<p>ತಾಳಕೇರಿ (ಯಲಬುರ್ಗಾ): ‘ಮಕ್ಕಳಲ್ಲಿ ಕ್ರಿಯಾತ್ಮಕ ಹಾಗೂ ವೈಜ್ಞಾನಿಕ ಮನೋಭಾವನೆ ವೃದ್ಧಿಸುವಲ್ಲಿ ಪೋಷಣ ಅಭಿಯಾನ ಮಹತ್ವದ ಪಾತ್ರ ವಹಿಸುತ್ತದೆ. ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಸುಲಭವಾಗಿ ಮನದಟ್ಟಾಗುವಂತೆ ಮಾದರಿ ಕೆಲಸ ಮಾಡಿದ್ದು ಶ್ಲಾಘನೀಯ’ ಎಂದು ಉಪ ತಹಶೀಲ್ದಾರ್ ವಿಜಯಕುಮಾರ ಗುಂಡೂರ ಹೇಳಿದರು.</p>.<p>ತಾಲ್ಲೂಕಿನ ತಾಳಕೇರಿ ಪ್ರೌಢಶಾಲೆಯ ರಾಮನ್ ವಿಜ್ಞಾನ ಸಂಘ, ಸುಗಂಧ ಇಕೋ ಕ್ಲಬ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪೋಷಣ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ದೇಹಕ್ಕೆ ಬೇಕಾದ ಪೋಷಕಾಂಶಗಳು ಯಾವ್ಯಾವು?. ಅವುಗಳು ಎಷ್ಟರಮಟ್ಟಿಗೆ ದೇಹಕ್ಕೆ ಶಕ್ತಿ ನೀಡಬಲ್ಲವು ಎಂಬುದನ್ನು ಚಿತ್ರ ಸಮೇತ ತೋರಿಸಿದ್ದು ಉತ್ತಮ ರಚನಾತ್ಮಕ ಕಾರ್ಯವಾಗಿದೆ ಎಂದು ಹೇಳಿದರು.</p>.<p>ವಿಜ್ಞಾನ ಶಿಕ್ಷಕ ದೇವೇಂದ್ರಪ್ಪ ಜಿರ್ಲಿ ಮಾತನಾಡಿ,‘ದೇಶಿ ಆಹಾರ ಸಂಸ್ಕೃತಿಯೇ ಉತ್ತಮ ಆಹಾರ ಪದ್ಧತಿಯಾಗಿದೆ. ತಾಜಾ ಆಹಾರ ಸೇವನೆಯೇ ಕಡಿಮೆಯಾಗುತ್ತಿದೆ. ಯಾಂತ್ರಿಕ ಬದುಕಿಗೆ ಒಗ್ಗಿಕೊಂಡಿರುವ ನಾವುಗಳು ಆರೊಗ್ಯದ ಕಡೆ ಗಮನ ಕೊಡುತ್ತಿಲ್ಲ. ಇದರಿಂದ ಆರೋಗ್ಯ ಕೂಡ ಕ್ಷೀಣಿಸುತ್ತಿರುವುದು ಹೆಚ್ಚಾಗಿದೆ ಎಂದರು.</p>.<p>ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪುಷ್ಪಾ ಮಾತನಾಡಿ,‘ಸೆಪ್ಟೆಂಬರ್ ಮಾಸದಲ್ಲಿ ದೇಶದಾದ್ಯಂತ ರಾಷ್ಟ್ರೀಯ ಪೋಷಣ ಅಭಿಯಾನ ನಡೆಯುತ್ತಿರುವ ಸಂದರ್ಭದಲ್ಲಿ ಈ ಕಾರ್ಯಕ್ರಮಕ್ಕೆ ಹೆಚ್ಚು ಮೆರಗು ಬಂದಿದೆ’ ಎಂದರು.</p>.<p>ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮಂಜುನಾಥ ಅವರು ಆಹಾರದಲ್ಲಿ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಪೌಷ್ಟಿಕ ಆಹಾರ ಸೇವನೆ ಅವಶ್ಯಕತೆಯ ಕುರಿತು ಮಾಹಿತಿ ನೀಡಿದರು.</p>.<p>ಅತಿಥಿಗಳಾಗಿ ತಿಮ್ಮಣ್ಣ ಜಗ್ಗಲ್, ಶೋಭಾ ಬಾಗೇವಾಡಿ ಹಾಗೂ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಬಾಬುಸಾಬ್ ಲೈನದಾರ್ ಮಾತನಾಡಿದರು.</p>.<p>ಶಾಲೆಯ ಕೆಲ ಮಕ್ಕಳು ಅನಿಸಿಕೆ ವ್ಯಕ್ತಪಡಿಸಿದರು. ರೇಣುಕಾ ಅಚಲಕರ್ ಕಾರ್ಯಕ್ರಮ ನಿರೂಪಿಸಿದರು. ರಜಿಯಾಬೇಗಂ ಸ್ವಾಗತಿಸಿದರು. ಉಮಾ ಹಿರೇಮಠ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಾಳಕೇರಿ (ಯಲಬುರ್ಗಾ): ‘ಮಕ್ಕಳಲ್ಲಿ ಕ್ರಿಯಾತ್ಮಕ ಹಾಗೂ ವೈಜ್ಞಾನಿಕ ಮನೋಭಾವನೆ ವೃದ್ಧಿಸುವಲ್ಲಿ ಪೋಷಣ ಅಭಿಯಾನ ಮಹತ್ವದ ಪಾತ್ರ ವಹಿಸುತ್ತದೆ. ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಸುಲಭವಾಗಿ ಮನದಟ್ಟಾಗುವಂತೆ ಮಾದರಿ ಕೆಲಸ ಮಾಡಿದ್ದು ಶ್ಲಾಘನೀಯ’ ಎಂದು ಉಪ ತಹಶೀಲ್ದಾರ್ ವಿಜಯಕುಮಾರ ಗುಂಡೂರ ಹೇಳಿದರು.</p>.<p>ತಾಲ್ಲೂಕಿನ ತಾಳಕೇರಿ ಪ್ರೌಢಶಾಲೆಯ ರಾಮನ್ ವಿಜ್ಞಾನ ಸಂಘ, ಸುಗಂಧ ಇಕೋ ಕ್ಲಬ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪೋಷಣ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ದೇಹಕ್ಕೆ ಬೇಕಾದ ಪೋಷಕಾಂಶಗಳು ಯಾವ್ಯಾವು?. ಅವುಗಳು ಎಷ್ಟರಮಟ್ಟಿಗೆ ದೇಹಕ್ಕೆ ಶಕ್ತಿ ನೀಡಬಲ್ಲವು ಎಂಬುದನ್ನು ಚಿತ್ರ ಸಮೇತ ತೋರಿಸಿದ್ದು ಉತ್ತಮ ರಚನಾತ್ಮಕ ಕಾರ್ಯವಾಗಿದೆ ಎಂದು ಹೇಳಿದರು.</p>.<p>ವಿಜ್ಞಾನ ಶಿಕ್ಷಕ ದೇವೇಂದ್ರಪ್ಪ ಜಿರ್ಲಿ ಮಾತನಾಡಿ,‘ದೇಶಿ ಆಹಾರ ಸಂಸ್ಕೃತಿಯೇ ಉತ್ತಮ ಆಹಾರ ಪದ್ಧತಿಯಾಗಿದೆ. ತಾಜಾ ಆಹಾರ ಸೇವನೆಯೇ ಕಡಿಮೆಯಾಗುತ್ತಿದೆ. ಯಾಂತ್ರಿಕ ಬದುಕಿಗೆ ಒಗ್ಗಿಕೊಂಡಿರುವ ನಾವುಗಳು ಆರೊಗ್ಯದ ಕಡೆ ಗಮನ ಕೊಡುತ್ತಿಲ್ಲ. ಇದರಿಂದ ಆರೋಗ್ಯ ಕೂಡ ಕ್ಷೀಣಿಸುತ್ತಿರುವುದು ಹೆಚ್ಚಾಗಿದೆ ಎಂದರು.</p>.<p>ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪುಷ್ಪಾ ಮಾತನಾಡಿ,‘ಸೆಪ್ಟೆಂಬರ್ ಮಾಸದಲ್ಲಿ ದೇಶದಾದ್ಯಂತ ರಾಷ್ಟ್ರೀಯ ಪೋಷಣ ಅಭಿಯಾನ ನಡೆಯುತ್ತಿರುವ ಸಂದರ್ಭದಲ್ಲಿ ಈ ಕಾರ್ಯಕ್ರಮಕ್ಕೆ ಹೆಚ್ಚು ಮೆರಗು ಬಂದಿದೆ’ ಎಂದರು.</p>.<p>ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮಂಜುನಾಥ ಅವರು ಆಹಾರದಲ್ಲಿ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಪೌಷ್ಟಿಕ ಆಹಾರ ಸೇವನೆ ಅವಶ್ಯಕತೆಯ ಕುರಿತು ಮಾಹಿತಿ ನೀಡಿದರು.</p>.<p>ಅತಿಥಿಗಳಾಗಿ ತಿಮ್ಮಣ್ಣ ಜಗ್ಗಲ್, ಶೋಭಾ ಬಾಗೇವಾಡಿ ಹಾಗೂ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಬಾಬುಸಾಬ್ ಲೈನದಾರ್ ಮಾತನಾಡಿದರು.</p>.<p>ಶಾಲೆಯ ಕೆಲ ಮಕ್ಕಳು ಅನಿಸಿಕೆ ವ್ಯಕ್ತಪಡಿಸಿದರು. ರೇಣುಕಾ ಅಚಲಕರ್ ಕಾರ್ಯಕ್ರಮ ನಿರೂಪಿಸಿದರು. ರಜಿಯಾಬೇಗಂ ಸ್ವಾಗತಿಸಿದರು. ಉಮಾ ಹಿರೇಮಠ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>