<p><strong>ಯಲಬುರ್ಗಾ:</strong> ತಾಲ್ಲೂಕಿನ ಚಿಕ್ಕಮ್ಯಾಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮಕ್ಕಳಿಗೆ ವಿತರಿಸುವ ಮಧ್ಯಾಹ್ನದ ಬಿಸಿಯೂಟಕ್ಕೆ ಪೂರೈಕೆಯಾಗುವ ಆಹಾರ ಧಾನ್ಯಗಳು ಕಳಪೆಯಾಗಿದ್ದು, ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಈರಪ್ಪ ಸಂಗನಾಳ, ಉಪಾಧ್ಯಕ್ಷ ಮುತ್ತಪ್ಪ ದೇಸಾಯಿ, ಸದಸ್ಯ ಮಾರುತಿ ಚಂಡೂರ ಸೇರಿದಂತೆ ಅನೇಕರು ಶಾಲೆಗೆ ಭೇಟಿ ನೀಡಿ ಆಹಾರಧಾನ್ಯಗಳನ್ನು ಪರಿಶೀಲಿಸಿ ಬಿಸಿಯೂಟ ಯೋಜನೆಯ ಸಹಾಯಕ ನಿರ್ದೇಶಕರನ್ನು ಶಾಲೆಗೆ ಕರೆಯಿಸಿ ಗುಣಮಟ್ಟದ ಧಾನ್ಯಗಳನ್ನು ಪೂರೈಸುವಂತೆ ಒತ್ತಾಯಿಸಿದರು. </p>.<p>ಪೂರೈಕೆಯಾದ ತೊಗರಿ ಬೇಳೆಗಳಲ್ಲಿ ಹುಳುಗಳಿವೆ. ಅಲ್ಲದೇ ಜಿಡ್ಡುಗಟ್ಟಿವೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೆ ಬೇಜವಾಬ್ದಾರಿ ಮಾತುಗಳನ್ನಾಡಿದ್ದಾರೆ ಎಂದು ಗ್ರಾಪಂ ಸದಸ್ಯ ಯಮನೂರಪ್ಪ ಕುರಿ ಅಧಿಕಾರಿ ವಿರುದ್ಧ ಹರಿಹಾಯ್ದಿದ್ದಾರೆ.</p>.<p>ತಾಲ್ಲೂಕಿನಾದ್ಯಂತ ಈ ರೀತಿಯ ಕಳಪೆ ಆಹಾರಧಾನ್ಯಗಳು ಪೂರೈಕೆಯಾಗುತ್ತಿವೆ. ಶಿಕ್ಷಣ ಇಲಾಖೆಯ ಗಮನಕ್ಕೆ ಇದ್ದರೂ ಯಾವುದೇ ಕ್ರಮಕ್ಕೆ ಮುಂದಾಗದೇ ಕಳಪೆ ಪೂರೈಸುವವರ ಪರವಾಗಿ ಮಾತನಾಡುತ್ತಿದ್ದಾರೆ. ಅಧಿಕಾರಿಗಳ ಮತ್ತು ಕಳಪೆ ದಾನ್ಯಗಳ ಪೂರೈಕೆದಾರರಿಂದ ಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಜಿಲ್ಲಾಮಟ್ಟದ ಅಧಿಕಾರಿಗಳು ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.</p>.<p>ಗ್ರಾಮದ ಮುಖಂಡರಾದ ಬಾಳಪ್ಪ ಕವಳಕೇರಿ, ಶರಣಪ್ಪ ಬಿಂದಗಿ ಸೇರಿದಂತೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ:</strong> ತಾಲ್ಲೂಕಿನ ಚಿಕ್ಕಮ್ಯಾಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮಕ್ಕಳಿಗೆ ವಿತರಿಸುವ ಮಧ್ಯಾಹ್ನದ ಬಿಸಿಯೂಟಕ್ಕೆ ಪೂರೈಕೆಯಾಗುವ ಆಹಾರ ಧಾನ್ಯಗಳು ಕಳಪೆಯಾಗಿದ್ದು, ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಈರಪ್ಪ ಸಂಗನಾಳ, ಉಪಾಧ್ಯಕ್ಷ ಮುತ್ತಪ್ಪ ದೇಸಾಯಿ, ಸದಸ್ಯ ಮಾರುತಿ ಚಂಡೂರ ಸೇರಿದಂತೆ ಅನೇಕರು ಶಾಲೆಗೆ ಭೇಟಿ ನೀಡಿ ಆಹಾರಧಾನ್ಯಗಳನ್ನು ಪರಿಶೀಲಿಸಿ ಬಿಸಿಯೂಟ ಯೋಜನೆಯ ಸಹಾಯಕ ನಿರ್ದೇಶಕರನ್ನು ಶಾಲೆಗೆ ಕರೆಯಿಸಿ ಗುಣಮಟ್ಟದ ಧಾನ್ಯಗಳನ್ನು ಪೂರೈಸುವಂತೆ ಒತ್ತಾಯಿಸಿದರು. </p>.<p>ಪೂರೈಕೆಯಾದ ತೊಗರಿ ಬೇಳೆಗಳಲ್ಲಿ ಹುಳುಗಳಿವೆ. ಅಲ್ಲದೇ ಜಿಡ್ಡುಗಟ್ಟಿವೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೆ ಬೇಜವಾಬ್ದಾರಿ ಮಾತುಗಳನ್ನಾಡಿದ್ದಾರೆ ಎಂದು ಗ್ರಾಪಂ ಸದಸ್ಯ ಯಮನೂರಪ್ಪ ಕುರಿ ಅಧಿಕಾರಿ ವಿರುದ್ಧ ಹರಿಹಾಯ್ದಿದ್ದಾರೆ.</p>.<p>ತಾಲ್ಲೂಕಿನಾದ್ಯಂತ ಈ ರೀತಿಯ ಕಳಪೆ ಆಹಾರಧಾನ್ಯಗಳು ಪೂರೈಕೆಯಾಗುತ್ತಿವೆ. ಶಿಕ್ಷಣ ಇಲಾಖೆಯ ಗಮನಕ್ಕೆ ಇದ್ದರೂ ಯಾವುದೇ ಕ್ರಮಕ್ಕೆ ಮುಂದಾಗದೇ ಕಳಪೆ ಪೂರೈಸುವವರ ಪರವಾಗಿ ಮಾತನಾಡುತ್ತಿದ್ದಾರೆ. ಅಧಿಕಾರಿಗಳ ಮತ್ತು ಕಳಪೆ ದಾನ್ಯಗಳ ಪೂರೈಕೆದಾರರಿಂದ ಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಜಿಲ್ಲಾಮಟ್ಟದ ಅಧಿಕಾರಿಗಳು ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.</p>.<p>ಗ್ರಾಮದ ಮುಖಂಡರಾದ ಬಾಳಪ್ಪ ಕವಳಕೇರಿ, ಶರಣಪ್ಪ ಬಿಂದಗಿ ಸೇರಿದಂತೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>