‘1,100 ವಿದ್ಯಾರ್ಥಿಗಳಿಗೆ ಶೌಚಾಲಯ ಇಲ್ಲ’ ಎಂಬ ಸುದ್ದಿ ‘ಪ್ರಜಾವಾಣಿ’ಯಲ್ಲಿ ಮಂಗಳವಾರ ಪ್ರಕಟವಾಗಿತ್ತು. ತಕ್ಷಣ ಸ್ಪಂದಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್,ಕೊಪ್ಪಳದ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರೊಂದಿಗೆ ಮಾತನಾಡಿ, ತಕ್ಷಣವೇ ಶೌಚಾಲಯ ವ್ಯವಸ್ಥೆ ಮಾಡಬೇಕೆಂದು ಸೂಚಿಸಿದ್ದರು.