋಮವಾರ ನಡೆಯುವ ಹನುಮಮಾಲಾ ವಿಸರ್ಜನೆ ಹಾಗೂ ಗಂಗಾವತಿ ನಗರದಲ್ಲಿ ನಡೆಯುವ ಸಂಕೀರ್ತನಾ ಯಾತ್ರೆ ಬಂದೋಬಸ್ತ್ಗೆ ಪೊಲೀಸ್ ಇಲಾಖೆ ಸರ್ಪಗಾವಲು ಸಜ್ಜಾಗಿದೆ.</p>.<p>ಕೋಮುಗಲಭೆಯಿಂದ ಗಂಗಾವತಿ ಸೂಕ್ಷ್ಮ ಪ್ರದೇಶವಾಗಿ ಗುರುತಿಸಿಕೊಂಡಿದ್ದು, ನಗರದಲ್ಲಿ ಯಾವುದೇ ಅಹಿತಕರ ಘಟನೆ, ಗಲಭೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹನುಮಮಾಲಾ ವಿಸರ್ಜನೆಗೆ 1300 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.</p>.<p>ಪಥ ಸಂಚಲನ: ಗಂಗಾವತಿ ನಗರದಲ್ಲಿ ಸೋಮವಾರ ಬೆಳಿಗ್ಗೆ 15 ಸಾವಿರ ಭಕ್ತರ ಸಹಯೋಗದಲ್ಲಿ ನಡೆಯಲಿರುವ ಸಂಕೀರ್ತನಾ ಯಾತ್ರೆ ಅಂಗವಾಗಿ ಎಸ್ಪಿ ಅರುಣಾಂಗ್ಷು ಗಿರಿ ನೇತೃತ್ವದಲ್ಲಿ ಭಾನುವಾರ ಸಂಜೆ ನಗರದ ಸಿಬಿಎಸ್, ಮಹಾವೀರ, ಗಾಂಧಿ, ಬನ್ನಿಗಿಡದ ಕ್ಯಾಂಪ್, ಕೃಷ್ಣದೇವರಾಯ ವೃತ್ತದಲ್ಲಿ ಪಥ ಸಂಚಲನ ಜರುಗಿತು.</p>.<p>ಬ್ಯಾರಿಕೇಡ್ ಅಳವಡಿಕೆ: ಅಂಜನಾದ್ರಿ ಸಮೀಪ ವಾಹನ ಪಾರ್ಕಿಂಗ್ಗೆ 19 ಸ್ಥಳ ನಿಗದಿಪಡಿಸಿದ್ದು, ಸಂಚಾರ ದಟ್ಟಣೆ ತಡೆಯಲು ಪಾರ್ಕಿಂಗ್ ಬಳಿ ಪೊಲೀಸ್ ಸಿಬ್ಬಂದಿ, ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ. ಕಡೆಬಾಗಿಲು ಬಳಿ ಹುಲಿಗಿಗೆ, ಸಾಣಾಪುರದ ಬಳಿ ಗಂಗಾವತಿಗೆ ತೆರಳುವ ವಾಹನ ತಡೆದು ಹಿಂದಕ್ಕೆ ಕಳುಹಿಸಲಾಗುತ್ತಿದೆ.</p>.<p>ಈ ವೇಳೆ ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ, ಟಿ.ವೆಂಕಟಸ್ವಾಮಿ, ಮಂಜುನಾಥ ಸೇರಿ 500ಕ್ಕೂ ಹೆಚ್ಚು ಪೊಲೀಸರು, 20ಕ್ಕೂ ಹೆಚ್ಚು ವಾಹನಗಳು ಇದ್ದವು.</p>.<p>ಪೂಜೆ: ಭಕ್ತರಿಗೆ ಊಟದ ವ್ಯವಸ್ಥೆ ಕಲ್ಪಿಸಲು ವೇದ ಪಾಠಶಾಲೆಯ ಬಳಿ ಭಾನುವಾರ ಶಾಸಕ ಪರಣ್ಣ ಮುನವಳ್ಳಿ ಅಡುಗೆ ಸಿದ್ಧತೆಗೆ ಪೂಜೆ ನೆರವೇರಿಸಿದರು.</p>.<p>ನಂತರ ಮಾತನಾಡಿ ‘ಹನುಮನ ನಾಡಿಗೆ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಆಂಜನೇಯನ ದರ್ಶನ ದೊರಕಿಸುವಲ್ಲಿ ಎಲ್ಲ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು’ ಎಂದರು.</p>.<p>ತಹಶೀಲ್ದಾರ್ ಯು.ನಾಗರಾಜ, ನಗರಸಭೆ ಪೌರಾಯುಕ್ತ ಆರ್.ವಿರುಪಾಕ್ಷ ಮೂರ್ತಿ, ವಿರುಪಾಕ್ಷಪ್ಪ ಸಿಂಗನಾಳ, ಸುಭಾಷ, ಶಿವಕುಮಾರ ಎ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ಅಂಜನಾದ್ರಿ ಬೆಟ್ಟದಲ್ಲಿ ಸೋಮವಾರ ನಡೆಯುವ ಹನುಮಮಾಲಾ ವಿಸರ್ಜನೆ ಹಾಗೂ ಗಂಗಾವತಿ ನಗರದಲ್ಲಿ ನಡೆಯುವ ಸಂಕೀರ್ತನಾ ಯಾತ್ರೆ ಬಂದೋಬಸ್ತ್ಗೆ ಪೊಲೀಸ್ ಇಲಾಖೆ ಸರ್ಪಗಾವಲು ಸಜ್ಜಾಗಿದೆ.</p>.<p>ಕೋಮುಗಲಭೆಯಿಂದ ಗಂಗಾವತಿ ಸೂಕ್ಷ್ಮ ಪ್ರದೇಶವಾಗಿ ಗುರುತಿಸಿಕೊಂಡಿದ್ದು, ನಗರದಲ್ಲಿ ಯಾವುದೇ ಅಹಿತಕರ ಘಟನೆ, ಗಲಭೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹನುಮಮಾಲಾ ವಿಸರ್ಜನೆಗೆ 1300 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.</p>.<p>ಪಥ ಸಂಚಲನ: ಗಂಗಾವತಿ ನಗರದಲ್ಲಿ ಸೋಮವಾರ ಬೆಳಿಗ್ಗೆ 15 ಸಾವಿರ ಭಕ್ತರ ಸಹಯೋಗದಲ್ಲಿ ನಡೆಯಲಿರುವ ಸಂಕೀರ್ತನಾ ಯಾತ್ರೆ ಅಂಗವಾಗಿ ಎಸ್ಪಿ ಅರುಣಾಂಗ್ಷು ಗಿರಿ ನೇತೃತ್ವದಲ್ಲಿ ಭಾನುವಾರ ಸಂಜೆ ನಗರದ ಸಿಬಿಎಸ್, ಮಹಾವೀರ, ಗಾಂಧಿ, ಬನ್ನಿಗಿಡದ ಕ್ಯಾಂಪ್, ಕೃಷ್ಣದೇವರಾಯ ವೃತ್ತದಲ್ಲಿ ಪಥ ಸಂಚಲನ ಜರುಗಿತು.</p>.<p>ಬ್ಯಾರಿಕೇಡ್ ಅಳವಡಿಕೆ: ಅಂಜನಾದ್ರಿ ಸಮೀಪ ವಾಹನ ಪಾರ್ಕಿಂಗ್ಗೆ 19 ಸ್ಥಳ ನಿಗದಿಪಡಿಸಿದ್ದು, ಸಂಚಾರ ದಟ್ಟಣೆ ತಡೆಯಲು ಪಾರ್ಕಿಂಗ್ ಬಳಿ ಪೊಲೀಸ್ ಸಿಬ್ಬಂದಿ, ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ. ಕಡೆಬಾಗಿಲು ಬಳಿ ಹುಲಿಗಿಗೆ, ಸಾಣಾಪುರದ ಬಳಿ ಗಂಗಾವತಿಗೆ ತೆರಳುವ ವಾಹನ ತಡೆದು ಹಿಂದಕ್ಕೆ ಕಳುಹಿಸಲಾಗುತ್ತಿದೆ.</p>.<p>ಈ ವೇಳೆ ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ, ಟಿ.ವೆಂಕಟಸ್ವಾಮಿ, ಮಂಜುನಾಥ ಸೇರಿ 500ಕ್ಕೂ ಹೆಚ್ಚು ಪೊಲೀಸರು, 20ಕ್ಕೂ ಹೆಚ್ಚು ವಾಹನಗಳು ಇದ್ದವು.</p>.<p>ಪೂಜೆ: ಭಕ್ತರಿಗೆ ಊಟದ ವ್ಯವಸ್ಥೆ ಕಲ್ಪಿಸಲು ವೇದ ಪಾಠಶಾಲೆಯ ಬಳಿ ಭಾನುವಾರ ಶಾಸಕ ಪರಣ್ಣ ಮುನವಳ್ಳಿ ಅಡುಗೆ ಸಿದ್ಧತೆಗೆ ಪೂಜೆ ನೆರವೇರಿಸಿದರು.</p>.<p>ನಂತರ ಮಾತನಾಡಿ ‘ಹನುಮನ ನಾಡಿಗೆ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಆಂಜನೇಯನ ದರ್ಶನ ದೊರಕಿಸುವಲ್ಲಿ ಎಲ್ಲ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು’ ಎಂದರು.</p>.<p>ತಹಶೀಲ್ದಾರ್ ಯು.ನಾಗರಾಜ, ನಗರಸಭೆ ಪೌರಾಯುಕ್ತ ಆರ್.ವಿರುಪಾಕ್ಷ ಮೂರ್ತಿ, ವಿರುಪಾಕ್ಷಪ್ಪ ಸಿಂಗನಾಳ, ಸುಭಾಷ, ಶಿವಕುಮಾರ ಎ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>