<p>ಕಾರಟಗಿ: ಬಿಸಿಯೂಟ ಸಿಬ್ಬಂದಿಯನ್ನು ಕಾಯಂ ಗೊಳಿಸಬೇಕು. ಕನಿಷ್ಠ ₹21 ಸಾವಿರ ಮಾಸಿಕ ವೇತನ ನೀಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ನ ತಾಲ್ಲೂಕು ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.</p>.<p>ಬಿಸಿ ಯೂಟದ ಸಿಬ್ಬಂದಿಯನ್ನು ಕಾರ್ಮಿಕ ಇಲಾಖೆ ವ್ಯಾಪ್ತಿಗೊಳಪಡಿಸಬೇಕು. ಅಡುಗೆ ತಯಾರಿಕೆ ಮತ್ತು ಪೂರೈಕೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುವ ನಿರ್ಧಾರ ಕೈಬಿಡಬೇಕು. ನಿವೃತ್ತಿಯ ಬಳಿಕ ₹2 ಲಕ್ಷ ಇಡಗಂಟು ಮತ್ತು ಮಾಸಿಕ ₹3 ಸಾವಿರ ಪಿಂಚಣಿ ನೀಡಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.</p>.<p>19 ವರ್ಷಗಳಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಬಿಸಿಯೂಟ ಯೋಜನೆಯಡಿ ರಾಜ್ಯದಾದ್ಯಂತ 1.28 ಲಕ್ಷ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಖ್ಯ ಅಡುಗೆದಾರರಿಗೆ ಮಾಸಿಕ ₹2,700, ಸಹಾಯಕ ಅಡುಗೆದಾರರಿಗೆ ₹2,600 ಗೌರವಧನ ನೀಡುತ್ತಿವೆ. ಇದರಲ್ಲಿ ಜೀವನ ನಿರ್ವಹಣೆಗೆ ಕಷ್ಟಕರವಾಗಿದೆ. ಶೀಘ್ರವೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೇಡಿಕೆ ಈಡೇರಿಸಬೇಕು ಎಂದು ಗ್ರೇಡ್- 2 ತಹಶೀಲ್ದಾರ್ ವಿಶ್ವನಾಥ ಮುರಡಿ ಅವರಿಗೆ<br />ಸಲ್ಲಿಸಿದರು.</p>.<p>ಎಐಟಿಯುಸಿ ತಾಲ್ಲೂಕು ಘಟಕದ ಅಧ್ಯಕ್ಷೆ ನೀಲಮ್ಮ, ಪದಾಧಿಕಾರಿಗಳಾದ ಗೌರಮ್ಮ, ಸುನಿತಾ, ರೇಣುಕಾ, ಪ್ರೇಮಾ, ಶೋಭಾ, ಗೀತಾ ಹಾಗೂ ಮಹಾದೇವಿ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರಟಗಿ: ಬಿಸಿಯೂಟ ಸಿಬ್ಬಂದಿಯನ್ನು ಕಾಯಂ ಗೊಳಿಸಬೇಕು. ಕನಿಷ್ಠ ₹21 ಸಾವಿರ ಮಾಸಿಕ ವೇತನ ನೀಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ನ ತಾಲ್ಲೂಕು ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.</p>.<p>ಬಿಸಿ ಯೂಟದ ಸಿಬ್ಬಂದಿಯನ್ನು ಕಾರ್ಮಿಕ ಇಲಾಖೆ ವ್ಯಾಪ್ತಿಗೊಳಪಡಿಸಬೇಕು. ಅಡುಗೆ ತಯಾರಿಕೆ ಮತ್ತು ಪೂರೈಕೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುವ ನಿರ್ಧಾರ ಕೈಬಿಡಬೇಕು. ನಿವೃತ್ತಿಯ ಬಳಿಕ ₹2 ಲಕ್ಷ ಇಡಗಂಟು ಮತ್ತು ಮಾಸಿಕ ₹3 ಸಾವಿರ ಪಿಂಚಣಿ ನೀಡಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.</p>.<p>19 ವರ್ಷಗಳಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಬಿಸಿಯೂಟ ಯೋಜನೆಯಡಿ ರಾಜ್ಯದಾದ್ಯಂತ 1.28 ಲಕ್ಷ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಖ್ಯ ಅಡುಗೆದಾರರಿಗೆ ಮಾಸಿಕ ₹2,700, ಸಹಾಯಕ ಅಡುಗೆದಾರರಿಗೆ ₹2,600 ಗೌರವಧನ ನೀಡುತ್ತಿವೆ. ಇದರಲ್ಲಿ ಜೀವನ ನಿರ್ವಹಣೆಗೆ ಕಷ್ಟಕರವಾಗಿದೆ. ಶೀಘ್ರವೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೇಡಿಕೆ ಈಡೇರಿಸಬೇಕು ಎಂದು ಗ್ರೇಡ್- 2 ತಹಶೀಲ್ದಾರ್ ವಿಶ್ವನಾಥ ಮುರಡಿ ಅವರಿಗೆ<br />ಸಲ್ಲಿಸಿದರು.</p>.<p>ಎಐಟಿಯುಸಿ ತಾಲ್ಲೂಕು ಘಟಕದ ಅಧ್ಯಕ್ಷೆ ನೀಲಮ್ಮ, ಪದಾಧಿಕಾರಿಗಳಾದ ಗೌರಮ್ಮ, ಸುನಿತಾ, ರೇಣುಕಾ, ಪ್ರೇಮಾ, ಶೋಭಾ, ಗೀತಾ ಹಾಗೂ ಮಹಾದೇವಿ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>