ಗುತ್ತಗೆದಾರರು ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಕಳಪೆ ಕಾಮಗಾರಿ ನಡೆದರೆ ಸಾರ್ವಜನಿಕರು ಇಲಾಖೆ ಅಧಿಕಾರಿಗಳ ಗಮನಕ್ಕೆ ತರಬೇಕು. ಒಂದೂವರೆ ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಈ ರಸ್ತೆಯನ್ನು ಐದು ವರ್ಷ ನಿರ್ವಹಣೆ ಹಾಗೂ ಆರನೇ ವರ್ಷದಲ್ಲಿ ಮರು ಡಾಂಬರೀಕರಣ ಮಾಡಲಾಗುತ್ತದೆ ಎಂದು ಹೇಳಿದರು. ಶಾಸಕ ಅಮರೇಗೌಡ ಬಯ್ಯಾಪುರ ಮಾತನಾಡಿ,‘ರಸ್ತೆ ನಿರ್ಮಾಣ ಮತ್ತು ಡಾಂಬರೀಕರಣ ಮಾಡುವ ಸಂದರ್ಭದಲ್ಲಿ ಅಕ್ಕ-ಪಕ್ಕದ ಜಮೀನಿನ ಮಾಲೀಕರು ಸಹಕಾರ ನೀಡಬೇಕು’ ಎಂದರು. ಉದ್ಯಮಿ ಬಸನಗೌಡ ಮಾಲಿಪಾಟೀಲ, ವೀರಭದ್ರಪ್ಪ ನಾಲತವಾಡ, ಪ.ಪಂ ಅಧ್ಯಕ್ಷ ವಿಕ್ರಮ್ ರಾಯ್ಕರ್, ಚಂದ್ರಶೇಖರ ನಾಲತವಾಡ, ಮಂಜುನಾಥ ಜೂಲಕುಂಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರುದ್ರಗೌಡ ಕುಲಕರ್ಣಿ, ಮರೇಗೌಡ ನಂದಾಪೂರ, ದುರಗೇಶ ಇದ್ಲಾಪೂರು, ಬಾಳಪ್ಪ ಹಾಗಲದಾಳ ಹಾಗೂ ದೊಡ್ಡನಗೌಡ ಜುಮಲಾಪೂರ ಇದ್ದರು.