ಗಂಗಾವತಿ: ತಾಲ್ಲೂಕಿನಲ್ಲಿ ಮಂಗಳವಾರ ರಾತ್ರಿ ಹಾಗೂ ಬುಧವಾರ ಬೆಳಗಿನ ಜಾವ ಮಳೆ ಸುರಿದಿದೆ.
ನಗರದಲ್ಲಿ ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿಯಿತು.
ಗ್ರಾಮೀಣ ಪ್ರದೇಶದಲ್ಲೂ ಮಳೆಯಾಗಿದೆ. ಕಟಾವು ಮಾಡಿ ಜಮೀನುಗಳಲ್ಲಿ ರಾಶಿ ಮಾಡಿದ್ದ ಭತ್ತಕ್ಕೆ ನೀರು ನುಗ್ಗಿ ಹಾನಿಯಾಗಿದೆ. ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತ ಸ್ಥಿತಿ ನಿರ್ಮಾಣವಾಗಿದೆ.