<p><strong>ಗಂಗಾವತಿ: </strong>ಬೆಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಎಬಿವಿಪಿ ಸಂಘಟನೆ ನಡೆಸಿದ ಪ್ರತಿಭಟನೆಯಲ್ಲಿ ಪೋಲಿಸ್ ಇಲಾಖೆ ಎಬಿವಿಪಿ ಕಾರ್ಯರ್ತರ ಮೇಲೆ ನಡೆಸಿದ ಲಾಠಿ ಪ್ರಹಾರವನ್ನು ತೀವ್ರವಾಗಿ ಖಂಡಿಸಲಾಗುತ್ತದೆ ಎಂದು ಜಿಲ್ಲಾ ಸಂಚಾಲಕ ಸರ್ವಜ್ಞ ಮೂರ್ತಿ ಎಂದರು.</p>.<p>ನಗರದ ತಹಶೀಲ್ದಾರ ಕಚೇರಿ ಆವರಣದಲ್ಲಿ ಮಂಗಳವಾರ ಎಬಿವಿಪಿ ಸಂಘಟನೆ ಕಾರ್ಯರ್ತರ ಮೇಲೆ ನಡೆದ ಲಾಠಿ ಪ್ರಹಾರವನ್ನು ವಿರೋಧಿಸಿ, ಪ್ರತಿಭಟನೆ ನಡೆಸಿ, ಮಾತನಾಡಿದರು.</p>.<p>ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಪರೀಕ್ಷೆ, ಮೌಲ್ಯಮಾಪನ, ಫಲಿತಾಂಶ, ಅಂಕಪಟ್ಟಿ ವಿತರಣೆ ಸೇರಿದಂತೆ ಇತರೆ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿದೆ.</p>.<p>ಆದರೆ ಪೋಲಿಸ್ ಇಲಾಖೆ ವಿದ್ಯಾರ್ಥಿಗಳ ಸಮಸ್ಯೆಗಳನ್ನ ಕಂಡರಿಯದೆ, ಪ್ರತಿಭಟನೆಯಲ್ಲಿ ನಿರತರಾದ ಎಬಿವಿಪಿ ಕಾರ್ಯಕರ್ತರ ಮೇಲೆ ಮನಬಂದಂತೆ ಲಾಠಿ ಪ್ರಹಾರ ಮಾಡಲಾಗಿದೆ. ಇದರಿಂದ ಸಾಕಷ್ಟು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅನುಚಿತವಾಗಿ ವರ್ತಿಸಿದ ಪೊಲೀಸರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಈ ವೇಳೆಯಲ್ಲಿ ಸಂಘಟನೆಯ ಕಾರ್ಯರ್ಯತರು ಮತ್ತು ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿ, ಕೂಡಲೆ ತಪ್ಪಿಸ್ಥರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಈ ಕುರಿತು ಸರ್ಕಾರ ನಿರ್ಲಕ್ಷ್ಯತನ ವಹಿಸಿದ್ದಲ್ಲಿ, ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ತಹಶೀಲ್ದಾರರ ಮೂಲಕ ಗೃಹ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.</p>.<p>ನಗರ ಕಾರ್ಯದರ್ಶಿ ಗಾಳೇಶ ರಾಥೋಡ, ಅಮರೇಶ, ಲಕ್ಷ್ಮಿ ಭೋಸ್ಲೆ, ದಸ್ತಗಿರಿ, ಪ್ರವೀಣ್ , ಭೂಮಿಕಾ, ಶೈಲಜಾ, ಪೂರ್ಣಚಂದ್ರ, ವಿಜಯ ಕುಮಾರ, ನಾಗರಾಜ, ಲಿಂಗರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ: </strong>ಬೆಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಎಬಿವಿಪಿ ಸಂಘಟನೆ ನಡೆಸಿದ ಪ್ರತಿಭಟನೆಯಲ್ಲಿ ಪೋಲಿಸ್ ಇಲಾಖೆ ಎಬಿವಿಪಿ ಕಾರ್ಯರ್ತರ ಮೇಲೆ ನಡೆಸಿದ ಲಾಠಿ ಪ್ರಹಾರವನ್ನು ತೀವ್ರವಾಗಿ ಖಂಡಿಸಲಾಗುತ್ತದೆ ಎಂದು ಜಿಲ್ಲಾ ಸಂಚಾಲಕ ಸರ್ವಜ್ಞ ಮೂರ್ತಿ ಎಂದರು.</p>.<p>ನಗರದ ತಹಶೀಲ್ದಾರ ಕಚೇರಿ ಆವರಣದಲ್ಲಿ ಮಂಗಳವಾರ ಎಬಿವಿಪಿ ಸಂಘಟನೆ ಕಾರ್ಯರ್ತರ ಮೇಲೆ ನಡೆದ ಲಾಠಿ ಪ್ರಹಾರವನ್ನು ವಿರೋಧಿಸಿ, ಪ್ರತಿಭಟನೆ ನಡೆಸಿ, ಮಾತನಾಡಿದರು.</p>.<p>ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಪರೀಕ್ಷೆ, ಮೌಲ್ಯಮಾಪನ, ಫಲಿತಾಂಶ, ಅಂಕಪಟ್ಟಿ ವಿತರಣೆ ಸೇರಿದಂತೆ ಇತರೆ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿದೆ.</p>.<p>ಆದರೆ ಪೋಲಿಸ್ ಇಲಾಖೆ ವಿದ್ಯಾರ್ಥಿಗಳ ಸಮಸ್ಯೆಗಳನ್ನ ಕಂಡರಿಯದೆ, ಪ್ರತಿಭಟನೆಯಲ್ಲಿ ನಿರತರಾದ ಎಬಿವಿಪಿ ಕಾರ್ಯಕರ್ತರ ಮೇಲೆ ಮನಬಂದಂತೆ ಲಾಠಿ ಪ್ರಹಾರ ಮಾಡಲಾಗಿದೆ. ಇದರಿಂದ ಸಾಕಷ್ಟು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅನುಚಿತವಾಗಿ ವರ್ತಿಸಿದ ಪೊಲೀಸರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಈ ವೇಳೆಯಲ್ಲಿ ಸಂಘಟನೆಯ ಕಾರ್ಯರ್ಯತರು ಮತ್ತು ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿ, ಕೂಡಲೆ ತಪ್ಪಿಸ್ಥರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಈ ಕುರಿತು ಸರ್ಕಾರ ನಿರ್ಲಕ್ಷ್ಯತನ ವಹಿಸಿದ್ದಲ್ಲಿ, ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ತಹಶೀಲ್ದಾರರ ಮೂಲಕ ಗೃಹ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.</p>.<p>ನಗರ ಕಾರ್ಯದರ್ಶಿ ಗಾಳೇಶ ರಾಥೋಡ, ಅಮರೇಶ, ಲಕ್ಷ್ಮಿ ಭೋಸ್ಲೆ, ದಸ್ತಗಿರಿ, ಪ್ರವೀಣ್ , ಭೂಮಿಕಾ, ಶೈಲಜಾ, ಪೂರ್ಣಚಂದ್ರ, ವಿಜಯ ಕುಮಾರ, ನಾಗರಾಜ, ಲಿಂಗರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>