<p><strong>ಹನುಮಸಾಗರ</strong>: ಪಟ್ಟಣದಿಂದ ಗಜೇಂದ್ರಗಡಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಮಳೆ ಪರಿಣಾಮ ಸಂಪೂರ್ಣ ಹಾಳಾಗಿದ್ದು ವಾಹನ ಸವಾರರು ಪರದಾಟ ಪಡುತ್ತಿದ್ದಾರೆ. ರಸ್ತೆಯುದ್ದಕ್ಕೂ ತಗ್ಗುಗಳು ಬಿದ್ದಿವೆ.</p><p>ಬಸ್, ಕಾರು ಸೇರಿ ವಾಹನಗಳ ಮುಂದಿನ ಚಕ್ರ ಒಮ್ಮೆಲೇ ಗುಂಡಿಗೆ ಇಳಿದಾಗ ಚಾಸ್ಸಿಗೆ ರಸ್ತೆಯ ಉಬ್ಬಿದ ಭಾಗ ಜೋರಾಗಿ ಬಡಿಯುತ್ತಿದೆ. ಹೀಗಾಗಿ ಅನಿವಾರ್ಯವಾಗಿ ವಾಹನಗಳು ನಿಧಾನವಾಗಿ ಚಲಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಇದರಿಂದ ಸಮಯ ಹಾಗೂ ಇಂಧನ ಎರಡೂ ವ್ಯಯವಾಗುತ್ತಿವೆ ಎನ್ನುವುದು ಚಾಲಕರ ಅಳಲು.</p><p>ಪಾದಚಾರಿಗಳೂ ಗುಂಡಿಗಳಿಂದ ಸಾಕಷ್ಟು ಕಷ್ಟ ಅನುಭವಿಸುತ್ತಿದ್ದಾರೆ. ವಾಹನಗಳ ಚಾಲಕರು ಗುಂಡಿಗಳನ್ನು ತಪ್ಪಿಸಲು ಗಾಡಿಯನ್ನು ರಸ್ತೆ ಬದಿ ಇಳಿಸುವುದರಿಂದ ತೊಂದರೆಯಾಗುತ್ತಿದೆ. ರಾತ್ರಿ ವೇಳೆ ಇಲ್ಲಿ ಬೆಳಕಿನ ವ್ಯವಸ್ಥೆ ಇಲ್ಲದ ಕಾರಣ ಗುಂಡಿ ಕಾಣದೇ ಅಪಾಯಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ.</p><p>‘ಜನಪ್ರತಿನಿಧಿಗಳು ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ದುರಸ್ತಿಗೆ ಕ್ರಮ ತೆಗೆದುಕೊಳ್ಳಬೇಕು’ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.</p>.<div><blockquote>ಈ ರಸ್ತೆ ಮೂಲಕವೇ ನಾವು ನಿತ್ಯ ಹೊಲಕ್ಕೆ ಹೋಗುತ್ತೇವೆ. ಈ ಮಾರ್ಗದಲ್ಲೇ ಸಾಕಷ್ಟು ಬಸ್, ಕಾರುಗಳು ಓಡಾಡುವುದರಿಂದ ವಾಹನ ದಟ್ಟಣೆ ಹೆಚ್ಚಿರುತ್ತದೆ. ಸಂಬಂಧಿಸಿದವರು ರಸ್ತೆ ದುರಸ್ತಿಗೆ ಶೀಘ್ರ ಕ್ರಮತೆಗೆದುಕೊಳ್ಳಬೇಕು. </blockquote><span class="attribution">ದುರ್ಗಪ್ಪ, ಹನುಮಸಾಗರ ನಿವಾಸಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನುಮಸಾಗರ</strong>: ಪಟ್ಟಣದಿಂದ ಗಜೇಂದ್ರಗಡಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಮಳೆ ಪರಿಣಾಮ ಸಂಪೂರ್ಣ ಹಾಳಾಗಿದ್ದು ವಾಹನ ಸವಾರರು ಪರದಾಟ ಪಡುತ್ತಿದ್ದಾರೆ. ರಸ್ತೆಯುದ್ದಕ್ಕೂ ತಗ್ಗುಗಳು ಬಿದ್ದಿವೆ.</p><p>ಬಸ್, ಕಾರು ಸೇರಿ ವಾಹನಗಳ ಮುಂದಿನ ಚಕ್ರ ಒಮ್ಮೆಲೇ ಗುಂಡಿಗೆ ಇಳಿದಾಗ ಚಾಸ್ಸಿಗೆ ರಸ್ತೆಯ ಉಬ್ಬಿದ ಭಾಗ ಜೋರಾಗಿ ಬಡಿಯುತ್ತಿದೆ. ಹೀಗಾಗಿ ಅನಿವಾರ್ಯವಾಗಿ ವಾಹನಗಳು ನಿಧಾನವಾಗಿ ಚಲಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಇದರಿಂದ ಸಮಯ ಹಾಗೂ ಇಂಧನ ಎರಡೂ ವ್ಯಯವಾಗುತ್ತಿವೆ ಎನ್ನುವುದು ಚಾಲಕರ ಅಳಲು.</p><p>ಪಾದಚಾರಿಗಳೂ ಗುಂಡಿಗಳಿಂದ ಸಾಕಷ್ಟು ಕಷ್ಟ ಅನುಭವಿಸುತ್ತಿದ್ದಾರೆ. ವಾಹನಗಳ ಚಾಲಕರು ಗುಂಡಿಗಳನ್ನು ತಪ್ಪಿಸಲು ಗಾಡಿಯನ್ನು ರಸ್ತೆ ಬದಿ ಇಳಿಸುವುದರಿಂದ ತೊಂದರೆಯಾಗುತ್ತಿದೆ. ರಾತ್ರಿ ವೇಳೆ ಇಲ್ಲಿ ಬೆಳಕಿನ ವ್ಯವಸ್ಥೆ ಇಲ್ಲದ ಕಾರಣ ಗುಂಡಿ ಕಾಣದೇ ಅಪಾಯಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ.</p><p>‘ಜನಪ್ರತಿನಿಧಿಗಳು ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ದುರಸ್ತಿಗೆ ಕ್ರಮ ತೆಗೆದುಕೊಳ್ಳಬೇಕು’ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.</p>.<div><blockquote>ಈ ರಸ್ತೆ ಮೂಲಕವೇ ನಾವು ನಿತ್ಯ ಹೊಲಕ್ಕೆ ಹೋಗುತ್ತೇವೆ. ಈ ಮಾರ್ಗದಲ್ಲೇ ಸಾಕಷ್ಟು ಬಸ್, ಕಾರುಗಳು ಓಡಾಡುವುದರಿಂದ ವಾಹನ ದಟ್ಟಣೆ ಹೆಚ್ಚಿರುತ್ತದೆ. ಸಂಬಂಧಿಸಿದವರು ರಸ್ತೆ ದುರಸ್ತಿಗೆ ಶೀಘ್ರ ಕ್ರಮತೆಗೆದುಕೊಳ್ಳಬೇಕು. </blockquote><span class="attribution">ದುರ್ಗಪ್ಪ, ಹನುಮಸಾಗರ ನಿವಾಸಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>