<p><strong>ಗಂಗಾವತಿ: </strong>ಇಲ್ಲಿನ ಹಿರೇಜಂತಕಲ್ಲಿನ 28ನೇ (32) ವಾರ್ಡ್ನಲ್ಲಿರವ ಡಾ.ಬಿ.ಆರ್ ಅಂಬೇಡ್ಕರ್ ಗ್ರಂಥಾಲಯಕ್ಕೆ ಗ್ರಂಥಪಾಲಕರನ್ನು ನಿಯೋಜಿಸುವಂತೆ ಆಗ್ರಹಿಸಿ ಮುಖಂಡ ಹುಸೇನಪ್ಪ ಹಂಚಿನಾಳ ನೇತೃತ್ವದಲ್ಲಿ ನಿವಾಸಿಗಳು ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.</p>.<p>ನಂತರ ಮಾತನಾಡಿ, ಗ್ರಂಥಾಲಯ ನಿರ್ಮಾಣವಾಗಿ ಹಲವು ವರ್ಷಗಳು ಕಳೆದಿವೆ. ಈವರೆಗೆ ಇದರ ನಿರ್ವಹಣೆಗೆ ಸೂಕ್ತ ಗ್ರಂಥಪಾಲಕರಿಲ್ಲ. ಕಳೆದ 8-9 ವರ್ಷಗಳಿಂದ ಪುಸ್ತಕಗಳ ಪೂರೈಕೆ ಇಲ್ಲ. ಗ್ರಂಥಾಲಯಕ್ಕೆ ಸಿಬ್ಬಂದಿ ಇರದ ಕಾರಣ, ಇಲ್ಲಿ ಯುವಕರು ಇದನ್ನು ದುಶ್ಚಟಗಳ ತಾಣವಾಗಿ ಪರಿವರ್ತಿಸಿಕೊಂಡಿದ್ದಾರೆ. ಇದರಿಂದ ಗ್ರಂಥಾಲಯಕ್ಕೆ ಬರುವ ಕೆಲ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ತುಂಬಾ ತೊಂದರೆಯಾಗಿದೆ ಎಂದರು.</p>.<p>ಮಂಜುನಾಥ ಆರತಿ ಮಾತನಾಡಿ, ಈ ವಾರ್ಡ್ನಲ್ಲಿ ಅತಿ ಹೆಚ್ಚು ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳಿದ್ದು, ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆಯಾಗಲು, ಈ ಗ್ರಂಥಾಲಯಕ್ಕೆ ಬರುತ್ತಾರೆ. ಆದರೆ ಇದರು ಸದುಪಯೋಗ ವಿದ್ಯಾರ್ಥಿಗಳಿಗೆ ಸಿಗುತ್ತಿಲ್ಲ. ವಿದ್ಯಾರ್ಥಿಗಳಿಗೆ ಇಲ್ಲಿ ಸುಸಜ್ಜಿತ ಕಟ್ಟಡ ಜೊತೆಗೆ ಪಠ್ಯಪುಸ್ತಕಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳು, ದಿನ,ವಾರ, ಮಾಸಿಕ ಪತ್ರಿಕೆಗಳು ಬೇಕಾಗುತ್ತವೆ ಎಂದರು.</p>.<p>ಪೌರಾಯುಕ್ತರು ಕೂಡಲೆ ಎಚ್ಚೆತ್ತು ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದರು.</p>.<p>ಮುಖಂಡರಾದ ನಾಗಪ್ಪ ಸಂಗಟಿ, ಜಗದೀಶ, ಪಂಪಣ್ಣ ಮುಂಡಾಸ್ತ, ರಾಮಾಂಜಿನಿ ಜಿ, ನಾಗರಾಜ , ತೇಜು ನಾಯಕ, ಉಮೇಶ, ಹುಲ್ಲೇಶ, ವೀರೇಶ, ಮರಿಸ್ವಾಮಿ, ಹನುಮಂತಪ್ಪ ಮೂಳೆ, ಸುನೀಲ್ ಆರತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ: </strong>ಇಲ್ಲಿನ ಹಿರೇಜಂತಕಲ್ಲಿನ 28ನೇ (32) ವಾರ್ಡ್ನಲ್ಲಿರವ ಡಾ.ಬಿ.ಆರ್ ಅಂಬೇಡ್ಕರ್ ಗ್ರಂಥಾಲಯಕ್ಕೆ ಗ್ರಂಥಪಾಲಕರನ್ನು ನಿಯೋಜಿಸುವಂತೆ ಆಗ್ರಹಿಸಿ ಮುಖಂಡ ಹುಸೇನಪ್ಪ ಹಂಚಿನಾಳ ನೇತೃತ್ವದಲ್ಲಿ ನಿವಾಸಿಗಳು ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.</p>.<p>ನಂತರ ಮಾತನಾಡಿ, ಗ್ರಂಥಾಲಯ ನಿರ್ಮಾಣವಾಗಿ ಹಲವು ವರ್ಷಗಳು ಕಳೆದಿವೆ. ಈವರೆಗೆ ಇದರ ನಿರ್ವಹಣೆಗೆ ಸೂಕ್ತ ಗ್ರಂಥಪಾಲಕರಿಲ್ಲ. ಕಳೆದ 8-9 ವರ್ಷಗಳಿಂದ ಪುಸ್ತಕಗಳ ಪೂರೈಕೆ ಇಲ್ಲ. ಗ್ರಂಥಾಲಯಕ್ಕೆ ಸಿಬ್ಬಂದಿ ಇರದ ಕಾರಣ, ಇಲ್ಲಿ ಯುವಕರು ಇದನ್ನು ದುಶ್ಚಟಗಳ ತಾಣವಾಗಿ ಪರಿವರ್ತಿಸಿಕೊಂಡಿದ್ದಾರೆ. ಇದರಿಂದ ಗ್ರಂಥಾಲಯಕ್ಕೆ ಬರುವ ಕೆಲ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ತುಂಬಾ ತೊಂದರೆಯಾಗಿದೆ ಎಂದರು.</p>.<p>ಮಂಜುನಾಥ ಆರತಿ ಮಾತನಾಡಿ, ಈ ವಾರ್ಡ್ನಲ್ಲಿ ಅತಿ ಹೆಚ್ಚು ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳಿದ್ದು, ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆಯಾಗಲು, ಈ ಗ್ರಂಥಾಲಯಕ್ಕೆ ಬರುತ್ತಾರೆ. ಆದರೆ ಇದರು ಸದುಪಯೋಗ ವಿದ್ಯಾರ್ಥಿಗಳಿಗೆ ಸಿಗುತ್ತಿಲ್ಲ. ವಿದ್ಯಾರ್ಥಿಗಳಿಗೆ ಇಲ್ಲಿ ಸುಸಜ್ಜಿತ ಕಟ್ಟಡ ಜೊತೆಗೆ ಪಠ್ಯಪುಸ್ತಕಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳು, ದಿನ,ವಾರ, ಮಾಸಿಕ ಪತ್ರಿಕೆಗಳು ಬೇಕಾಗುತ್ತವೆ ಎಂದರು.</p>.<p>ಪೌರಾಯುಕ್ತರು ಕೂಡಲೆ ಎಚ್ಚೆತ್ತು ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದರು.</p>.<p>ಮುಖಂಡರಾದ ನಾಗಪ್ಪ ಸಂಗಟಿ, ಜಗದೀಶ, ಪಂಪಣ್ಣ ಮುಂಡಾಸ್ತ, ರಾಮಾಂಜಿನಿ ಜಿ, ನಾಗರಾಜ , ತೇಜು ನಾಯಕ, ಉಮೇಶ, ಹುಲ್ಲೇಶ, ವೀರೇಶ, ಮರಿಸ್ವಾಮಿ, ಹನುಮಂತಪ್ಪ ಮೂಳೆ, ಸುನೀಲ್ ಆರತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>