<p><strong>ಕಾರಟಗಿ:</strong> ‘ಬಾಕಿ ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ತಾಲ್ಲೂಕು ಒಕ್ಕೂಟದ ಪದಾಧಿಕಾರಿಗಳು ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ಗ್ರೇಡ್ 2 ತಹಶೀಲ್ದಾರ್ ವಿಶ್ವನಾಥ ಮುರಡಿ ಅವರಿಗೆ ಮನವಿ ಸಲ್ಲಿಸಿದರು.</p>.<p>ನೂರಾರು ಬಿಸಿಯೂಟ ತಯಾರಕರು ಸಿಐಟಿಯು ನೇತೃತ್ವದಲ್ಲಿ ಪಟ್ಟಣದ ಪುರಸಭೆಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ತಮ್ಮ ಹಕ್ಕುಗಳ ಈಡೇರಿಕೆಗೆ ಆಗ್ರಹಿಸುವ ಘೋಷಣೆಗಳನ್ನು ಕೂಗಿದರು.</p>.<p>ಅನುದಾನಿತ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಬಿಸಿಯೂಟ ತಯಾರಕರಿಗೆ ಮಾಸಿಕ ₹ 2700 ಹಾಗೂ ಅಡುಗೆ ಸಹಾಯಕರಿಗೆ ₹ 2600 ವೇತನ ನೀಡುತ್ತಿದ್ದು, ಇದರಿಂದ ಅವರ ಕುಟುಂಬದ ಜೀವನ ನಿರ್ವಹಣೆ ಮಾಡುವುದು ತುಂಬಾ ಕಷ್ಟಕರವಾಗಿದ್ದು, ತಕ್ಷಣವೇ ವೇತನ ಹೆಚ್ಚಿಸಬೇಕು. ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಒಕ್ಕೂಟದ ತಾಲ್ಲೂಕು ಸಮಿತಿ ಅಧ್ಯಕ್ಷೆ ನೀಲಮ್ಮ, ಪ್ರಧಾನ ಕಾರ್ಯದರ್ಶಿ ಬಿ. ಸುನಿತಾ ಅವರು ಮಾತನಾಡಿ, ಬಾಕಿ ವೇತನ ಬಿಡುಗಡೆಯ ಜೊತೆಗೆ ಅಲಹಾಬಾದ್ ಹೈಕೋರ್ಟ್ ತೀರ್ಪಿನಂತೆ ಕನಿಷ್ಠ ವೇತನವನ್ನು ರಾಜ್ಯ ಸರ್ಕಾರ ಘೋಷಿಸಬೇಕು. ಕೋವಿಡ್ ಲಾಕ್ಡೌನ್ ಪರಿಹಾರವಾಗಿ ₹ 5 ಸಾವಿರ ನೀಡಬೇಕು ಎಂದು<br />ಒತ್ತಾಯಿಸಿದರು.</p>.<p>ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಹುಲಗಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಿಮ್ಮಣ್ಣ, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಶಿವಮ್ಮ ಹುಡೇದ, ಉಪಾಧ್ಯಕ್ಷೆ ಗೌರಿ ಬೇವಿನಾಳ, ಖಜಾಂಚಿ ರೇಣುಕಾ ಬೂದಗುಂಪಾ, ಸಹಕಾರ್ಯದರ್ಶಿ ಪ್ರೇಮ ಪ್ರಮುಖರಾದ ಶೋಭಾ, ಗೀತಾ, ಮಹಾದೇವಿ, ರತ್ನಮ್ಮ, ಹುಲಿಗೆಮ್ಮ ಇದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರಟಗಿ:</strong> ‘ಬಾಕಿ ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ತಾಲ್ಲೂಕು ಒಕ್ಕೂಟದ ಪದಾಧಿಕಾರಿಗಳು ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ಗ್ರೇಡ್ 2 ತಹಶೀಲ್ದಾರ್ ವಿಶ್ವನಾಥ ಮುರಡಿ ಅವರಿಗೆ ಮನವಿ ಸಲ್ಲಿಸಿದರು.</p>.<p>ನೂರಾರು ಬಿಸಿಯೂಟ ತಯಾರಕರು ಸಿಐಟಿಯು ನೇತೃತ್ವದಲ್ಲಿ ಪಟ್ಟಣದ ಪುರಸಭೆಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ತಮ್ಮ ಹಕ್ಕುಗಳ ಈಡೇರಿಕೆಗೆ ಆಗ್ರಹಿಸುವ ಘೋಷಣೆಗಳನ್ನು ಕೂಗಿದರು.</p>.<p>ಅನುದಾನಿತ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಬಿಸಿಯೂಟ ತಯಾರಕರಿಗೆ ಮಾಸಿಕ ₹ 2700 ಹಾಗೂ ಅಡುಗೆ ಸಹಾಯಕರಿಗೆ ₹ 2600 ವೇತನ ನೀಡುತ್ತಿದ್ದು, ಇದರಿಂದ ಅವರ ಕುಟುಂಬದ ಜೀವನ ನಿರ್ವಹಣೆ ಮಾಡುವುದು ತುಂಬಾ ಕಷ್ಟಕರವಾಗಿದ್ದು, ತಕ್ಷಣವೇ ವೇತನ ಹೆಚ್ಚಿಸಬೇಕು. ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಒಕ್ಕೂಟದ ತಾಲ್ಲೂಕು ಸಮಿತಿ ಅಧ್ಯಕ್ಷೆ ನೀಲಮ್ಮ, ಪ್ರಧಾನ ಕಾರ್ಯದರ್ಶಿ ಬಿ. ಸುನಿತಾ ಅವರು ಮಾತನಾಡಿ, ಬಾಕಿ ವೇತನ ಬಿಡುಗಡೆಯ ಜೊತೆಗೆ ಅಲಹಾಬಾದ್ ಹೈಕೋರ್ಟ್ ತೀರ್ಪಿನಂತೆ ಕನಿಷ್ಠ ವೇತನವನ್ನು ರಾಜ್ಯ ಸರ್ಕಾರ ಘೋಷಿಸಬೇಕು. ಕೋವಿಡ್ ಲಾಕ್ಡೌನ್ ಪರಿಹಾರವಾಗಿ ₹ 5 ಸಾವಿರ ನೀಡಬೇಕು ಎಂದು<br />ಒತ್ತಾಯಿಸಿದರು.</p>.<p>ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಹುಲಗಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಿಮ್ಮಣ್ಣ, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಶಿವಮ್ಮ ಹುಡೇದ, ಉಪಾಧ್ಯಕ್ಷೆ ಗೌರಿ ಬೇವಿನಾಳ, ಖಜಾಂಚಿ ರೇಣುಕಾ ಬೂದಗುಂಪಾ, ಸಹಕಾರ್ಯದರ್ಶಿ ಪ್ರೇಮ ಪ್ರಮುಖರಾದ ಶೋಭಾ, ಗೀತಾ, ಮಹಾದೇವಿ, ರತ್ನಮ್ಮ, ಹುಲಿಗೆಮ್ಮ ಇದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>