<p><strong>ಕೊಪ್ಪಳ</strong>: ತಾಲ್ಲೂಕಿನ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಗದ್ದಲ ಉಂಟಾಗಿದ್ದು, ಕೇಂದ್ರ ಸಚಿವ ವಿ. ಸೋಮಣ್ಣ ಅವರತ್ತ ಕುರ್ಚಿ ಎಸೆಯಲು ಯತ್ನಿಸಿದ ಘಟನೆ ನಡೆದಿದೆ.</p><p>ಸಂಸದ ಕೆ. ರಾಜಶೇಖರ್ ಹಿಟ್ನಾಲ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರ ಹೆಸರನ್ನು ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಸೇರಿಸಿಲ್ಲ ಎಂಬುದು ಗದ್ದಲಕ್ಕೆ ಕಾರಣವಾಗಿದೆ.</p><p>ಕಾರ್ಯಕ್ರಮದ ವೇಳೆ ಶಿಷ್ಠಾಚಾರ ಉಲ್ಲಂಘನೆಯಾಗಿದೆ ಎಂದು ದೂರಿದ ಕಾಂಗ್ರೆಸ್ ಕಾರ್ಯಕರ್ತರು, ಕುರ್ಚಿ ಬಿಸಾಡಿದ್ದು ಮಾತ್ರವಲ್ಲದೆ ಸೋಮಣ್ಣ ಅವರ ಕಾರಿಗೂ ಅಡ್ಡಿಪಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಸೋಮಣ್ಣ ಅವರತ್ತಲೂ ಕುರ್ಚಿ ಎಸೆಯಲಾಗಿದೆ. ಆದರೆ, ಅವರ ಅಂಗರಕ್ಷಕರು ಅದನ್ನು ತಡೆದಿದ್ದಾರೆ. ಗದ್ದಲ ಸೃಷ್ಟಿಯಾದ ಕಾರಣ, ಸೋಮಣ್ಣ ಅವರು ಕೇವಲ ಐದೇ ನಿಮಿಷಗಳಲ್ಲಿ ವಾಪಸ್ ತೆರಳಿದ್ದಾರೆ.</p><p>ಹಿಟ್ಬಾಳ, ಮುನಿರಾಬಾದ್ ಹಾಗೂ ಗಿಣಗೇರಾ ಸಂಪರ್ಕಿಸುವ ಎಲ್ಸಿ ಸಂಖ್ಯೆ 77 ಮಾರ್ಗದ ಬದಲಿಗೆ, ₹ 27 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ನಡೆಸಲಾಗುತ್ತಿದೆ. </p><p>ಘಟನೆ ಕುರಿತು ಪ್ರತಿಕ್ರಿಯಿಸಿರುವ ಸೋಮಣ್ಣ, ಕಾಮಗಾರಿಯ ಸಂಪೂರ್ಣ ವೆಚ್ಚ ಕೇಂದ್ರ ಸರ್ಕಾರದ್ದು. ಕಾರ್ಯಕ್ರಮದ ಸಂಬಂಧ ಯಾವುದೇ ಶಿಷ್ಠಾಚಾರ ಉಲ್ಲಂಘನೆಯಾಗಿಲ್ಲ. ಉದ್ದೇಶಪೂರ್ವಕವಾಗಿ ಗಲಾಟೆ ಮಾಡಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ತಾಲ್ಲೂಕಿನ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಗದ್ದಲ ಉಂಟಾಗಿದ್ದು, ಕೇಂದ್ರ ಸಚಿವ ವಿ. ಸೋಮಣ್ಣ ಅವರತ್ತ ಕುರ್ಚಿ ಎಸೆಯಲು ಯತ್ನಿಸಿದ ಘಟನೆ ನಡೆದಿದೆ.</p><p>ಸಂಸದ ಕೆ. ರಾಜಶೇಖರ್ ಹಿಟ್ನಾಲ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರ ಹೆಸರನ್ನು ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಸೇರಿಸಿಲ್ಲ ಎಂಬುದು ಗದ್ದಲಕ್ಕೆ ಕಾರಣವಾಗಿದೆ.</p><p>ಕಾರ್ಯಕ್ರಮದ ವೇಳೆ ಶಿಷ್ಠಾಚಾರ ಉಲ್ಲಂಘನೆಯಾಗಿದೆ ಎಂದು ದೂರಿದ ಕಾಂಗ್ರೆಸ್ ಕಾರ್ಯಕರ್ತರು, ಕುರ್ಚಿ ಬಿಸಾಡಿದ್ದು ಮಾತ್ರವಲ್ಲದೆ ಸೋಮಣ್ಣ ಅವರ ಕಾರಿಗೂ ಅಡ್ಡಿಪಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಸೋಮಣ್ಣ ಅವರತ್ತಲೂ ಕುರ್ಚಿ ಎಸೆಯಲಾಗಿದೆ. ಆದರೆ, ಅವರ ಅಂಗರಕ್ಷಕರು ಅದನ್ನು ತಡೆದಿದ್ದಾರೆ. ಗದ್ದಲ ಸೃಷ್ಟಿಯಾದ ಕಾರಣ, ಸೋಮಣ್ಣ ಅವರು ಕೇವಲ ಐದೇ ನಿಮಿಷಗಳಲ್ಲಿ ವಾಪಸ್ ತೆರಳಿದ್ದಾರೆ.</p><p>ಹಿಟ್ಬಾಳ, ಮುನಿರಾಬಾದ್ ಹಾಗೂ ಗಿಣಗೇರಾ ಸಂಪರ್ಕಿಸುವ ಎಲ್ಸಿ ಸಂಖ್ಯೆ 77 ಮಾರ್ಗದ ಬದಲಿಗೆ, ₹ 27 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ನಡೆಸಲಾಗುತ್ತಿದೆ. </p><p>ಘಟನೆ ಕುರಿತು ಪ್ರತಿಕ್ರಿಯಿಸಿರುವ ಸೋಮಣ್ಣ, ಕಾಮಗಾರಿಯ ಸಂಪೂರ್ಣ ವೆಚ್ಚ ಕೇಂದ್ರ ಸರ್ಕಾರದ್ದು. ಕಾರ್ಯಕ್ರಮದ ಸಂಬಂಧ ಯಾವುದೇ ಶಿಷ್ಠಾಚಾರ ಉಲ್ಲಂಘನೆಯಾಗಿಲ್ಲ. ಉದ್ದೇಶಪೂರ್ವಕವಾಗಿ ಗಲಾಟೆ ಮಾಡಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>