ಕಾರಟಗಿ (ಕೊಪ್ಪಳ ಜಿಲ್ಲೆ): ಪ್ರಧಾನಿ ನರೇಂದ್ರ ಮೋದಿ ಅವರು ದೇವರ ಭಕ್ತರಾಗಿದ್ದರೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣಾ ಭಕ್ತ ಎಂದು ಬಿಜೆಪಿಯ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಲೇವಡಿ ಮಾಡಿದರು.
ಪಟ್ಟಣದಲ್ಲಿ ಬಿಜೆಪಿ ಶಕ್ತಿ ಕೇಂದ್ರ ಹಮ್ಮಿಕೊಂಡಿದ್ದ ಪ್ರಚಾರಸಭೆಯಲ್ಲಿ ಮಾತನಾಡಿದ ಅವರು, :ರಾಹುಲ್ ಗಾಂಧಿ ಚುನಾವಣೆಗೋಸ್ಕರ ಹಿಂದೂ ಆಗುತ್ತಾರೆ. ಪ್ರಧಾನಿ ಮೋದಿ ಶ್ರದ್ಧಾವಂತ ಹಿಂದೂ ಆಗಿದ್ದಾರೆ’ ಎಂದರು.
‘ರಾಹುಲ್ ಗಾಂಧಿ ಪಂಚೆ ಕಟ್ಟಿಕೊಂಡು ದೇವಸ್ಥಾನಕ್ಕೆ ಹೋದರೆ ಜೋಕರ್ ಹೋದ ಹಾಗೆ ಆಗುತ್ತದೆ. ಗಂಡ ಇದ್ದರೂ ಪ್ರಿಯಾಂಕಾ ಗಾಂಧಿ ಹಣೆ ಮೇಲೆ ಕುಂಕುಮ ಇರಲಿಲ್ಲ. ಬೇಕಾದರೆ ಆರು ತಿಂಗಳ ಹಿಂದಿನಭಾವಚಿತ್ರ ನೋಡಿ. ಇದೀಗಚುನಾವಣೆಗಾಗಿ ಹಣೆ ಮೇಲೆ ತಿಲಕ ಕಾಣುತ್ತಿದೆ’ ಎಂದು ವ್ಯಂಗ್ಯ ಮಾಡಿದರು.