ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದ 371(ಜೆ) ಅನ್ವಯ ವಿಶೇಷ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಚ್.ಕೆ.ಪಾಟೀಲ ಬರೆದಿದ್ದಾರೆ ಎನ್ನಲಾದ ಹಳೆಯ ಪತ್ರ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಇದನ್ನು ಮುಂದಿಟ್ಟುಕೊಂಡು ಕೆಲವರು ಪ್ರತಿಭಟನೆ ಮಾಡುವುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಸಚಿವರು, ‘ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಕೇಂದ್ರೀಕೃತ ದಾಖಲಾತಿ ಘಟಕ ಸಂಸ್ಥೆಗಳ ನೇಮಕಾತಿ ವೇಳೆ ಕ.ಕ. ಜಿಲ್ಲೆಗಳಿಗೆ ಆದ್ಯತೆ ನೀಡಬೇಕು ಎನ್ನುವ ನಿಲುವಿನಲ್ಲಿ ರಾಜ್ಯ ಸರ್ಕಾರದ ನಿಲುವು ಅಚಲವಾಗಿದೆ’ ಎಂದರು.