ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹನುಮೇಶ ಕಡೇಮನಿ, ನಿಂಗಜ್ಜ ಬಂಡಿಹರ್ಲಾಪುರ, ಮಲ್ಲಿಕಾರ್ಜುನ ಪೂಜಾರ, ಯಲ್ಲಪ್ಪ ಹಳೇಮನಿ ಮತ್ತು ಲಕ್ಷ್ಮಣ ಬೇವಿನಗಿಡ ‘ಶಾಂತಿಯುತ ಹೋರಾಟ ಮಾಡುತ್ತಿದ್ದರೂ ಪೊಲೀಸರು ನಮ್ಮ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ಇದರಿಂದ ಜಿಲ್ಲೆಯ 30–40 ಜನ ಹೋರಾಟಗಾರರಿಗೆ ಗಾಯಗಳಾಗಿವೆ. ಪ್ರಕರಣಗಳನ್ನೂ ದಾಖಲಿಸಲಾಗಿದ್ದು, ಅವುಗಳನ್ನು ವಾಪಸ್ ಪಡೆಯಬೇಕು ಎಂದು ಡಿ. 15ರಂದು ಕೊಪ್ಪಳಕ್ಕೆ ಬರಲಿರುವ ಮುಖ್ಯಮಂತ್ರಿಗೆ ಮನವಿ ಮಾಡಲಾಗುವುದು’ ಎಂದರು.