<p><strong>ಬೆಣಕಲ್ (ಕುಕನೂರು): </strong>‘ಸರ್ಕಾರಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಇಲ್ಲದಿದ್ದರೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಎಂಜಿನಿಯರ್ ವಿರುದ್ದ ಕ್ರಮ ಜರುಗಿಸಲಾಗುವುದು’ ಎಂದು ಶಾಸಕ ಹಾಲಪ್ಪ ಆಚಾರ್ ಎಚ್ಚರಿಕೆ ನೀಡಿದರು.</p>.<p>ತಾಲ್ಲೂಕಿನ ಬೆಣಕಲ್ ಗ್ರಾಮದ ಕೆರೆ ವೀಕ್ಷಣೆ ಮಾಡಿ ನಂತರ ಮಾತನಾಡಿದರು.</p>.<p>‘₹1 ಕೋಟಿ ವೆಚ್ಚದ ಕೆರೆ ಅಭಿವೃದ್ಧಿ ಕಾಮಗಾರಿ ಒಂದು ವರ್ಷವಾದರೂ ಪೂರ್ಣಗೊಂಡಿಲ್ಲ. ಕಳಪೆ ಕಾಮಗಾರಿ ಮಾಡುತ್ತಿರುವ ಈ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಪಕ್ಕದ ರೈತರ ಜಮೀನುಗಳಿಗೆ ತೊಂದರೆಯಾಗದಂತೆ ಕೆರೆ ಸರಹದ್ದನ್ನು ಸರಿಯಾಗಿ ನಿರ್ಮಿಸಿ ಇನ್ನು ಕೆಲವೇ ತಿಂಗಳುಗಳಲ್ಲಿ ಬೆಣಕಲ್ ಕೆರೆಯನ್ನು ಸಂಪೂರ್ಣವಾಗಿ ಅಚ್ಚುಕಟ್ಟಾಗಿ ನಿರ್ಮಿಸಿ ಜನರಿಗೆ ಸಹಕಾರಿಯಾಗುವಂತೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ ಪಂಪಾಪತಿ, ಸಹಾಯಕ ಎಂಜಿನಿಯರ್ ಮುರಳೀಧರ್ ಪಾಟೀಲ, ಪ್ರಕಾಶ, ಶರಣಪ್ಪ ಮುರ್ಲಾಪುರ, ಮಾರುತಿ ಗಾವರಾಳ, ಕಳಕಪ್ಪ ಕಂಬಳಿ, ಈರಣ್ಣ ಹುಬ್ಬಳ್ಳಿ ಹಾಗೂ ಗವಿಸಿದ್ಧಪ್ಪ ಲೇಬಗೇರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಣಕಲ್ (ಕುಕನೂರು): </strong>‘ಸರ್ಕಾರಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಇಲ್ಲದಿದ್ದರೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಎಂಜಿನಿಯರ್ ವಿರುದ್ದ ಕ್ರಮ ಜರುಗಿಸಲಾಗುವುದು’ ಎಂದು ಶಾಸಕ ಹಾಲಪ್ಪ ಆಚಾರ್ ಎಚ್ಚರಿಕೆ ನೀಡಿದರು.</p>.<p>ತಾಲ್ಲೂಕಿನ ಬೆಣಕಲ್ ಗ್ರಾಮದ ಕೆರೆ ವೀಕ್ಷಣೆ ಮಾಡಿ ನಂತರ ಮಾತನಾಡಿದರು.</p>.<p>‘₹1 ಕೋಟಿ ವೆಚ್ಚದ ಕೆರೆ ಅಭಿವೃದ್ಧಿ ಕಾಮಗಾರಿ ಒಂದು ವರ್ಷವಾದರೂ ಪೂರ್ಣಗೊಂಡಿಲ್ಲ. ಕಳಪೆ ಕಾಮಗಾರಿ ಮಾಡುತ್ತಿರುವ ಈ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಪಕ್ಕದ ರೈತರ ಜಮೀನುಗಳಿಗೆ ತೊಂದರೆಯಾಗದಂತೆ ಕೆರೆ ಸರಹದ್ದನ್ನು ಸರಿಯಾಗಿ ನಿರ್ಮಿಸಿ ಇನ್ನು ಕೆಲವೇ ತಿಂಗಳುಗಳಲ್ಲಿ ಬೆಣಕಲ್ ಕೆರೆಯನ್ನು ಸಂಪೂರ್ಣವಾಗಿ ಅಚ್ಚುಕಟ್ಟಾಗಿ ನಿರ್ಮಿಸಿ ಜನರಿಗೆ ಸಹಕಾರಿಯಾಗುವಂತೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ ಪಂಪಾಪತಿ, ಸಹಾಯಕ ಎಂಜಿನಿಯರ್ ಮುರಳೀಧರ್ ಪಾಟೀಲ, ಪ್ರಕಾಶ, ಶರಣಪ್ಪ ಮುರ್ಲಾಪುರ, ಮಾರುತಿ ಗಾವರಾಳ, ಕಳಕಪ್ಪ ಕಂಬಳಿ, ಈರಣ್ಣ ಹುಬ್ಬಳ್ಳಿ ಹಾಗೂ ಗವಿಸಿದ್ಧಪ್ಪ ಲೇಬಗೇರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>