<p><strong>ಯಲಬುರ್ಗಾ: </strong>ಶಾಲಾ ಪೂರ್ವ ಶಿಕ್ಷಣ ಬಲವರ್ಧನೆಗೊಳಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ದೊಡ್ಡದು. ಈ ಹಿನ್ನೆಲೆಯಲ್ಲಿ ಹೆಚ್ಚು ಕ್ರಿಯಾಶೀಲತೆ ಮುಖ್ಯ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಜಯರಾಂ ಚವ್ಹಾಣ ಹೇಳಿದರು.</p>.<p>ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ 3ನೇ ಹಂತದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮಕ್ಕಳು ಹೆಚ್ಚು ಚಟುವಟಕೆಯಿಂದ ಆರೋಗ್ಯವಾಗಿ<br />ರುವಂತೆ ನೋಡಿಕೊಳ್ಳುವ ಜವಾಬ್ದಾರಿ ಕಾರ್ಯಕರ್ತೆಯರ ಮೇಲಿರುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಶಾಲಾ ಪೂರ್ಣ ಶಿಕ್ಷಣ ಬಲವರ್ಧನಾ ಕಾರ್ಯಕ್ರಮ ಆಯೋಜಿಸಿದೆ ಎಂದರು.</p>.<p>ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಉಮೇಶ ಹಿರೇಮಠ ಮಾತನಾಡಿ,‘ಮಕ್ಕಳ ಆರೋಗ್ಯದ ಜತೆಗೆ ಕಲಿಕಾ ಚಟುವಟಿಕೆಯು ಸರಿಯಾದ ರೀತಿಯಲ್ಲಿ ನಡೆಯುವಂತೆ ನೋಡಿಕೊಳ್ಳುವುದು ಅವಶ್ಯಕ’ ಎಂದರು.</p>.<p>ಸಿಡಿಪಿಒ ವಿರೂಪಾಕ್ಷಯ್ಯ ಮಾತನಾಡಿದರು.</p>.<p>ಅಂಗನವಾಡಿ ಕೇಂದ್ರದ ಹಿರಿಯ ಮೇಲ್ವಿಚಾರಕಿ ಲಲಿತಾ ನಾಯಕ ಮಾತನಾಡಿದರು. ಸರ್ಕಾರಿ ಪ್ರೌಢ ಶಾಲೆ ಮುಖ್ಯೋಪಾಧ್ಯಾಯ ದುರಗಪ್ಪ, ಅಂಗವಾಡಿ ಮೇಲ್ವಿಚಾರಕರಾದ ಮಾಧವಿ ವೈದ್ಯ, ಚೆನ್ನಮ್ಮ ಶ್ಯಾನಭೋಗರ ಹಾಗೂ ಜಯಲಕ್ಷ್ಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ: </strong>ಶಾಲಾ ಪೂರ್ವ ಶಿಕ್ಷಣ ಬಲವರ್ಧನೆಗೊಳಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ದೊಡ್ಡದು. ಈ ಹಿನ್ನೆಲೆಯಲ್ಲಿ ಹೆಚ್ಚು ಕ್ರಿಯಾಶೀಲತೆ ಮುಖ್ಯ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಜಯರಾಂ ಚವ್ಹಾಣ ಹೇಳಿದರು.</p>.<p>ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ 3ನೇ ಹಂತದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮಕ್ಕಳು ಹೆಚ್ಚು ಚಟುವಟಕೆಯಿಂದ ಆರೋಗ್ಯವಾಗಿ<br />ರುವಂತೆ ನೋಡಿಕೊಳ್ಳುವ ಜವಾಬ್ದಾರಿ ಕಾರ್ಯಕರ್ತೆಯರ ಮೇಲಿರುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಶಾಲಾ ಪೂರ್ಣ ಶಿಕ್ಷಣ ಬಲವರ್ಧನಾ ಕಾರ್ಯಕ್ರಮ ಆಯೋಜಿಸಿದೆ ಎಂದರು.</p>.<p>ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಉಮೇಶ ಹಿರೇಮಠ ಮಾತನಾಡಿ,‘ಮಕ್ಕಳ ಆರೋಗ್ಯದ ಜತೆಗೆ ಕಲಿಕಾ ಚಟುವಟಿಕೆಯು ಸರಿಯಾದ ರೀತಿಯಲ್ಲಿ ನಡೆಯುವಂತೆ ನೋಡಿಕೊಳ್ಳುವುದು ಅವಶ್ಯಕ’ ಎಂದರು.</p>.<p>ಸಿಡಿಪಿಒ ವಿರೂಪಾಕ್ಷಯ್ಯ ಮಾತನಾಡಿದರು.</p>.<p>ಅಂಗನವಾಡಿ ಕೇಂದ್ರದ ಹಿರಿಯ ಮೇಲ್ವಿಚಾರಕಿ ಲಲಿತಾ ನಾಯಕ ಮಾತನಾಡಿದರು. ಸರ್ಕಾರಿ ಪ್ರೌಢ ಶಾಲೆ ಮುಖ್ಯೋಪಾಧ್ಯಾಯ ದುರಗಪ್ಪ, ಅಂಗವಾಡಿ ಮೇಲ್ವಿಚಾರಕರಾದ ಮಾಧವಿ ವೈದ್ಯ, ಚೆನ್ನಮ್ಮ ಶ್ಯಾನಭೋಗರ ಹಾಗೂ ಜಯಲಕ್ಷ್ಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>