ಕೊಪ್ಪಳ ಜಿಲ್ಲೆ ಎಂದರೆ ನನಗೆ ಎಲ್ಲಿಲ್ಲದ ಪ್ರೀತಿ. ಏಕೆಂದರೆ ಇಲ್ಲಿ ನಾನು ಪೊಲೀಸ್ ವರಿಷ್ಠಾಧಿಕಾರಿಯಾಗಿ ಒಂದು ವರ್ಷ ಕಾರ್ಯ ನಿರ್ವಹಿಸಿದ್ದೇನೆ. ಇಲ್ಲಿ ಬಹಳಷ್ಟು ಜನ ಸ್ನೇಹಿತರಿದ್ದಾರೆ. ಜಿಲ್ಲೆಗೆ ಭೇಟಿ ನೀಡಲು ನನಗೆ ಯಾವಾಗಲೂ ಖುಷಿಯಾಗುತ್ತದೆ. ಡಿಸೆಂಬರ್ ಪೊಲೀಸರಿಗೆ ಸಂತಸದ ತಿಂಗಳು. ಈ ತಿಂಗಳಿನಲ್ಲಿ ಹಾಡು, ನೃತ್ಯ, ಆಟೋಟ, ಪ್ರವಾಸಗಳ ಮೂಲಕ ಅವರು ಸ್ವಲ್ಪ ನಿರಾಳರಾಗುತ್ತಾರೆ. ಪ್ರಸ್ತುತ ಕ್ರೀಡಾಕೂಟದಲ್ಲಿ ಪೊಲೀಸ್ ಸಿಬ್ಬಂದಿ ಕೂಡ ಭಾಗವಹಿಸಿರುವುದು ಸಂತಸ ತಂದಿದೆ. ಕ್ರೀಡಾಕೂಟಗಳು ದೈಹಿಕ, ಮಾನಸಿಕ ಆರೋಗ್ಯದ ಜತೆಗೆ ನಮ್ಮಲ್ಲಿ ಬಾಂಧವ್ಯವನ್ನು ಹೆಚ್ಚಿಸುತ್ತವೆ ಎಂದು ಹೇಳಿದರು.