ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಗಾವತಿ: ಭಾರಿ ವಾಹನ ಸಂಚಾರ ನಿಷೇಧಕ್ಕೆ ಮನವಿ

ಆಲ್ ಇಂಡಿಯಾ ಬಂಜಾರ ಸೇವಾ ಸಂಘಟನೆಯ ಪ್ರತಿಭಟನೆ
Last Updated 30 ಅಕ್ಟೋಬರ್ 2019, 11:29 IST
ಅಕ್ಷರ ಗಾತ್ರ

ಗಂಗಾವತಿ: ನಗರದಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಹಾಗೂ ಎಚ್.ಜಿ.ರಾಮುಲು ಮನೆಯಿಂದ ಸಾಯಿಬಾಬಾ ದೇವಸ್ಥಾನದವರೆಗೂ ರಸ್ತೆ ಅಗಲೀಕರಣ ಮಾಡುವಂತೆ ಒತ್ತಾಯಿಸಿ ಆಲ್ ಇಂಡಿಯಾ ಬಂಜಾರ ಸೇವಾ ಸಂಘಟನೆಯು ಬುಧವಾರ ಪ್ರತಿಭಟನೆ ನಡೆಸಿ ಶಿರಸ್ತೇದಾರ ವಿ.ಎಚ್.ಹೊರಪೇಟೆ ಅವರಿಗೆ ಮನವಿ ಸಲ್ಲಿಸಿತು.

ಈ ವೇಳೆ ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಲಕ್ಷ್ಮಣ ನಾಯ್ಕ ಮಾತನಾಡಿ, ನಗರದ ಎಚ್.ಜಿ.ರಾಮುಲು ಅವರ ಮನೆಯಿಂದ ಸಾಯಿಬಾಬಾ ದೇವಸ್ಥಾನದವರೆಗೆ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಅಲ್ಲದೇ ಈ ರಸ್ತೆಯ ಮೇಲೆ ಇತ್ತಿಚೆಗೆ ಭಾರಿ ವಾಹನಗಳ ಓಡಾಟ ಹೆಚ್ಚಾಗಿ, ರಸ್ತೆಯು ಸಂಪೂರ್ಣ ಹದಗೆಟ್ಟಿದೆ ಎಂದರು.

ರಸ್ತೆ ಕಿರಿದಾಗಿರುವುದರಿಂದ ಅಪಘಾತಗಳು ಹೆಚ್ಚಿವೆ. ರಸ್ತೆಯಲ್ಲಿನ ಧೂಳು ಸಹ ಶಾಲಾ ಕಾಲೇಜುಗಳಿಗೆ ತೆರಳುವ ಮಕ್ಕಳನ್ನು ಹೈರಾಣಾಗಿಸಿದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ರಸ್ತೆ ಮೇಲೆ ಓಡಾಡುವ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಬೇಕು. ರಸ್ತೆಯನ್ನು ಅಗಲೀಕರಣ ಮಾಡಬೇಕು ಎಂದು ಒತ್ತಾಯಿಸಿದರು.

ಇದಕ್ಕೂ ಮುನ್ನ ನಗರದ ಸೇವಾಲಾಲ್ ವೃತ್ತದಲ್ಲಿ ಲಾರಿಗಳನ್ನು ತಡೆದು ಪ್ರತಿಭಟನೆ ನಡೆಸಿಲಾಯಿತು. ಪ್ರತಿಭಟನೆಗೆ ಬೇತೆಲ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಥ್ ನೀಡಿದರು.

ಈ ವೇಳೆ ಸಂಘಟನೆಯ ಪದಾಧಿಕಾರಿಗಳಾದ ಹನುಮಂತ, ಗಾಳೆಪ್ಪ, ಪ್ರಕಾಶ, ರಾಮು, ಮಂಜು ನಾಯಕ, ಶಿವಪ್ಪ, ವೆಂಕಟೇಶ್ ಜಾಧವ, ಕೃಷ್ಣ, ರವಿ ಚೌಹಾಣ್, ಸುರೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT