<p><strong>ಯಲಬುರ್ಗಾ:</strong> ‘ಲಾಕ್ಡೌನ್ ವೇಳೆ ಅಗತ್ಯ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಕಾನೂನು ಮತ್ತು ಮಾಪನಶಾಸ್ತ್ರ ಇಲಾಖೆ ಅಧಿಕಾರಿ ಎಂ.ಬದಿಯೂದ್ದೀನ್ ಅಹ್ಮದ್ ಹೇಳಿದರು.</p>.<p>ಪಟ್ಟಣದ ವಿವಿಧ ದಿನಸಿ ಅಂಗಡಿ ಹಾಗೂ ಇನ್ನಿತರ ವ್ಯಾಪಾರಸ್ಥರ ಬಳಿ ಹೋಗಿ ದರಗಳ ಕುರಿತು ಮಾಹಿತಿ ಪಡೆದು ಮಾತನಾಡಿದರು.</p>.<p>ತೂಕದಲ್ಲಿ ಮೋಸ ಮಾಡಬಾರದು. ಕೋವಿಡ್ ಮಾರ್ಗಸೂಚಿಯನ್ನು ಪಾಲಿಸುವ ಕೆಲಸ ಮಾಡಬೇಕು ಎಂದರು.</p>.<p>ಕೆಲ ವ್ಯಾಪಾರಿಗಳು ಲಾಕ್ಡೌನ್ ಸಂದರ್ಭ ದುರ್ಬಳಕೆ ಮಾಡಿಕೊಳ್ಳುತ್ತಿರುವ ಕುರಿತು ಕಚೇರಿಗೆ ದೂರುಗಳು ಬಂದಿವೆ. ಅಂಗಡಿ ಮುಚ್ಚಿದ್ದ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಬಂದ ಗ್ರಾಹಕರ ಅವಶ್ಯಕತೆಯನ್ನು ದುರುಪಯೋಗಪಡಿಸಿ<br />ಕೊಳ್ಳುತ್ತಿರುವ ವ್ಯಾಪಾರಿಗಳ ಪರವಾನಿಗೆ ರದ್ಧುಪಡಿಸಬೇಕಾಗುತ್ತದೆ. ದೇಶದ ಜನತೆ ಕೋವಿಡ್ದಿಂದ ನರಳುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಅಧಿಕ ಬೆಲೆಗೆ ವಸ್ತುಗಳನ್ನು ಮಾರಾಟ ಮಾಡುವುದು ಸರಿಯಲ್ಲ. ವ್ಯವಹಾರದ ನೈತಿಕತೆಯಲ್ಲ. ವ್ಯಾಪಾರಸ್ಥರಲ್ಲಿಯೂ ನೀತಿ ನಿಯತ್ತು ಇರುವುದು ಮುಖ್ಯ ಎಂದು ಅಭಿಪ್ರಾಯಪಟ್ಟರು.</p>.<p>ಪಟ್ಟಣ ಪಂಚಾಯಿತಿ ಸಿಬ್ಬಂದಿ ಹಾಗೂ ಮಾಪನ ಇಲಾಖೆಯ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ:</strong> ‘ಲಾಕ್ಡೌನ್ ವೇಳೆ ಅಗತ್ಯ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಕಾನೂನು ಮತ್ತು ಮಾಪನಶಾಸ್ತ್ರ ಇಲಾಖೆ ಅಧಿಕಾರಿ ಎಂ.ಬದಿಯೂದ್ದೀನ್ ಅಹ್ಮದ್ ಹೇಳಿದರು.</p>.<p>ಪಟ್ಟಣದ ವಿವಿಧ ದಿನಸಿ ಅಂಗಡಿ ಹಾಗೂ ಇನ್ನಿತರ ವ್ಯಾಪಾರಸ್ಥರ ಬಳಿ ಹೋಗಿ ದರಗಳ ಕುರಿತು ಮಾಹಿತಿ ಪಡೆದು ಮಾತನಾಡಿದರು.</p>.<p>ತೂಕದಲ್ಲಿ ಮೋಸ ಮಾಡಬಾರದು. ಕೋವಿಡ್ ಮಾರ್ಗಸೂಚಿಯನ್ನು ಪಾಲಿಸುವ ಕೆಲಸ ಮಾಡಬೇಕು ಎಂದರು.</p>.<p>ಕೆಲ ವ್ಯಾಪಾರಿಗಳು ಲಾಕ್ಡೌನ್ ಸಂದರ್ಭ ದುರ್ಬಳಕೆ ಮಾಡಿಕೊಳ್ಳುತ್ತಿರುವ ಕುರಿತು ಕಚೇರಿಗೆ ದೂರುಗಳು ಬಂದಿವೆ. ಅಂಗಡಿ ಮುಚ್ಚಿದ್ದ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಬಂದ ಗ್ರಾಹಕರ ಅವಶ್ಯಕತೆಯನ್ನು ದುರುಪಯೋಗಪಡಿಸಿ<br />ಕೊಳ್ಳುತ್ತಿರುವ ವ್ಯಾಪಾರಿಗಳ ಪರವಾನಿಗೆ ರದ್ಧುಪಡಿಸಬೇಕಾಗುತ್ತದೆ. ದೇಶದ ಜನತೆ ಕೋವಿಡ್ದಿಂದ ನರಳುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಅಧಿಕ ಬೆಲೆಗೆ ವಸ್ತುಗಳನ್ನು ಮಾರಾಟ ಮಾಡುವುದು ಸರಿಯಲ್ಲ. ವ್ಯವಹಾರದ ನೈತಿಕತೆಯಲ್ಲ. ವ್ಯಾಪಾರಸ್ಥರಲ್ಲಿಯೂ ನೀತಿ ನಿಯತ್ತು ಇರುವುದು ಮುಖ್ಯ ಎಂದು ಅಭಿಪ್ರಾಯಪಟ್ಟರು.</p>.<p>ಪಟ್ಟಣ ಪಂಚಾಯಿತಿ ಸಿಬ್ಬಂದಿ ಹಾಗೂ ಮಾಪನ ಇಲಾಖೆಯ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>