ಕೊಪ್ಪಳ: ‘ಪಿಎಸ್ಐ ನೇಮಕಾತಿ ಹಗರಣದಲ್ಲಿ ಕನಕಗಿರಿಯ ಬಿಜೆಪಿ ಶಾಸಕ ಬಸವರಾಜ ದಢೇಸೂಗೂರು ಹೆಸರು ಕೇಳಿ ಬಂದಿದ್ದು, ಅವರನ್ನು ಸೆಪ್ಟೆಂಬರ್ 12ರೊಳಗೆ ಸರ್ಕಾರ ಬಂಧಿಸಬೇಕು. ಇಲ್ಲದಿದ್ದರೆ, ಕನಕಗಿರಿ ಕ್ಷೇತ್ರದಿಂದ ಪಾದಯಾತ್ರೆ ಮಾಡಲಾಗುವುದು’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ತಂಗಡಗಿ ಹೇಳಿದರು.