<p><strong>ಕುಷ್ಟಗಿ (ಕೊಪ್ಪಳ ಜಿಲ್ಲೆ): </strong>ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿ ಹಮಾಲಿಯಾಗಿ ಕೆಲಸ ಮಾಡುತ್ತಿದ್ದ ದಿ.ಗ್ಯಾನಪ್ಪ ಗದ್ದಿ ಅವರ ಪುತ್ರ, ಮೂಡಬಿದರೆಯ ಆಳ್ವಾಸ್ ಜೂನಿಯರ್ ಕಾಲೇಜಿನ ವಿದ್ಯಾರ್ಥಿಯಾಗಿರುವ ವಿನಾಯಕ ಗದ್ದಿ ಅವರು, ದ್ವಿತೀಯ ಪಿಯು ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಶೇ 98ರಷ್ಟು ಅಂಕ ಪಡೆದಿದ್ದಾರೆ.</p>.<p>ಕನ್ನಡದಲ್ಲಿ 97, ಇಂಗ್ಲೀಷ್ 94, ಭೌತಶಾಸ್ತ್ರ 98, ರಸಾಯನ ಮತ್ತು ಜೀವಶಾಸ್ತ್ರದಲ್ಲಿ ತಲಾ 100 ಮತ್ತು ಗಣಿತ ವಿಷಯದಲ್ಲಿ 99 ಸೇರಿ ಒಟ್ಟು 588 ಅಂಕಗಳನ್ನು ಪಡೆಯುವ ಮೂಲಕ ರಾಜ್ಯದ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.</p>.<p>‘ವಿನಾಯಕ ಗದ್ದಿ ಅವರ ತಂದೆ ಗ್ಯಾನಪ್ಪ ಗದ್ದಿ ಈಚೆಗೆ ಮೃತಪಟ್ಟಿದ್ದಾರೆ. ಅವರು ತಮ್ಮ 9 ಮಕ್ಕಳಿಗೂ ಉತ್ತಮ ವಿದ್ಯೆ ಕೊಡಿಸುವ ಆಶಯ ಹೊಂದಿದ್ದರು. 4 ಮಕ್ಕಳು ಉನ್ನತ ವ್ಯಾಸಂಗ ಪಡೆಯುತ್ತಿದ್ದಾರೆ. ಕೊನೆಯ ಪುತ್ರ ವಿನಾಯಕ ಪಿಯು ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾನೆ‘ ಎಂದು ತಾಯಿ ಹನುಮವ್ವ ಗದ್ದಿ ಹೇಳಿದರು.</p>.<p>ಮಗನನ್ನು ವೈದ್ಯನನ್ನಾಗಿ ಮಾಡಬೇಕು ಎಂಬ ಆಸೆ ಎಂದು ಹನುಮವ್ವ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ (ಕೊಪ್ಪಳ ಜಿಲ್ಲೆ): </strong>ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿ ಹಮಾಲಿಯಾಗಿ ಕೆಲಸ ಮಾಡುತ್ತಿದ್ದ ದಿ.ಗ್ಯಾನಪ್ಪ ಗದ್ದಿ ಅವರ ಪುತ್ರ, ಮೂಡಬಿದರೆಯ ಆಳ್ವಾಸ್ ಜೂನಿಯರ್ ಕಾಲೇಜಿನ ವಿದ್ಯಾರ್ಥಿಯಾಗಿರುವ ವಿನಾಯಕ ಗದ್ದಿ ಅವರು, ದ್ವಿತೀಯ ಪಿಯು ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಶೇ 98ರಷ್ಟು ಅಂಕ ಪಡೆದಿದ್ದಾರೆ.</p>.<p>ಕನ್ನಡದಲ್ಲಿ 97, ಇಂಗ್ಲೀಷ್ 94, ಭೌತಶಾಸ್ತ್ರ 98, ರಸಾಯನ ಮತ್ತು ಜೀವಶಾಸ್ತ್ರದಲ್ಲಿ ತಲಾ 100 ಮತ್ತು ಗಣಿತ ವಿಷಯದಲ್ಲಿ 99 ಸೇರಿ ಒಟ್ಟು 588 ಅಂಕಗಳನ್ನು ಪಡೆಯುವ ಮೂಲಕ ರಾಜ್ಯದ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.</p>.<p>‘ವಿನಾಯಕ ಗದ್ದಿ ಅವರ ತಂದೆ ಗ್ಯಾನಪ್ಪ ಗದ್ದಿ ಈಚೆಗೆ ಮೃತಪಟ್ಟಿದ್ದಾರೆ. ಅವರು ತಮ್ಮ 9 ಮಕ್ಕಳಿಗೂ ಉತ್ತಮ ವಿದ್ಯೆ ಕೊಡಿಸುವ ಆಶಯ ಹೊಂದಿದ್ದರು. 4 ಮಕ್ಕಳು ಉನ್ನತ ವ್ಯಾಸಂಗ ಪಡೆಯುತ್ತಿದ್ದಾರೆ. ಕೊನೆಯ ಪುತ್ರ ವಿನಾಯಕ ಪಿಯು ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾನೆ‘ ಎಂದು ತಾಯಿ ಹನುಮವ್ವ ಗದ್ದಿ ಹೇಳಿದರು.</p>.<p>ಮಗನನ್ನು ವೈದ್ಯನನ್ನಾಗಿ ಮಾಡಬೇಕು ಎಂಬ ಆಸೆ ಎಂದು ಹನುಮವ್ವ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>