<p>ಕಾರಟಗಿ: ಕೋವಿಡ್ 3ನೇ ಅಲೆ ನಿಯಂತ್ರಣಕ್ಕಾಗಿ ಕೈಗೊಂಡ ಕ್ರಮಗಳ ಕುರಿತು ಸಮಾಲೋಚಿಸಲು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಶನಿವಾರ ಅಧಿಕಾರಿಗಳ ಸಭೆ ನಡೆಸಿದರು.</p>.<p>ಪಟ್ಟಣದ ವಿಶೇಷ ಎಪಿಎಂಸಿ ಸಭಾಂಗಣದಲ್ಲಿ ಕಾರಟಗಿ ಹಾಗೂ ಕನಕಗಿರಿ ತಾಲ್ಲೂಕುಗಳ ಕೋವಿಡ್ 3ನೇ ಅಲೆ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಸಭೆಯಲ್ಲಿ ಸಚಿವರು ಜಿಲ್ಲಾ ಆರೋಗ್ಯಾಧಿಕಾರಿ ಲಿಂಗಾರೆಡ್ಡಿಯವರಿಂದ ಮಾಹಿತಿ ಪಡೆದರು.</p>.<p>ನಂತರ ಮಾತನಾಡಿ, ಈಗಾಗಲೇ ರಾಜ್ಯದಲ್ಲಿ ಕೋವಿಡ್ 3ನೇ ಅಲೆ ಆರಂಭಗೊಂಡಿದ್ದು, ಸೆಪ್ಟಂಬರ್ ವೇಳೆಗೆ ತೀವ್ರವಾಗುವ ಅಂದಾಜಿದೆ. ಆ.1ರಿಂದ ಇಲ್ಲಿಯವರೆಗೆ ಕಾರಟಗಿ ತಾಲ್ಲೂಕಿನಲ್ಲಿ 1 ಹಾಗೂ ಕನಕಗಿರಿ ತಾಲ್ಲೂಕಿನಲ್ಲಿ 2 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ತಾಲ್ಲೂಕಿನಲ್ಲಿ ಸೋಂಕು ನಿಯಂತ್ರಣಕ್ಕೆ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಕನಕಗಿರಿಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ಆಸ್ಪತ್ರೆ ಆರಂಭಿಸುವ ಚಿಂತನೆ ಇದೆ ಎಂದರು.</p>.<p>ಶಾಸಕ ಬಸವರಾಜ ದಢೇಸುಗೂರ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಲಿಂಗಾರೆಡ್ಡಿ ಮಾತನಾಡಿದರು.</p>.<p class="Subhead">ಜಿಲ್ಲೆಗೆ 8 ಕೋಟಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ₹ 8 ಕೋಟಿ ಅನುದಾನ ಬಂದಿದ್ದು, ಪ್ರತಿ ತಾಲ್ಲೂಕಿಗೆ ₹ ಕೋಟಿಯಂತೆ ಹಂಚಿಕೆ ಮಾಡಲು ತಿಳಿಸಲಾಗಿದೆ.<br />ಆಸ್ಪತ್ರೆಗಳಲ್ಲಿ ಉಪಕರಣಗಳ ಖರೀದಿ ಸೇರಿದಂತೆ ಆರೋಗ್ಯ ವಲಯಕ್ಕೆ ಬಳಸುವಂತೆ ಉಸ್ತುವಾರಿ ಸಚಿವರು ಸೂಚಿಸಿದರು.</p>.<p>ರಾಜ್ಯದಲ್ಲಿ ಮರಳು ಕೊರತೆ ನೀಗಿಸಲು ಎಂ- ಸ್ಯಾಂಡ್ ಉತ್ಪಾದನೆಗೆ ಚಿಂತನೆ ನಡೆದಿದ್ದು, ಇದರಿಂದ ಮರಳಿನ ಕಾಳಸಂತೆಗೆ ಕಡಿವಾಣ ಹಾಕಬಹುದು. ಈ ನಿಟ್ಟಿನಲ್ಲಿ ಜಿಲ್ಲೆಯ<br />ಅಧಿಕಾರಿಗಳು ಸಮಗ್ರವಾಗಿ ವರದಿ ಕಳಿಸುವಂತೆ ತಿಳಿಸಿದರು.</p>.<p>ಗೋಮಾಳ, ಗೈರಾಣು ಭೂಮಿಯಲ್ಲಿ ನೆಲೆಸಿರುವ ಹಾಗೂ ಕೃಷಿ ಚಟುವಟಿಕೆ ನಡೆಸುತ್ತಿರುವ ಅರ್ಹ ಕುಟುಂಬಗಳಿಗೆ ಭೂಮಿ ಮಂಜೂರುಗೊಳಿಸುವ ಕುರಿತು ಶಾಸಕ ದಢೇಸೂಗೂರು ಪ್ರಶ್ನೆ ಎತ್ತಿದಾಗ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಸ್ಪಷ್ಟನೆ ನೀಡಿದರು.</p>.<p>ಸಂಸದ ಕರಡಿ ಸಂಗಣ್ಣ, ಶಾಸಕ ಪರಣ್ಣ ಮುನವಳ್ಳಿ, ತುಂಗಭದ್ರಾ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಜಿಲ್ಲಾ ಪಂಚಾಯಿತಿ ಸಿಇಒ ಫೌಜಿಯಾ ತರನ್ನುಮ್, ಸಹಾಯಕ ಆಯುಕ್ತ<br />ನಾರಾಯಣರೆಡ್ಡಿ ಕನಕರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ್, ಡಿವೈಎಸ್ಪಿ ಆರ್. ಎಸ್.ಉಜ್ಜನಕೊಪ್ಪ, ಇನ್ಸ್ಪೆಕ್ಟರ್ ಉದಯರವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರಟಗಿ: ಕೋವಿಡ್ 3ನೇ ಅಲೆ ನಿಯಂತ್ರಣಕ್ಕಾಗಿ ಕೈಗೊಂಡ ಕ್ರಮಗಳ ಕುರಿತು ಸಮಾಲೋಚಿಸಲು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಶನಿವಾರ ಅಧಿಕಾರಿಗಳ ಸಭೆ ನಡೆಸಿದರು.</p>.<p>ಪಟ್ಟಣದ ವಿಶೇಷ ಎಪಿಎಂಸಿ ಸಭಾಂಗಣದಲ್ಲಿ ಕಾರಟಗಿ ಹಾಗೂ ಕನಕಗಿರಿ ತಾಲ್ಲೂಕುಗಳ ಕೋವಿಡ್ 3ನೇ ಅಲೆ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಸಭೆಯಲ್ಲಿ ಸಚಿವರು ಜಿಲ್ಲಾ ಆರೋಗ್ಯಾಧಿಕಾರಿ ಲಿಂಗಾರೆಡ್ಡಿಯವರಿಂದ ಮಾಹಿತಿ ಪಡೆದರು.</p>.<p>ನಂತರ ಮಾತನಾಡಿ, ಈಗಾಗಲೇ ರಾಜ್ಯದಲ್ಲಿ ಕೋವಿಡ್ 3ನೇ ಅಲೆ ಆರಂಭಗೊಂಡಿದ್ದು, ಸೆಪ್ಟಂಬರ್ ವೇಳೆಗೆ ತೀವ್ರವಾಗುವ ಅಂದಾಜಿದೆ. ಆ.1ರಿಂದ ಇಲ್ಲಿಯವರೆಗೆ ಕಾರಟಗಿ ತಾಲ್ಲೂಕಿನಲ್ಲಿ 1 ಹಾಗೂ ಕನಕಗಿರಿ ತಾಲ್ಲೂಕಿನಲ್ಲಿ 2 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ತಾಲ್ಲೂಕಿನಲ್ಲಿ ಸೋಂಕು ನಿಯಂತ್ರಣಕ್ಕೆ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಕನಕಗಿರಿಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ಆಸ್ಪತ್ರೆ ಆರಂಭಿಸುವ ಚಿಂತನೆ ಇದೆ ಎಂದರು.</p>.<p>ಶಾಸಕ ಬಸವರಾಜ ದಢೇಸುಗೂರ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಲಿಂಗಾರೆಡ್ಡಿ ಮಾತನಾಡಿದರು.</p>.<p class="Subhead">ಜಿಲ್ಲೆಗೆ 8 ಕೋಟಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ₹ 8 ಕೋಟಿ ಅನುದಾನ ಬಂದಿದ್ದು, ಪ್ರತಿ ತಾಲ್ಲೂಕಿಗೆ ₹ ಕೋಟಿಯಂತೆ ಹಂಚಿಕೆ ಮಾಡಲು ತಿಳಿಸಲಾಗಿದೆ.<br />ಆಸ್ಪತ್ರೆಗಳಲ್ಲಿ ಉಪಕರಣಗಳ ಖರೀದಿ ಸೇರಿದಂತೆ ಆರೋಗ್ಯ ವಲಯಕ್ಕೆ ಬಳಸುವಂತೆ ಉಸ್ತುವಾರಿ ಸಚಿವರು ಸೂಚಿಸಿದರು.</p>.<p>ರಾಜ್ಯದಲ್ಲಿ ಮರಳು ಕೊರತೆ ನೀಗಿಸಲು ಎಂ- ಸ್ಯಾಂಡ್ ಉತ್ಪಾದನೆಗೆ ಚಿಂತನೆ ನಡೆದಿದ್ದು, ಇದರಿಂದ ಮರಳಿನ ಕಾಳಸಂತೆಗೆ ಕಡಿವಾಣ ಹಾಕಬಹುದು. ಈ ನಿಟ್ಟಿನಲ್ಲಿ ಜಿಲ್ಲೆಯ<br />ಅಧಿಕಾರಿಗಳು ಸಮಗ್ರವಾಗಿ ವರದಿ ಕಳಿಸುವಂತೆ ತಿಳಿಸಿದರು.</p>.<p>ಗೋಮಾಳ, ಗೈರಾಣು ಭೂಮಿಯಲ್ಲಿ ನೆಲೆಸಿರುವ ಹಾಗೂ ಕೃಷಿ ಚಟುವಟಿಕೆ ನಡೆಸುತ್ತಿರುವ ಅರ್ಹ ಕುಟುಂಬಗಳಿಗೆ ಭೂಮಿ ಮಂಜೂರುಗೊಳಿಸುವ ಕುರಿತು ಶಾಸಕ ದಢೇಸೂಗೂರು ಪ್ರಶ್ನೆ ಎತ್ತಿದಾಗ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಸ್ಪಷ್ಟನೆ ನೀಡಿದರು.</p>.<p>ಸಂಸದ ಕರಡಿ ಸಂಗಣ್ಣ, ಶಾಸಕ ಪರಣ್ಣ ಮುನವಳ್ಳಿ, ತುಂಗಭದ್ರಾ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಜಿಲ್ಲಾ ಪಂಚಾಯಿತಿ ಸಿಇಒ ಫೌಜಿಯಾ ತರನ್ನುಮ್, ಸಹಾಯಕ ಆಯುಕ್ತ<br />ನಾರಾಯಣರೆಡ್ಡಿ ಕನಕರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ್, ಡಿವೈಎಸ್ಪಿ ಆರ್. ಎಸ್.ಉಜ್ಜನಕೊಪ್ಪ, ಇನ್ಸ್ಪೆಕ್ಟರ್ ಉದಯರವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>