<p><strong>ಅಳವಂಡಿ:</strong> ‘ಸಣ್ಣ ನೀರಾವರಿ ಇಲಾಖೆಯಿಂದ ಅಳವಂಡಿ-ತಳಕಲ್ ಮಾರ್ಗ ಮಧ್ಯೆದ ಹಳ್ಳದಲ್ಲಿ ಬಾಂದಾರ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇದಕ್ಕೆ ಮಣ್ಣು ಮಿಶ್ರಿತ ಮರಳು ಬಳಸಲಾಗುತ್ತಿದೆ. ಗುಣಮಟ್ಟದಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು’ ಎಂದು ಗ್ರಾಮಸ್ಥರು ಸಂಸದ ಸಂಗಣ್ಣ ಕರಡಿ ಅವರನ್ನು ಒತ್ತಾಯಿಸಿದರು.</p>.<p>ಸೇತುವೆ ಕಾಮಗಾರಿ ಕಾಟಾಚಾರಕ್ಕೆ ಎಂಬಂತೆ ನಡೆಯುತ್ತಿದೆ. ಉತ್ಕೃಷ್ಟ ಮರಳು, ಸಿಮೆಂಟ್ ಬಳಸಿ ಸೇತುವೆ ನಿರ್ಮಿಸಿದರೆ ಬಹು ದಿನಗಳದವರೆಗೆ ತಾಳಿಕೆ ಬರುತ್ತದೆ. ಸಂಬಂಧಿಸಿದ ಗುತ್ತಿಗೆದಾರರು, ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.</p>.<p>ಗ್ರಾಮದ ಮುಖಂಡರಾದವಸಂತ ನಾಗರಳ್ಳಿ, ಮಲ್ಲಪ್ಪ ಬೆಣಕಲ್, ಚಂದ್ರಪ್ಪ ಜಂತ್ಲಿ, ಜಗದೀಶ, ಮಂಜುನಾಥ ಜಂತ್ಲಿ ಹಾಗೂ ಮಹಮದ್ ಸಾಬ್ ಕಿಲ್ಲೇದ ಇದ್ದರು. ಮನವಿ ಸ್ವೀಕರಿಸಿದ ಸಂಸದರು ಸ್ಥಳಕ್ಕೆ ಭೇಟಿ ನೀಡಿಸಂಬಂಧಿಸಿದ ಅಧಿಕಾರಿಗಳ ಜತೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಳವಂಡಿ:</strong> ‘ಸಣ್ಣ ನೀರಾವರಿ ಇಲಾಖೆಯಿಂದ ಅಳವಂಡಿ-ತಳಕಲ್ ಮಾರ್ಗ ಮಧ್ಯೆದ ಹಳ್ಳದಲ್ಲಿ ಬಾಂದಾರ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇದಕ್ಕೆ ಮಣ್ಣು ಮಿಶ್ರಿತ ಮರಳು ಬಳಸಲಾಗುತ್ತಿದೆ. ಗುಣಮಟ್ಟದಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು’ ಎಂದು ಗ್ರಾಮಸ್ಥರು ಸಂಸದ ಸಂಗಣ್ಣ ಕರಡಿ ಅವರನ್ನು ಒತ್ತಾಯಿಸಿದರು.</p>.<p>ಸೇತುವೆ ಕಾಮಗಾರಿ ಕಾಟಾಚಾರಕ್ಕೆ ಎಂಬಂತೆ ನಡೆಯುತ್ತಿದೆ. ಉತ್ಕೃಷ್ಟ ಮರಳು, ಸಿಮೆಂಟ್ ಬಳಸಿ ಸೇತುವೆ ನಿರ್ಮಿಸಿದರೆ ಬಹು ದಿನಗಳದವರೆಗೆ ತಾಳಿಕೆ ಬರುತ್ತದೆ. ಸಂಬಂಧಿಸಿದ ಗುತ್ತಿಗೆದಾರರು, ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.</p>.<p>ಗ್ರಾಮದ ಮುಖಂಡರಾದವಸಂತ ನಾಗರಳ್ಳಿ, ಮಲ್ಲಪ್ಪ ಬೆಣಕಲ್, ಚಂದ್ರಪ್ಪ ಜಂತ್ಲಿ, ಜಗದೀಶ, ಮಂಜುನಾಥ ಜಂತ್ಲಿ ಹಾಗೂ ಮಹಮದ್ ಸಾಬ್ ಕಿಲ್ಲೇದ ಇದ್ದರು. ಮನವಿ ಸ್ವೀಕರಿಸಿದ ಸಂಸದರು ಸ್ಥಳಕ್ಕೆ ಭೇಟಿ ನೀಡಿಸಂಬಂಧಿಸಿದ ಅಧಿಕಾರಿಗಳ ಜತೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>