<p><strong>ಕೊಪ್ಪಳ:</strong> ‘ಪದವಿ ಹಂತದಲ್ಲಿರುವಾಗಲೇ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಕಡೆ ಒಲವು ತೋರಬೇಕು. ಅಕಾಡೆಮಿಕ್ ಪರೀಕ್ಷೆಗೂ ಸ್ಪರ್ಧಾತ್ಮಕ ಪರೀಕ್ಷೆಗೂ ಬಹಳ ವ್ಯತ್ಯಾಸವಿರುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಗಳಿಸಲು ಪೂರ್ವ ತಯಾರಿ ಅಗತ್ಯ’ ಎಂದು ಚಾಮರಾಜನಗರ ಜಿಲ್ಲೆ ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಹೇಳಿದರು.</p>.<p>ತಾಲ್ಲೂಕಿನ ಹೊಸಬಂಡಿ ಹರ್ಲಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಮತ್ತು ಭರವಸಾ ಕೋಶದ ವತಿಯಿಂದ ಹಮ್ಮಿಕೊಂಡ ಸ್ಪರ್ಧಾತ್ಮಕ ಪರೀಕ್ಷೆ ಯಶಸ್ಸು ವಿಷಯಾಧಾರಿತ ಐದು ದಿನಗಳ ಉಚಿತ ಆನ್ಲೈನ್ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮಾನಸಿಕ ಸಿದ್ಧತೆ, ಕಠಿಣ ಪರಿಶ್ರಮ ಹಾಗೂ ತಿಳಿದುಕೊಂಡಿದ್ದನ್ನು ಅಭಿವ್ಯಕ್ತಿಸುವ ರೀತಿ ನಿಮ್ಮನ್ನು ಯಶಸ್ಸಿನ ಶಿಖರದತ್ತ ಕೊಂಡೊಯ್ಯುತ್ತವೆ. ಯಶಸ್ಸು ಮತ್ತು ವಿಫಲತೆ ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಿ. ಸ್ಪರ್ಧಾರ್ಥಿಗಳ ಅನುಪಾತ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗಿದೆ ಎಂದರು.</p>.<p>ಮೊದಲ ಬಾರಿ ವಿಫಲರಾಗಬಹುದು. ಆಗ ಸ್ಪರ್ಧೆಯಿಂದ ದೂರ ಉಳಿಯದೇ ಕ್ರಮಬದ್ಧ ಅಧ್ಯಯನ ನಿಮ್ಮದಾಗಿದ್ದರೆ ಯಶಸ್ಸು ಕನಸಾಗಿ ಉಳಿಯಲಾರದು. ನನಸಾಗಿ ನಿಮಗೆ ತೃಪ್ತಿ ನೀಡುತ್ತದೆ.ಗುರಿ ಮುಟ್ಟಲು ನಿಖರ ಓದಿನ ದಾರಿಯಲ್ಲಿ ಸಾಗುತ್ತಿದ್ದೇವೆಯೇ ಎಂಬುದನ್ನು ದೃಢಪಡಿಸಿಕೊಳ್ಳುತ್ತ ಮುಂದೆ ಸಾಗಿ ಎಂದರು.</p>.<p>ಕಾಲೇಜಿನ ಪ್ರಾಚಾರ್ಯ ಡಾ.ನಿಂಗಪ್ಪ ಕಂಬಳಿ ಮಾತನಾಡಿ,‘ವಿದ್ಯಾರ್ಥಿಗಳಿಗೆ ಸಾಧಕರ ಜೀವನವೇ ನಿಮಗೆ ಸ್ಫೂರ್ತಿ. ಪದವಿ ಹಂತ ಮುಗಿದ ನಂತರ ತಾವು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಬೇಕಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಯಶಸ್ಸಿಗೆ ಆಂತರಿಕ ಪ್ರೇರಣೆ ಪೂರ್ವ ತಯಾರಿ ಹಾಗೂ ಮಾರ್ಗದರ್ಶನ ಬೇಕಾಗುತ್ತದೆ. ಆ ನಿಟ್ಟಿನಲ್ಲಿ ನಮ್ಮ ಕಾಲೇಜು ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಶ್ರೇಣಿಯಲ್ಲಿ ಪಾಸಾಗಿ ಉನ್ನತ ಹುದ್ದೆಗಳಲ್ಲಿರುವ ಸಾಧಕರಿಂದ ಮಾರ್ಗದರ್ಶನ ನೀಡಿಸುವ ಕೆಲಸ ಮಾಡುತ್ತಿದೆ. ಇದನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.</p>.<p>ಸ್ಪರ್ಧಾತ್ಮಕ ಯುಗದಲ್ಲಿ ನಿರಂತರ ಅಧ್ಯಯನಶೀಲತೆ, ಕಠಿಣ ಪರಿಶ್ರಮ ಮುಖ್ಯ. ವಿದ್ಯಾಥಿಗಳು ಗಮನ ಕೇಂದ್ರೀಕರಿಸಿ ಛಲವನ್ನು ಬೆಳೆಸಿಕೊಂಡು ಅಂದುಕೊಂಡಿದ್ದನ್ನು ಸಾಧಿಸುವ ಕೆಲಸ ಮಾಡಬೇಕು. ಆಗ ಕುಟುಂಬಕ್ಕೂ ಅನುಕೂಲವಾಗುತ್ತದೆ ಎಂದರು.</p>.<p>ನಂತರ ಕನ್ನಡ ಭಾಷೆ ಮತ್ತು ಸಾಹಿತ್ಯ ವಿಷಯದ ಕುರಿತು ಸಹಾಯಕ ಪ್ರಾಧ್ಯಾಪಕ ಶಂಕ್ರಯ್ಯ ಅಬ್ಬಿಗೇರಿಮಠಉಪನ್ಯಾಸ ನೀಡಿದರು.</p>.<p>ಐಕ್ಯೂಎಸಿ ಸಂಚಾಲಕ ಡಾ.ವೀರೇಂದ್ರ ಪಾಟೀಲ ಮಾತನಾಡಿದರು. ಗದ್ದೆಪ್ಪ ನಿರೂಪಿಸಿದರು. ಕೃಷ್ಣಮೂರ್ತಿ ಬೇಳೂರು ಸ್ವಾಗತಿಸಿದರು. ಅನ್ನಪೂರ್ಣ ಪಂಥರ ವಂದಿಸಿದರು. ಜಗದೀಶ್ ಹೊಸಳ್ಳಿ, ಗೋಪಾಲ.ಡಿ ಉದ್ಘಾಟಿಸಿದರು. ಸಂತೋಷ ಕಾಡಪ್ಪನವರ ರಾಮಣ್ಣ ಉಪ್ಪಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ‘ಪದವಿ ಹಂತದಲ್ಲಿರುವಾಗಲೇ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಕಡೆ ಒಲವು ತೋರಬೇಕು. ಅಕಾಡೆಮಿಕ್ ಪರೀಕ್ಷೆಗೂ ಸ್ಪರ್ಧಾತ್ಮಕ ಪರೀಕ್ಷೆಗೂ ಬಹಳ ವ್ಯತ್ಯಾಸವಿರುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಗಳಿಸಲು ಪೂರ್ವ ತಯಾರಿ ಅಗತ್ಯ’ ಎಂದು ಚಾಮರಾಜನಗರ ಜಿಲ್ಲೆ ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಹೇಳಿದರು.</p>.<p>ತಾಲ್ಲೂಕಿನ ಹೊಸಬಂಡಿ ಹರ್ಲಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಮತ್ತು ಭರವಸಾ ಕೋಶದ ವತಿಯಿಂದ ಹಮ್ಮಿಕೊಂಡ ಸ್ಪರ್ಧಾತ್ಮಕ ಪರೀಕ್ಷೆ ಯಶಸ್ಸು ವಿಷಯಾಧಾರಿತ ಐದು ದಿನಗಳ ಉಚಿತ ಆನ್ಲೈನ್ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮಾನಸಿಕ ಸಿದ್ಧತೆ, ಕಠಿಣ ಪರಿಶ್ರಮ ಹಾಗೂ ತಿಳಿದುಕೊಂಡಿದ್ದನ್ನು ಅಭಿವ್ಯಕ್ತಿಸುವ ರೀತಿ ನಿಮ್ಮನ್ನು ಯಶಸ್ಸಿನ ಶಿಖರದತ್ತ ಕೊಂಡೊಯ್ಯುತ್ತವೆ. ಯಶಸ್ಸು ಮತ್ತು ವಿಫಲತೆ ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಿ. ಸ್ಪರ್ಧಾರ್ಥಿಗಳ ಅನುಪಾತ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗಿದೆ ಎಂದರು.</p>.<p>ಮೊದಲ ಬಾರಿ ವಿಫಲರಾಗಬಹುದು. ಆಗ ಸ್ಪರ್ಧೆಯಿಂದ ದೂರ ಉಳಿಯದೇ ಕ್ರಮಬದ್ಧ ಅಧ್ಯಯನ ನಿಮ್ಮದಾಗಿದ್ದರೆ ಯಶಸ್ಸು ಕನಸಾಗಿ ಉಳಿಯಲಾರದು. ನನಸಾಗಿ ನಿಮಗೆ ತೃಪ್ತಿ ನೀಡುತ್ತದೆ.ಗುರಿ ಮುಟ್ಟಲು ನಿಖರ ಓದಿನ ದಾರಿಯಲ್ಲಿ ಸಾಗುತ್ತಿದ್ದೇವೆಯೇ ಎಂಬುದನ್ನು ದೃಢಪಡಿಸಿಕೊಳ್ಳುತ್ತ ಮುಂದೆ ಸಾಗಿ ಎಂದರು.</p>.<p>ಕಾಲೇಜಿನ ಪ್ರಾಚಾರ್ಯ ಡಾ.ನಿಂಗಪ್ಪ ಕಂಬಳಿ ಮಾತನಾಡಿ,‘ವಿದ್ಯಾರ್ಥಿಗಳಿಗೆ ಸಾಧಕರ ಜೀವನವೇ ನಿಮಗೆ ಸ್ಫೂರ್ತಿ. ಪದವಿ ಹಂತ ಮುಗಿದ ನಂತರ ತಾವು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಬೇಕಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಯಶಸ್ಸಿಗೆ ಆಂತರಿಕ ಪ್ರೇರಣೆ ಪೂರ್ವ ತಯಾರಿ ಹಾಗೂ ಮಾರ್ಗದರ್ಶನ ಬೇಕಾಗುತ್ತದೆ. ಆ ನಿಟ್ಟಿನಲ್ಲಿ ನಮ್ಮ ಕಾಲೇಜು ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಶ್ರೇಣಿಯಲ್ಲಿ ಪಾಸಾಗಿ ಉನ್ನತ ಹುದ್ದೆಗಳಲ್ಲಿರುವ ಸಾಧಕರಿಂದ ಮಾರ್ಗದರ್ಶನ ನೀಡಿಸುವ ಕೆಲಸ ಮಾಡುತ್ತಿದೆ. ಇದನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.</p>.<p>ಸ್ಪರ್ಧಾತ್ಮಕ ಯುಗದಲ್ಲಿ ನಿರಂತರ ಅಧ್ಯಯನಶೀಲತೆ, ಕಠಿಣ ಪರಿಶ್ರಮ ಮುಖ್ಯ. ವಿದ್ಯಾಥಿಗಳು ಗಮನ ಕೇಂದ್ರೀಕರಿಸಿ ಛಲವನ್ನು ಬೆಳೆಸಿಕೊಂಡು ಅಂದುಕೊಂಡಿದ್ದನ್ನು ಸಾಧಿಸುವ ಕೆಲಸ ಮಾಡಬೇಕು. ಆಗ ಕುಟುಂಬಕ್ಕೂ ಅನುಕೂಲವಾಗುತ್ತದೆ ಎಂದರು.</p>.<p>ನಂತರ ಕನ್ನಡ ಭಾಷೆ ಮತ್ತು ಸಾಹಿತ್ಯ ವಿಷಯದ ಕುರಿತು ಸಹಾಯಕ ಪ್ರಾಧ್ಯಾಪಕ ಶಂಕ್ರಯ್ಯ ಅಬ್ಬಿಗೇರಿಮಠಉಪನ್ಯಾಸ ನೀಡಿದರು.</p>.<p>ಐಕ್ಯೂಎಸಿ ಸಂಚಾಲಕ ಡಾ.ವೀರೇಂದ್ರ ಪಾಟೀಲ ಮಾತನಾಡಿದರು. ಗದ್ದೆಪ್ಪ ನಿರೂಪಿಸಿದರು. ಕೃಷ್ಣಮೂರ್ತಿ ಬೇಳೂರು ಸ್ವಾಗತಿಸಿದರು. ಅನ್ನಪೂರ್ಣ ಪಂಥರ ವಂದಿಸಿದರು. ಜಗದೀಶ್ ಹೊಸಳ್ಳಿ, ಗೋಪಾಲ.ಡಿ ಉದ್ಘಾಟಿಸಿದರು. ಸಂತೋಷ ಕಾಡಪ್ಪನವರ ರಾಮಣ್ಣ ಉಪ್ಪಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>