<p>ಕನಕಗಿರಿ: ‘ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಮು ನಾಯಕ ಅಭಿಪ್ರಾಯಪಟ್ಟರು.</p>.<p>ಸಮೀಪದ ಹಿರೇಖೇಡ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆಯಲ್ಲಿ ಮಾತನಾಡಿದರು.</p>.<p>‘ಪಾಲಕರು ಮಕ್ಕಳ ಆಸಕ್ತಿ, ಅಭಿರುಚಿಗೆ ತಕ್ಕಂತೆ ಶಿಕ್ಷಣ ಕೊಡಿಸಬೇಕು. ಬಡತನದ ನೆಪದಲ್ಲಿ ಮಕ್ಕಳ ಶಿಕ್ಷಣವನ್ನು ಕುಂಠಿತಗೊಳಿಸಬಾರದು’ ಎಂದು ಹೇಳಿದರು.</p>.<p>ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಯಾದಿ ತಯಾರಿಸಿ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.</p>.<p>‘ಬಾಲ್ಯವಿವಾಹ, ಬಾಲಕಾರ್ಮಿಕ ಪದ್ದತಿ ಕಾನೂನು ಬಾಹಿರ. ಹೋಟೆಲ್, ಗಾರೆ ಕೆಲಸದಲ್ಲಿ ಮಕ್ಕಳನ್ನು ಬಳಸಿಕೊಳ್ಳಬಾರದು ಹಾಗೊಂದು ವೇಳೆ ಕಂಡು ಬಂದರೆ ಕಾನೂನು ಕ್ರಮ ಜರುಗಿಸಲಾಗುವುದು’ ಎಂದರು.</p>.<p>ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಚಂದುಸಾಬ, ಅಂಗನವಾಡಿ ಕಾರ್ಯಕರ್ತೆಯರ ಮೇಲ್ವಿಚಾರಕಿ ಶ್ರೀದೇವಿ ಮಾತನಾಡಿದರು.</p>.<p>ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆ ಇದೆ. ವಿವಿಧ ಶಾಲೆಗಳಲ್ಲಿ ಮೈದಾನ, ಕುಡಿಯುವ ನೀರು, ಶೌಚಾಲಯ ಸಮಸ್ಯೆ ಇದೆ. ಗ್ರಾಮೀಣ ಭಾಗಕ್ಕೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.</p>.<p>ಮುಖ್ಯಶಿಕ್ಷಕ ಶ್ರೀನಿವಾಸ ಹುನಗುಂದ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕ ತಿಪ್ಪೇಶ, ಶಿಕ್ಷಕರಾದ ತಿಪ್ಪಣ್ಣ ಹಾಗೂ ಗಣೇಶ ಪೂಜಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಗಿರಿ: ‘ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಮು ನಾಯಕ ಅಭಿಪ್ರಾಯಪಟ್ಟರು.</p>.<p>ಸಮೀಪದ ಹಿರೇಖೇಡ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆಯಲ್ಲಿ ಮಾತನಾಡಿದರು.</p>.<p>‘ಪಾಲಕರು ಮಕ್ಕಳ ಆಸಕ್ತಿ, ಅಭಿರುಚಿಗೆ ತಕ್ಕಂತೆ ಶಿಕ್ಷಣ ಕೊಡಿಸಬೇಕು. ಬಡತನದ ನೆಪದಲ್ಲಿ ಮಕ್ಕಳ ಶಿಕ್ಷಣವನ್ನು ಕುಂಠಿತಗೊಳಿಸಬಾರದು’ ಎಂದು ಹೇಳಿದರು.</p>.<p>ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಯಾದಿ ತಯಾರಿಸಿ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.</p>.<p>‘ಬಾಲ್ಯವಿವಾಹ, ಬಾಲಕಾರ್ಮಿಕ ಪದ್ದತಿ ಕಾನೂನು ಬಾಹಿರ. ಹೋಟೆಲ್, ಗಾರೆ ಕೆಲಸದಲ್ಲಿ ಮಕ್ಕಳನ್ನು ಬಳಸಿಕೊಳ್ಳಬಾರದು ಹಾಗೊಂದು ವೇಳೆ ಕಂಡು ಬಂದರೆ ಕಾನೂನು ಕ್ರಮ ಜರುಗಿಸಲಾಗುವುದು’ ಎಂದರು.</p>.<p>ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಚಂದುಸಾಬ, ಅಂಗನವಾಡಿ ಕಾರ್ಯಕರ್ತೆಯರ ಮೇಲ್ವಿಚಾರಕಿ ಶ್ರೀದೇವಿ ಮಾತನಾಡಿದರು.</p>.<p>ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆ ಇದೆ. ವಿವಿಧ ಶಾಲೆಗಳಲ್ಲಿ ಮೈದಾನ, ಕುಡಿಯುವ ನೀರು, ಶೌಚಾಲಯ ಸಮಸ್ಯೆ ಇದೆ. ಗ್ರಾಮೀಣ ಭಾಗಕ್ಕೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.</p>.<p>ಮುಖ್ಯಶಿಕ್ಷಕ ಶ್ರೀನಿವಾಸ ಹುನಗುಂದ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕ ತಿಪ್ಪೇಶ, ಶಿಕ್ಷಕರಾದ ತಿಪ್ಪಣ್ಣ ಹಾಗೂ ಗಣೇಶ ಪೂಜಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>