<p><strong>ಕುಕನೂರು</strong>: ‘ಕುಕನೂರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗುರುರಾಜ್ ಟಿ. ವರ್ತನೆ ಸರಿ ಇಲ್ಲ. ಇಲ್ಲಿನ ಶಾಸಕರ ಕುಮ್ಮಕ್ಕಿನಿಂದ ಜನಸಾಮಾನ್ಯರು ಹಾಗೂ ರೈತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ’ ಎಂದು ಬಿಜೆಪಿ ಮುಖಂಡ ಗುಂಗಾಡಿ ಶರಣಪ್ಪ ಆರೋಪಿಸಿದ್ದಾರೆ.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಖಾಸಗಿ ವಿದ್ಯುತ್ ಉತ್ಪಾದನೆ ಮಾಡುವ ಕಂಪನಿಗಳ ಹಾವಳಿ ಹೆಚ್ಚಾಗಿದ್ದು, ರೈತರಿಗೆ ಭರವಸೆಗಳನ್ನು ನೀಡಿ ಭೂಮಿ ಕಬಳಿಸಲಾಗುತ್ತಿದೆ. ಈ ಭಾಗದಲ್ಲಿ ₹ 1,000 ಕೋಟಿ ಅವ್ಯವಹಾರ ನಡೆದಿದೆ. ಇದಕ್ಕೆ ಮುಂದಿನ ದಿನದಲ್ಲಿ ಸೂಕ್ತ ದಾಖಲೆಗಳೊಂದಿಗೆ ದೊಡ್ಡಮಟ್ಟದ ಹೋರಾಟ ಮಾಡುತ್ತೇವೆ’ ಎಂದು ಹೇಳಿದರು.</p>.<p>‘ಇತ್ತೀಚಿಗೆ ತಾಲ್ಲೂಕಿನ ಕೋಳಿಹಾಳ ಗ್ರಾಮದಲ್ಲಿ ಸ್ಥಳೀಯ ರೈತರು ಹಾಗೂ ಸರೆಂಟಿಕಾ ವಿಂಡ್ ಫ್ಯಾನ್ ಕಂಪನಿಯವರ ಜೊತೆ ಮಾತಿನ ಚಕಮಕಿ ನಡೆಯುವ ವೇಳೆ ಸಿಪಿಐ ಮೌನೇಶ್ವರ ಪಾಟೀಲ್ ಹಾಗೂ ಕುಕನೂರು ಪಿಎಸ್ಐ ಗುರುರಾಜ್ ಟಿ. ಮಧ್ಯಸ್ಥಿಕೆ ವಹಿಸಿದ್ದಾರೆ. ಈ ವೇಳೆ ನನ್ನ ಹಾಗೂ ಪಿಎಸ್ಐ ಗುರುರಾಜ ಅವರ ನಡುವೆ ವಾಗ್ವಾದವಾಗಿದ್ದು ತೀವ್ರ ಹಂತಕ್ಕೆ ಹೋಗಿ ನನ್ನನ್ನು ಬಂಧಿಸಲಾಯಿತು’ ಎಂದು ಶರಣಪ್ಪ ಹೇಳಿದರು.</p>.<p>‘ನನ್ನನ್ನು ವೈಯಕ್ತಿಕವಾಗಿ ಗುರಿಯಾಗಿಟ್ಟುಕೊಂಡು ಎಂಟು ತಾಸು ಪೊಲೀಸ್ ಠಾಣೆಯಲ್ಲಿ ಇಟ್ಟುಕೊಂಡು ನಂತರ ನ್ಯಾಯಾಲಯಕ್ಕೆ ಕಳಿಸಿದ್ದಾರೆ. ನನ್ನ ಹೋರಾಟಕ್ಕೆ ಪಕ್ಷದ ನಾಯಕರ ಬೆಂಬಲವಿದೆ. ಮುಂದೆ ಅವರ ನೆರವಿನೊಂದಿಗೆ ಹೋರಾಟ ಮಾಡುತ್ತೇನೆ’ ಎಂದು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಕನೂರು</strong>: ‘ಕುಕನೂರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗುರುರಾಜ್ ಟಿ. ವರ್ತನೆ ಸರಿ ಇಲ್ಲ. ಇಲ್ಲಿನ ಶಾಸಕರ ಕುಮ್ಮಕ್ಕಿನಿಂದ ಜನಸಾಮಾನ್ಯರು ಹಾಗೂ ರೈತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ’ ಎಂದು ಬಿಜೆಪಿ ಮುಖಂಡ ಗುಂಗಾಡಿ ಶರಣಪ್ಪ ಆರೋಪಿಸಿದ್ದಾರೆ.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಖಾಸಗಿ ವಿದ್ಯುತ್ ಉತ್ಪಾದನೆ ಮಾಡುವ ಕಂಪನಿಗಳ ಹಾವಳಿ ಹೆಚ್ಚಾಗಿದ್ದು, ರೈತರಿಗೆ ಭರವಸೆಗಳನ್ನು ನೀಡಿ ಭೂಮಿ ಕಬಳಿಸಲಾಗುತ್ತಿದೆ. ಈ ಭಾಗದಲ್ಲಿ ₹ 1,000 ಕೋಟಿ ಅವ್ಯವಹಾರ ನಡೆದಿದೆ. ಇದಕ್ಕೆ ಮುಂದಿನ ದಿನದಲ್ಲಿ ಸೂಕ್ತ ದಾಖಲೆಗಳೊಂದಿಗೆ ದೊಡ್ಡಮಟ್ಟದ ಹೋರಾಟ ಮಾಡುತ್ತೇವೆ’ ಎಂದು ಹೇಳಿದರು.</p>.<p>‘ಇತ್ತೀಚಿಗೆ ತಾಲ್ಲೂಕಿನ ಕೋಳಿಹಾಳ ಗ್ರಾಮದಲ್ಲಿ ಸ್ಥಳೀಯ ರೈತರು ಹಾಗೂ ಸರೆಂಟಿಕಾ ವಿಂಡ್ ಫ್ಯಾನ್ ಕಂಪನಿಯವರ ಜೊತೆ ಮಾತಿನ ಚಕಮಕಿ ನಡೆಯುವ ವೇಳೆ ಸಿಪಿಐ ಮೌನೇಶ್ವರ ಪಾಟೀಲ್ ಹಾಗೂ ಕುಕನೂರು ಪಿಎಸ್ಐ ಗುರುರಾಜ್ ಟಿ. ಮಧ್ಯಸ್ಥಿಕೆ ವಹಿಸಿದ್ದಾರೆ. ಈ ವೇಳೆ ನನ್ನ ಹಾಗೂ ಪಿಎಸ್ಐ ಗುರುರಾಜ ಅವರ ನಡುವೆ ವಾಗ್ವಾದವಾಗಿದ್ದು ತೀವ್ರ ಹಂತಕ್ಕೆ ಹೋಗಿ ನನ್ನನ್ನು ಬಂಧಿಸಲಾಯಿತು’ ಎಂದು ಶರಣಪ್ಪ ಹೇಳಿದರು.</p>.<p>‘ನನ್ನನ್ನು ವೈಯಕ್ತಿಕವಾಗಿ ಗುರಿಯಾಗಿಟ್ಟುಕೊಂಡು ಎಂಟು ತಾಸು ಪೊಲೀಸ್ ಠಾಣೆಯಲ್ಲಿ ಇಟ್ಟುಕೊಂಡು ನಂತರ ನ್ಯಾಯಾಲಯಕ್ಕೆ ಕಳಿಸಿದ್ದಾರೆ. ನನ್ನ ಹೋರಾಟಕ್ಕೆ ಪಕ್ಷದ ನಾಯಕರ ಬೆಂಬಲವಿದೆ. ಮುಂದೆ ಅವರ ನೆರವಿನೊಂದಿಗೆ ಹೋರಾಟ ಮಾಡುತ್ತೇನೆ’ ಎಂದು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>