<p><strong>ಕೊಪ್ಪಳ</strong>: ಗಂಗಾವತಿ ನಗರ, ಶ್ರೀರಾಮನಗರಗಳನ್ನು ಕೊರೊನಾ ಹಾಟ್ ಸ್ಪಾಟ್ಗಳೆಂದು ಗುರುತಿಸಿ, ಜುಲೈ 21ರ ರಾತ್ರಿ 8ರಿಂದ 10 ದಿನಗಳ ಕಾಲ ಸಂಪೂರ್ಣ ಲಾಕ್ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಕೋವಿಡ್–19 ಕುರಿತ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಲಾಕ್ಡೌನ್ ಪ್ರದೇಶಗಳಲ್ಲಿ ತುರ್ತು ಸೇವೆಗಳಾದ ಆಹಾರ ಪದಾರ್ಥ, ಕೃಷಿ ಚಟುವಟಿಕೆ, ರಸಗೊಬ್ಬರ ಮಾರಾಟಕ್ಕೆ, ಹಾಲಿನ ಬೂತ್, ಮೆಡಿಕಲ್ ಷಾಪ್ಗಳಿಗೆ ವಿನಾಯಿತಿ ನೀಡಲಾಗಿದೆ. ಮದ್ಯದಂಗಡಿಬಂದ್ ಇರುತ್ತವೆ. ಲಾಕ್ಡೌನ್ ಸಂಬಂಧ ಜಿಲ್ಲಾಧಿಕಾರಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದ್ದಾರೆ ಎಂದರು.</p>.<p>₹ 55 ಲಕ್ಷ ಮೊತ್ತದಲ್ಲಿ 1,343 ಆಶಾಕಾರ್ಯಕರ್ತೆಯರಿಗೆ ಹೆಲ್ತ್ ಕಿಟ್ ಖರೀದಿಸಲಾಗುವುದು. ತಾಲ್ಲೂಕುವಾರು ಐಸಿಯು ಬೆಡ್ ಮಾನಿಟರ್ಗಳಿಗೆ ₹ 76 ಲಕ್ಷ ವೆಚ್ಚ ಮಾಡಲಾಗುತ್ತಿದೆ. ಲ್ಯಾಬ್ ಟೆಕ್ನಿಷಿಯನ್ಸ್ಗಳ ಕೊರತೆ ನೀಗಿಸಲು ಈಗಾಗಲೇ 13 ಜನರ ಟೆಂಡರ್ ಕರೆಯಲಾಗಿದ್ದು, ಆದಷ್ಟು ಬೇಗ ಅವರನ್ನು ನೇಮಕ ಮಾಡಲಾಗುವುದು ಎಂದರು.</p>.<p>ತುರ್ತು ಲಭ್ಯತೆ ಅವಶ್ಯಕತೆ ನೋಡಿಕೊಂಡು ಮುಂದಿನ ದಿನಗಳಲ್ಲಿ ಇದನ್ನು ಹೆಚ್ಚಿಸಲಾಗುವುದು. 30 ಮೊಬೈಲ್ ಹೆಲ್ತ್ ಯೂನಿಟ್ಗಳನ್ನು ಜಿಲ್ಲೆಯಾದ್ಯಂತ ಆರಂಭಿಸುವುದಾಗಿ ಹಾಗೂ ಜಿಲ್ಲೆಯ ಗಡಿಭಾಗಗಳಲ್ಲಿ ಅಂತರ್ ಜಿಲ್ಲಾ ಚೆಕ್ಪೋಸ್ಟ್ ಆರಂಭಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.</p>.<p>ರಾಜ್ಯದಲ್ಲಿ ರಸಗೊಬ್ಬರದ ಕೊರತೆಯಿಲ್ಲ:</p>.<p>ಯಾರಾದರೂ ಕೃತಕವಾಗಿ ಗೊಬ್ಬರದ ಅಭಾವ ಸೃಷ್ಟಿಸಿದರೆ ಅಂತವರ ವಿರುದ್ಧ ಕೃಷಿ ಅಧಿಕಾರಿಗಳು ಮುಲಾಜಿಲ್ಲದೆ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.ಎಲ್ಲ ಕಡೆಗಳಲ್ಲಿಯೂ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿವೆ. ಜಿಲ್ಲೆಯಲ್ಲೂ ಪ್ರಕರಣಗಳು ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಅಧಿಕಾರಿಗಳ ಸಭೆ ನಡೆಸಿ, ಚರ್ಚಿಸಲಾಗಿದೆ ಎಂದರು.</p>.<p>ಲಾಕ್ಡೌನ್ ಮಾಡಿದರೆ ಕರೊನಾ ಹೋಗುತ್ತದೆ. ಇಲ್ಲದಿದ್ದರೆ ಹೋಗುವುದಿಲ್ಲ ಎನ್ನುವುದೆಲ್ಲ ತಪ್ಪು. ಸರ್ಕಾರದ ಸೂಚನೆಗಳಿಗೆ ಜನರ ಸಹಕಾರ ಬೇಕು. ರಾಜ್ಯ ಸರ್ಕಾದ ವಿಫಲ ಆಗಿಲ್ಲ. ನಿಯಂತ್ರಣಕ್ಕೆ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.</p>.<p>ಸಂಸದ ಸಂಗಣ್ಣ ಕರಡಿ, ಕನಕಗಿರಿ ಶಾಸಕ ಬಸವರಾಜ್ ದಡೇಸ್ಗೂರು, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್, ಜಿಲ್ಲಾ ಪಂಚಾಯಿತಿ ಸಿಇಓ ರಘುನಂದನಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಗಂಗಾವತಿ ನಗರ, ಶ್ರೀರಾಮನಗರಗಳನ್ನು ಕೊರೊನಾ ಹಾಟ್ ಸ್ಪಾಟ್ಗಳೆಂದು ಗುರುತಿಸಿ, ಜುಲೈ 21ರ ರಾತ್ರಿ 8ರಿಂದ 10 ದಿನಗಳ ಕಾಲ ಸಂಪೂರ್ಣ ಲಾಕ್ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಕೋವಿಡ್–19 ಕುರಿತ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಲಾಕ್ಡೌನ್ ಪ್ರದೇಶಗಳಲ್ಲಿ ತುರ್ತು ಸೇವೆಗಳಾದ ಆಹಾರ ಪದಾರ್ಥ, ಕೃಷಿ ಚಟುವಟಿಕೆ, ರಸಗೊಬ್ಬರ ಮಾರಾಟಕ್ಕೆ, ಹಾಲಿನ ಬೂತ್, ಮೆಡಿಕಲ್ ಷಾಪ್ಗಳಿಗೆ ವಿನಾಯಿತಿ ನೀಡಲಾಗಿದೆ. ಮದ್ಯದಂಗಡಿಬಂದ್ ಇರುತ್ತವೆ. ಲಾಕ್ಡೌನ್ ಸಂಬಂಧ ಜಿಲ್ಲಾಧಿಕಾರಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದ್ದಾರೆ ಎಂದರು.</p>.<p>₹ 55 ಲಕ್ಷ ಮೊತ್ತದಲ್ಲಿ 1,343 ಆಶಾಕಾರ್ಯಕರ್ತೆಯರಿಗೆ ಹೆಲ್ತ್ ಕಿಟ್ ಖರೀದಿಸಲಾಗುವುದು. ತಾಲ್ಲೂಕುವಾರು ಐಸಿಯು ಬೆಡ್ ಮಾನಿಟರ್ಗಳಿಗೆ ₹ 76 ಲಕ್ಷ ವೆಚ್ಚ ಮಾಡಲಾಗುತ್ತಿದೆ. ಲ್ಯಾಬ್ ಟೆಕ್ನಿಷಿಯನ್ಸ್ಗಳ ಕೊರತೆ ನೀಗಿಸಲು ಈಗಾಗಲೇ 13 ಜನರ ಟೆಂಡರ್ ಕರೆಯಲಾಗಿದ್ದು, ಆದಷ್ಟು ಬೇಗ ಅವರನ್ನು ನೇಮಕ ಮಾಡಲಾಗುವುದು ಎಂದರು.</p>.<p>ತುರ್ತು ಲಭ್ಯತೆ ಅವಶ್ಯಕತೆ ನೋಡಿಕೊಂಡು ಮುಂದಿನ ದಿನಗಳಲ್ಲಿ ಇದನ್ನು ಹೆಚ್ಚಿಸಲಾಗುವುದು. 30 ಮೊಬೈಲ್ ಹೆಲ್ತ್ ಯೂನಿಟ್ಗಳನ್ನು ಜಿಲ್ಲೆಯಾದ್ಯಂತ ಆರಂಭಿಸುವುದಾಗಿ ಹಾಗೂ ಜಿಲ್ಲೆಯ ಗಡಿಭಾಗಗಳಲ್ಲಿ ಅಂತರ್ ಜಿಲ್ಲಾ ಚೆಕ್ಪೋಸ್ಟ್ ಆರಂಭಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.</p>.<p>ರಾಜ್ಯದಲ್ಲಿ ರಸಗೊಬ್ಬರದ ಕೊರತೆಯಿಲ್ಲ:</p>.<p>ಯಾರಾದರೂ ಕೃತಕವಾಗಿ ಗೊಬ್ಬರದ ಅಭಾವ ಸೃಷ್ಟಿಸಿದರೆ ಅಂತವರ ವಿರುದ್ಧ ಕೃಷಿ ಅಧಿಕಾರಿಗಳು ಮುಲಾಜಿಲ್ಲದೆ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.ಎಲ್ಲ ಕಡೆಗಳಲ್ಲಿಯೂ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿವೆ. ಜಿಲ್ಲೆಯಲ್ಲೂ ಪ್ರಕರಣಗಳು ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಅಧಿಕಾರಿಗಳ ಸಭೆ ನಡೆಸಿ, ಚರ್ಚಿಸಲಾಗಿದೆ ಎಂದರು.</p>.<p>ಲಾಕ್ಡೌನ್ ಮಾಡಿದರೆ ಕರೊನಾ ಹೋಗುತ್ತದೆ. ಇಲ್ಲದಿದ್ದರೆ ಹೋಗುವುದಿಲ್ಲ ಎನ್ನುವುದೆಲ್ಲ ತಪ್ಪು. ಸರ್ಕಾರದ ಸೂಚನೆಗಳಿಗೆ ಜನರ ಸಹಕಾರ ಬೇಕು. ರಾಜ್ಯ ಸರ್ಕಾದ ವಿಫಲ ಆಗಿಲ್ಲ. ನಿಯಂತ್ರಣಕ್ಕೆ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.</p>.<p>ಸಂಸದ ಸಂಗಣ್ಣ ಕರಡಿ, ಕನಕಗಿರಿ ಶಾಸಕ ಬಸವರಾಜ್ ದಡೇಸ್ಗೂರು, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್, ಜಿಲ್ಲಾ ಪಂಚಾಯಿತಿ ಸಿಇಓ ರಘುನಂದನಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>