ಕೊಪ್ಪಳ: ಶಾಸಕ ಬಸವರಾಜ ದಢೇಸಗೂರ ವಿರುದ್ಧ ಕೇಳಿ ಬಂದಿರುವ ಆರೋಪ ತಳ್ಳಿ ಹಾಕುವುದಿಲ್ಲ. ಈ ಕುರಿತು ವಿಚಾರಣೆ ನಡೆಯಲಿ ಎಂದು ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಪ್ರತಿಕ್ರಿಯಿಸಿದರು.
ಮಾಧ್ಯಮಗಳ ಜೊತೆ ಸೋಮವಾರ ಮಾತನಾಡಿ 'ದಢೇಸಗೂರ ಜೊತೆ ಮಾತನಾಡಿದ್ದೇನೆ. ಯಾರಿಂದಲೂ ಹಣ ಪಡೆದಿಲ್ಲ ಎಂದು ಹೇಳಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ತನಿಖೆ ನಡೆಯಲಿ. ಯಾರನ್ನೂ ಸಮರ್ಥಿಸಿಕೊಳ್ಳುವುದಿಲ್ಲ' ಎಂದರು.