‘ಬಿ.ಆರ್. ಅಂಬೇಡ್ಕರ್ ಅವರು ನಮಗೆ ಮೀಸಲಾತಿ ನೀಡಿದರೂ ಅದು ಸರಿಯಾಗಿ ಹಂಚಿಕೆಯಾಗಿಲ್ಲ. ಪರಿಶಿಷ್ಟ ಜಾತಿಯಲ್ಲಿಯೇ ಬಹುಸಂಖ್ಯಾತರಾದ ಮಾದಿಗರಿಗೆ ಅನ್ಯಾಯವಾಗುತ್ತಿದೆ.ನ್ಯಾ.ಸದಾಶಿವ ಆಯೋಗ ವರದಿ ಬಗ್ಗೆ ಪರಿಶಿಷ್ಟ ಜಾತಿಯವರಲ್ಲಿಯೇ ಅನೇಕ ಪೂರ್ವಗ್ರಹಗಳಿದ್ದು, ಅವುಗಳ ಬಗ್ಗೆ ಮುಕ್ತವಾಗಿ ಎಲ್ಲರಿಗೂ ಗೊತ್ತಾಗಬೇಕು. ಇದಕ್ಕಾಗಿ ಬಹಿರಂಗ ಚರ್ಚೆ ಮಾಡಬೇಕು. ನಮ್ಮ ಸಮಾಜದಿಂದ ಚುನಾವಣೆಯಲ್ಲಿ ಗೆಲುವು ಪಡೆದ ಜನಪ್ರತಿನಿಧಿಗಳು ಆಯೋಗದ ವರದಿ ಬಗ್ಗೆ ಮೌನಕ್ಕೆ ಜಾರಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.