ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಪ್ಪಳ | ಉತ್ತಮ ರಸ್ತೆಗಳಿಗೆ ಬರ: ಸವಾರರ ಜೀವ ಹಿಂಡುತ್ತಿವೆ ಗುಂಡಿಗಳು

Published : 1 ಜುಲೈ 2024, 5:34 IST
Last Updated : 1 ಜುಲೈ 2024, 5:34 IST
ಫಾಲೋ ಮಾಡಿ
Comments
ರೈಲು ನಿಲ್ದಾಣಕ್ಕೆ ಹೋಗುವ ರಸ್ತೆಯಲ್ಲಿರುವ ಗುಂಡಿಗಳು
ರೈಲು ನಿಲ್ದಾಣಕ್ಕೆ ಹೋಗುವ ರಸ್ತೆಯಲ್ಲಿರುವ ಗುಂಡಿಗಳು
ಕೊಪ್ಪಳದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಆದ ಅನಾಹುತವನ್ನು ಎಲ್ಲರೂ ನೋಡಿದ್ದಾರೆ. ಆದರೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ. ರಸ್ತೆಯ ಗುಂಡಿಗಳನ್ನಾದರೂ ಮುಚ್ಚುವ ಕೆಲಸ ತುರ್ತಾಗಿ ಆಗಬೇಕು
ರಮೇಶ ಒಂಕಲಕುಂಟಿ ಸ್ಥಳೀಯರು
ರಸ್ತೆ ದುರಸ್ತಿ ಮಾಡುವಂತೆ ಮತ್ತು ಕೊಪ್ಪಳ ನಗರದ ಗುಂಡಿಗಳಿಗೆ ತೇಪೆ ಹಾಕಿ ರಸ್ತೆಗಳನ್ನು ಸರಿಪಡಿಸುವಂತೆ ಅನೇಕ ಬಾರಿ ಪ್ರತಿಭಟನೆ ಮಾಡಿದರೂ ಪ್ರಯೋಜನವಾಗಿಲ್ಲ. ಜನ ಕೂಡ ಈ ಸಮಸ್ಯೆ ಬಗ್ಗೆ ಗಟ್ಟಿಯಾಗಿ ಧ್ವನಿ ಎತ್ತಬೇಕು
ಶರಣು ಪಾಟೀಲ ಎಐಡಿವೈಒ ಜಿಲ್ಲಾ ಕಾರ್ಯದರ್ಶಿ
ಕೊಪ್ಪಳಕ್ಕೆ ನಿತ್ಯ ಲಕ್ಷಾಂತರ ಜನ ಭೇಟಿ ನೀಡುತ್ತಿದ್ದರೂ ರಸ್ತೆಗಳ ಸ್ಥಿತಿ ಮಾತ್ರ ಸರಿಯಾಗಿಲ್ಲ. ಭಾರಿ ವಾಹನಗಳ ಓಡಾಟದ ಭಾರವೂ ಆಗುತ್ತಿದ್ದು ರಸ್ತೆಗಳು ಮತ್ತಷ್ಟು ಹದಗೆಟ್ಟಿವೆ. ಇದು ಹೀಗೆಯೇ ಮುಂದುವರಿದರೆ ಹೋರಾಟ ಮಾಡಬೇಕಾಗುತ್ತದೆ.
ಎಸ್‌. ಮೈಲಾರಪ್ಪ ವಕೀಲ
‘ಭಾರಿ ವಾಹನಗಳ ಓಡಾಟಕ್ಕೆ ಕಡಿವಾಣ ಹಾಕಿ’
ಕೊಪ್ಪಳ: ನಗರದಲ್ಲಿ ಭಾರಿ ವಾಹನಗಳ ಓಡಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಇದು ಜನರ ಮೇಲೆ ಪರಿಣಾಮ ಬೀರುತ್ತಿದೆ. ಇದನ್ನು ಜಿಲ್ಲಾಡಳಿತ ತಡೆಯಬೇಕು ಎಂದು ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಸ್‌. ಮೈಲಾರಪ್ಪ ಆಗ್ರಹಿಸಿದರು. ‘ನಿಗದಿಗಿಂತಲೂ ಹೆಚ್ಚು ಲೋಡ್‌ ಮಾಡಿಕೊಂಡ ವಾಹನಗಳಿಗೆ ನಗರದೊಳಗೆ ಪ್ರವೇಶಕ್ಕೆ ಅವಕಾಶ ಕೊಡಬಾರದು. ಕಡ್ಡಾಯವಾಗಿ ದಾಖಲೆಗಳನ್ನು ಪರಿಶೀಲಿಸಬೇಕು. ವಾಹನ ಅಪಘಾತಕ್ಕೆ ಈಡಾದರೂ ಗಾಯಗೊಂಡ ವ್ಯಕ್ತಿಯ ಚಿಕಿತ್ಸೆಗೆ ಯಾರೂ ನಯಾ ಪೈಸೆ ಕೊಡುವುದಿಲ್ಲ. ಆದ್ದರಿಂದ ಭಾರಿ ವಾಹನಗಳ ಓಡಾಟಕ್ಕೆ ಕಡಿವಾಣ ಹಾಕಬೇಕು’ ಎಂದು ಭಾನುವಾರ ಪ‍ತ್ರಿಕಾಗೋಷ್ಠಿಯಲ್ಲಿ ಹೇಳಿದರು. ‘ಬೈಪಾಸ್‌ ರಸ್ತೆಯಿದ್ದರೂ ನಗರದಲ್ಲಿ ಭಾರಿ ಗಾತ್ರದ ವಾಹನಗಳು ಓಡಾಡುತ್ತವೆ. ವೇಗದ ಮಿತಿ ಪ್ರತಿ ಗಂಟೆಗೆ 30ರಿಂದ 40 ಕಿ.ಮೀ. ಮಾತ್ರ ಇದ್ದರೂ ಯಾರೂ ಪಾಲನೆ ಮಾಡುತ್ತಿಲ್ಲ. ಅಂಥವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂಬರುವ ದಿನಗಳಲ್ಲಿ ಹೋರಾಟ ನಡೆಸಲಾಗುವುದು’ ಎಂದು ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT