ವಿವಿಧ ರೈತರ ತೋಟಗಳಿಗೆ ತಹಶೀಲ್ದಾರ್ ರವಿ ಅಂಗಡಿ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಿವಯೋಗಿ ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು ರಭಸವಾದ ಗಾಳಿಗೆ ತಾಲ್ಲೂಕಿನಲ್ಲಿ ಬೆಳೆದ ಪಪ್ಪಾಯ, ದಾಳಿಂಬೆ, ಮಾವು ಹಾಗೂ ಬಾಳೆ ಸೇರಿ 250 ಎಕರೆ ತೋಟಗಾರಿಕೆ ಬೆಳೆ ನಾಶವಾಗಿದೆ. ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದ್ದು,ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದರು.